ಪಕ್ಷದ ಶಿಸ್ತು, ಸಿದ್ದಾಂತಕ್ಕೆ ಬದ್ಧತೆ ಮುಖ್ಯ: ಯಡಿಯೂರಪ್ಪ

KannadaprabhaNewsNetwork |  
Published : May 27, 2025, 11:50 PM IST
ಬಿ.ಎಸ್‌.ಯಡಿಯೂರಪ್ಪ | Kannada Prabha

ಸಾರಾಂಶ

‘ಪಕ್ಷದ ಶಿಸ್ತು, ತತ್ವ, ಸಿದ್ಧಾಂತ ಮತ್ತು ನಾಯಕತ್ವಕ್ಕೆ ಎಲ್ಲರೂ ಬದ್ಧರಾಗಿರಲೇಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತೀಕ್ಷ್ಣವಾಗಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

‘ಪಕ್ಷದ ಶಿಸ್ತು, ತತ್ವ, ಸಿದ್ಧಾಂತ ಮತ್ತು ನಾಯಕತ್ವಕ್ಕೆ ಎಲ್ಲರೂ ಬದ್ಧರಾಗಿರಲೇಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತೀಕ್ಷ್ಣವಾಗಿ ಹೇಳಿದ್ದಾರೆ.

ಬಿಜೆಪಿಯ ನಿಜವಾದ ಶಕ್ತಿಯೇ ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಹಲವು ಬಾರಿ ಎಚ್ಚರಿಕೆ ನೀಡಲಾಗಿದ್ದರೂ ಪಕ್ಷ ವಿರೋಧಿ ಚಟುವಟಿಕೆಗಳನ್ನು ಮುಂದುವರೆಸಿದ್ದ ಎಸ್‌.ಟಿ.ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್ ಅವರನ್ನು ಪಕ್ಷದಿಂದ ಉಚ್ಚಾಟಿಸುವ ನಿರ್ಧಾರವನ್ನು ಕೇಂದ್ರ ಶಿಸ್ತು ಸಮಿತಿ ಕೈಗೊಂಡಿದೆ. ಪಕ್ಷದ ಎಲ್ಲ ನಮ್ಮ ನಿಷ್ಠಾವಂತ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇಂಥ ಯಾವುದೇ ಬೆ‍ಳವಣಿಗೆಗಳಿಂದ ವಿಚಲಿತರಾಗದೆ ಪಕ್ಷ ಸಂಘಟನೆಯ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ