ರಾಹುಲ್‌ ಗಾಂಧಿಗೆ ಅನಾರೋಗ್ಯ: ರಾಂಚಿ ರ್‍ಯಾಲಿಗೆ ಗೈರು

KannadaprabhaNewsNetwork |  
Published : Apr 22, 2024, 02:04 AM ISTUpdated : Apr 22, 2024, 04:21 AM IST
rahul gandhi 2.jpg

ಸಾರಾಂಶ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದಿಢೀರನೆ ಅನಾರೋಗ್ಯ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಇಂಡಿಯಾ ಕೂಟದಿಂದ ರಾಂಚಿಯಲ್ಲಿ ಅಯೋಜನೆಗೊಂಡಿದ್ದ ಸಮಾವೇಶಕ್ಕೆಅವರು ಗೈರಾಗಿದ್ದಾರೆ.

ರಾಂಚಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ದಿಢೀರನೆ ಅನಾರೋಗ್ಯ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಇಂಡಿಯಾ ಕೂಟದಿಂದ ರಾಂಚಿಯಲ್ಲಿ ಅಯೋಜನೆಗೊಂಡಿದ್ದ ಸಮಾವೇಶಕ್ಕೆ ಅವರು ಗೈರಾಗಿದ್ದಾರೆ.

ಈ ಬಗ್ಗೆ ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಮಾಹಿತಿ ನೀಡಿದ್ದು, ‘ಅನಾರೋಗ್ಯಕ್ಕೆ ತುತ್ತಾಗಿರುವ ಕಾರಣ ರಾಹುಲ್‌ ಗಾಂಧಿ ದೆಹಲಿಯಲ್ಲಿಯೇ ಉಳಿದಿದ್ದಾರೆ’ ಎಂದಿದ್ದಾರೆ.

ಕಾಂಗ್ರೆಸ್ ಸೇರಿದಂತೆ ಇಂಡಿಯಾ ಮಹಾಮೈತ್ರಿ ಕೂಟದ 14 ಪಕ್ಷಗಳು ಒಗ್ಗೂಡಿ ಇಲ್ಲಿನ ಪ್ರಭಾತ್ ತಾರಾ ಮೈದಾನದಲ್ಲಿ ‘ ಉಲ್ಗುಲನ್ ನ್ಯಾಯ್ ’ ಹೆಸರಿನ ಸಮಾವೇಶದಲ್ಲಿ ಭಾನುವಾರ ರಾಹುಲ್ ಪಾಲ್ಗೊಳ್ಳಬೇಕಿತ್ತು.

 ಆದರೆ ಹುಷಾರಿಲ್ಲದ ಕಾರಣ ಸಾಧ್ಯವಾಗಲಿಲ್ಲ.ರಾಹುಲ್‌ ಇತ್ತೀಚಿನ ದಿನಗಳಲ್ಲಿ ಕರ್ನಾಟಕ, ಕೇರಳ, ಮಧ್ಯಪ್ರದೇಶ ಸೇರಿ ಅನೇಕ ರಾಜ್ಯಗಳನ್ನು ಸುತ್ತಿ ಕಾಂಗ್ರೆಸ್‌ ಪರ ಪ್ರಚಾರ ಮಾಡಿದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ವೈದ್ಯಕೀಯ ಪರಿಹಾರ ನಿಧಿ ಹಣಕ್ಕೆ ಬೆಂಗಳೂರು ಪಾಲಿಕೆ ತಡೆ