;Resize=(412,232))
ಹುಬ್ಬಳ್ಳಿ: ಅಧಿಕಾರಕ್ಕೆ ಬಂದ ಒಂದೂವರೆ ವರ್ಷದೊಳಗೆ ಸಿಎಂ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪ ಬಂದಿರುವುದು ದುರ್ದೈವದ ಸಂಗತಿ. ಸಿದ್ದರಾಮಯ್ಯ ರಾಜ್ಯದ ಅತ್ಯಂತ ಲಜ್ಜೆಗೆಟ್ಟ ಮುಖ್ಯಮಂತ್ರಿಯಾಗಿದ್ದು, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತೀವ್ರ ವಾಗ್ದಾಳಿ ನಡೆಸಿದರು.
ವರ್ಗಾವಣೆ ದಂಧೆ: ರಾಜ್ಯದಲ್ಲಿ ಹರಾಜು ರೀತಿಯಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ ನಡೆಯುತ್ತಿದೆ. ಟೆಂಡರ್ನಲ್ಲಿ ಸ್ಲ್ಯಾಬ್ ವಿಧಿಸಿದಂತೆ ಕಾಂಗ್ರೆಸ್ನವರು ಅಧಿಕಾರಿಗಳ ವರ್ಗಾವಣೆಗೂ ಇಂತಿಷ್ಟು ದರ ಫಿಕ್ಸ್ ಮಾಡಿದ್ದಾರೆ. ಹೀಗೆ ಲಂಚ ಕೊಟ್ಟ ಅಧಿಕಾರಿಗಳು ಅನಿವಾರ್ಯವಾಗಿ ಕಲೆಕ್ಷನ್ನಲ್ಲಿ ನಿರತರಾಗುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಸರ್ಕಾರ ಪೊಲೀಸ್ ಅಧಿಕಾರಿಗಳ ಕೈ ಕಟ್ಟಿ ಹಾಕಿ ಅಪರಾಧಿಗಳನ್ನು ಬೆಂಬಲಿಸುತ್ತಿದೆ ಎಂದು ಕಿಡಿಕಾರಿದರು.