ಸಿಎಂ ಗೊಂದಲ ಶೀಘ್ರವೇ ಬಗೆಹರಿಸಿ : ದೇಶಪಾಂಡೆ

Published : Feb 17, 2026, 06:25 AM IST
RV Deshpande

ಸಾರಾಂಶ

ಕಾಂಗ್ರೆಸ್‌ ಹೈಕಮಾಂಡ್‌ ಆದಷ್ಟು ಶೀಘ್ರ ಅಧಿಕಾರ ಹಂಚಿಕೆ ಸಂಬಂಧದ ಗೊಂದಲ ಬಗೆಹರಿಸಿ, ಮುಖ್ಯಮಂತ್ರಿ ಹುದ್ದೆ ಸಂಬಂಧ ಶೀಘ್ರ ನಿರ್ಣಯ ಕೈಗೊಳ್ಳಬೇಕು ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

  ಕಾರವಾರ :  ಕಾಂಗ್ರೆಸ್‌ ಹೈಕಮಾಂಡ್‌ ಆದಷ್ಟು ಶೀಘ್ರ ಅಧಿಕಾರ ಹಂಚಿಕೆ ಸಂಬಂಧದ ಗೊಂದಲ ಬಗೆಹರಿಸಿ, ಮುಖ್ಯಮಂತ್ರಿ ಹುದ್ದೆ ಸಂಬಂಧ ಶೀಘ್ರ ನಿರ್ಣಯ ಕೈಗೊಳ್ಳಬೇಕು ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.

ಹೈಕಮಾಂಡ್ ಸಮಯ ವ್ಯರ್ಥಮಾಡದೆ ಬೇಗ ನಿರ್ಣಯ ಕೈಗೊಳ್ಳಬೇಕು

ಹಳಿಯಾಳದ ಗೃಹ ಕಚೇರಿಯಲ್ಲಿ ‘ಕನ್ನಡಪ್ರಭ’ದ ಜೊತೆ ಮಾತನಾಡಿ, ಹೈಕಮಾಂಡ್ ಸಮಯ ವ್ಯರ್ಥಮಾಡದೆ, ಸಿದ್ದರಾಮಯ್ಯ ಅವರು ಮುಂದುವರಿಯುತ್ತಾರೋ ಅಥವಾ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಆಗುತ್ತಾರೋ ಎನ್ನುವ ಬಗ್ಗೆ ಆದಷ್ಟು ಬೇಗ ನಿರ್ಣಯ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸರ್ಕಾರದ ಇಮೇಜ್‌ಗೆ ತೊಂದರೆ ಆಗಲಿದೆ. ಆಡಳಿತ ಯಂತ್ರದಲ್ಲೂ ಸ್ವಲ್ಪ ಮಟ್ಟಿಗೆ ಅಸ್ಥಿರತೆ ಕಾಣಿಸಲಿದೆ ಎಂದರು.

ಇವರಿಬ್ಬರೂ ಪರಸ್ಪರ ವಿಶ್ವಾಸದಿಂದ ಕೆಲಸ ಮಾಡುತ್ತಿದ್ದಾರೆa

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಇವರಿಬ್ಬರೂ ಪರಸ್ಪರ ವಿಶ್ವಾಸದಿಂದ ಕೆಲಸ ಮಾಡುತ್ತಿದ್ದಾರೆ. ಇವರಿಬ್ಬರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಆದರೆ, ಜೀವನದಲ್ಲಿ ಪ್ರತಿಯೊಬ್ಬರಿಗೂ ಆಸೆ, ಆಕಾಂಕ್ಷೆ ಹಾಗೂ ಗುರಿ ಇರುತ್ತದೆ. ಹೀಗಾಗಿ, ಡಿಕೆಶಿಗೆ ತಾವೂ ಮುಖ್ಯಮಂತ್ರಿ ಆಗಬೇಕು ಎಂಬ ಆಕಾಂಕ್ಷೆ ಇರಬಹುದು. ಹಾಗೆಯೇ ಸಿದ್ದರಾಮಯ್ಯ ಅವರಿಗೂ ಮುಖ್ಯಮಂತ್ರಿಯಾಗಿ ತಾವೇ 5 ವರ್ಷ ಮುಂದುವರಿಯಬೇಕೆಂಬ ಆಕಾಂಕ್ಷೆ ಇರಬಹುದು. ಇದರಲ್ಲಿ ಇಬ್ಬರದ್ದೂ ತಪ್ಪಿಲ್ಲ ಎಂದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಪ್ರಿಯಾಂಕ್‌ ‘ಆರೆಸ್ಸೆಸ್‌ ಟೀಕೆ’ಗೆ ಬಿಜೆಪಿ ಕಿಡಿ- ದೆವ್ವದ ಮನಸ್ಥಿತಿ ಇದ್ರೆ ದೈವದ ಮಾತು ಬರಲ್ಲ
ಬಾಗೇಪಲ್ಲಿ ಕಾಂಗ್ರೆಸ್‌ಶಾಸಕ ಸುಬ್ಬಾರೆಡ್ಡಿ ಆಯ್ಕೆಯೇ ಅಸಿಂಧು!