ಮೆಟ್ರೋ ದರ ಪರಿಷ್ಕರಣ ವರದಿ ಬಹಿರಂಗಪಡಿಸಿ : ಸಂಸದ ತೇಜಸ್ವಿ ಸೂರ್ಯ

KannadaprabhaNewsNetwork |  
Published : Apr 29, 2025, 01:46 AM ISTUpdated : Apr 29, 2025, 04:43 AM IST
tejasvi surya | Kannada Prabha

ಸಾರಾಂಶ

ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್‌) ದರ ಪರಿಷ್ಕೃತ ಸಮಿತಿ ನೀಡಿರುವ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವಂತೆ, ಸಂಸ್ಥೆಯ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡುವಂತೆ ಸಂಸದ ತೇಜಸ್ವಿ ಸೂರ್ಯ ಬಿಎಂಆರ್​ಸಿಎಲ್​ಗೆ ಕೋರಿದ್ದಾರೆ.

 ಬೆಂಗಳೂರು : ಬೆಂಗಳೂರು ಮೆಟ್ರೋ ರೈಲು ನಿಗಮಕ್ಕೆ (ಬಿಎಂಆರ್‌ಸಿಎಲ್‌) ದರ ಪರಿಷ್ಕೃತ ಸಮಿತಿ ನೀಡಿರುವ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವಂತೆ, ಸಂಸ್ಥೆಯ ಪೋರ್ಟಲ್‌ನಲ್ಲಿ ಅಪ್‌ಲೋಡ್‌ ಮಾಡುವಂತೆ ಸಂಸದ ತೇಜಸ್ವಿ ಸೂರ್ಯ ಬಿಎಂಆರ್​ಸಿಎಲ್​ಗೆ ಕೋರಿದ್ದಾರೆ.

ಈ ಸಂಬಂಧ ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್​ ರಾವ್‌ ಅವರನ್ನು ಭೇಟಿ ಮಾಡಿ ಪತ್ರ ಸಲ್ಲಿಸಿದ ಅವರು, ‘ಬಿಎಂಆರ್​ಸಿಎಲ್​ ಮೆಟ್ರೋ ರೈಲುಗಳಿಗೆ ಪರಿಷ್ಕೃತ ದರ ರಚನೆಯನ್ನು ಶಿಫಾರಸು ಮಾಡಲು 2024ರ ಸೆಪ್ಟೆಂಬರ್​ 7 ರಂದು ಹೈಕೋರ್ಟ್‌ನ ಮಾಜಿ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ರಚಿಸಿದ್ದ ದರ ಪರಿಷ್ಕರಣ ಸಮಿತಿ 2024ರ ಡಿಸೆಂಬರ್​ 12 ರಂದು ವರದಿ ಸಲ್ಲಿಸಿತ್ತು. ಬಳಿಕ ಸಂಸ್ಥೆ ಶೇ. 71ರಷ್ಟು ದರ ಪ್ರಯಾಣ ದರ ಏರಿಕೆಯಾಗಿದ್ದು, ದೇಶದಲ್ಲೇ ಅತ್ಯಂದ ದುಬಾರಿ ಮೆಟ್ರೋ ಎನ್ನಿಸಿಕೊಂಡಿದೆ.

ದೆಹಲಿ ಮೆಟ್ರೋ ಪ್ರಯಾಣದ ದರ ಪರಿಷ್ಕರಣೆ ವಿಚಾರವಾಗಿ, ನಾಲ್ಕು ವಿಭಿನ್ನ ಸಂದರ್ಭಗಳಲ್ಲಿ ರಚಿಸಲಾದ ದರ ನಿಗದಿ ಸಮಿತಿಯ ವರದಿಗಳನ್ನು ದೆಹಲಿ ಮೆಟ್ರೋ ರೈಲು ನಿಗಮ ವೆಬ್‌ಸೈಟ್‌ನಲ್ಲಿ ಸಾರ್ವಜನಿಕರಿಗೆ ಲಭ್ಯವಾಗುವಂತೆ ಅಪ್​ಲೋಡ್​ ಮಾಡಿದೆ. ಅದೇ ರೀತಿ, ಮುಂಬೈ ಮತ್ತು ಹೈದರಾಬಾದ್‌ನಲ್ಲಿರುವ ಮೆಟ್ರೋ ರೈಲು ಸಂಸ್ಥೆಗಳು ಸಹ ಆಯಾ ದರ ನಿಗದಿ ಸಮಿತಿ ವರದಿಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಬಿಡುಗಡೆ ಮಾಡಿವೆ. ಈ ಮೂಲಕ ದರ ಪರಿಷ್ಕರಣೆ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಮತ್ತು ಸಾರ್ವಜನಿಕ ವಿಶ್ವಾಸವನ್ನು ಗಳಿಸಿಕೊಂಡಿವೆ.

ಈ ಹಿನ್ನೆಲೆಯಲ್ಲಿ, ಬಿಎಂಆರ್​ಸಿಎಲ್​ ಕೂಡ ದರ ನಿಗದಿ ಸಮಿತಿ ವರದಿಯನ್ನು ಸಾರ್ವಜನಿಕ ವಲಯದಲ್ಲಿ ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸುತ್ತೇನೆ. ಹಾಗೆ ಮಾಡುವುದರಿಂದ ಸಾರ್ವಜನಿಕರ ನಂಬಿಕೆ ಗಳಿಸಿಕೊಳ್ಳಲು ಮತ್ತು ದರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ನಿಮ್ಮ ಹೊಣೆಗಾರಿಕೆ ಬಗ್ಗೆ ತಿಳಿಯುತ್ತದೆ ಎಂದು ಒತ್ತಾಯಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಮತಚೋರಿ ಹೆಸರಲ್ಲಿ ಸುಳ್ಳು ಪ್ರಚಾರ ತಪ್ಪು: ದೇವೇಗೌಡ
ದೆಹಲಿಯಲ್ಲೂ ಸಿದ್ದು ಸಿದ್ದು, ಡಿಕೆ ಡಿಕೆ ಸದ್ದು