;Resize=(412,232))
ಬೆಂಗಳೂರು : ಕಾಂಗ್ರೆಸ್ ಹೈಕಮಾಂಡ್ ನಾಯಕರು ಅಳೆದು ತೂಗಿ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಹಲವು ಬಾರಿ ಶಾಸಕರಾದರೂ ಈವರೆಗೆ ಸಚಿವರಾಗುವ ಅವಕಾಶ ಸಿಗದ ಆರು ಮಂದಿಗೆ ಮತ್ತು ಇದೇ ಮೊದಲ ಬಾರಿ ಶಾಸಕರಾಗಿರುವ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಎರಡು ತಿಂಗಳ ನಂತರ ಸಚಿವ ಸಂಪುಟ ವಿಸ್ತರಣೆಯಾಗಿದೆ. ಈ ಹಿಂದೆ ಜೂ.3ರಂದು ಡಿ.ಕೆ.ಶಿವಕುಮಾರ್ ಅವರೊಂದಿಗೆ 13 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಉಳಿದಂತೆ ಖಾಲಿಯಿದ್ದ 20 ಸ್ಥಾನಗಳಲ್ಲಿ 19 ಸ್ಥಾನಗಳಿಗೆ ಸಚಿವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದ್ದು, ಸೋಮವಾರ ಎಲ್ಲ 19 ಮಂದಿ ಲೋಕಭವನದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಆ 19 ಮಂದಿಯಲ್ಲಿ ಏಳು ಮಂದಿ ಇದೇ ಮೊದಲ ಬಾರಿಗೆ ಸಚಿವ ಸ್ಥಾನ ಪಡೆದಿದ್ದಾರೆ.
ಟಿ.ರಘುಮೂರ್ತಿ, ಡಾ.ಅಜಯ್ ಸಿಂಗ್, ಕೆ.ಎಂ.ಶಿವಲಿಂಗೇಗೌಡ, ಎಚ್.ಸಿ.ಬಾಲಕೃಷ್ಣ, ವಿಜಯಾನಂದ ಕಾಶಪ್ಪನವರ್, ರಿಜ್ವಾನ್ ಅರ್ಷದ್ ಅವರು ಈಗಾಗಲೇ ಎರಡಕ್ಕಿಂತ ಹೆಚ್ಚು ಬಾರಿ ಶಾಸಕರಾದವರು. ಅವರಿಗೆ ಈವರೆಗೆ ಸಚಿವ ಸ್ಥಾನ ಒಲಿದಿರಲಿಲ್ಲ. ಇದೀಗ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಅವರಿಗೆ ಅವಕಾಶ ದೊರೆತಿದೆ. ಹಾಗೆಯೇ, ಇದೇ ಮೊದಲ ಬಾರಿ ಶಾಸಕರಾಗಿರುವ ಕೆ.ಎಸ್.ಬಸವಂತಪ್ಪ ಅವರಿಗೂ ಹೈಕಮಾಂಡ್ ಮಣೆ ಹಾಕಿದ್ದು, ಸೋಮವಾರ ಉಳಿದವರ ಜತೆ ಪ್ರಮಾಣ ವಚನ ಸ್ವೀಕರಿಸಿದರು.
- ರಘುಮೂರ್ತಿ, ಡಾ.ಅಜಯ್ ಸಿಂಗ್, ಕೆ.ಎಂ.ಶಿವಲಿಂಗೇಗೌಡ, ಎಚ್.ಸಿ.ಬಾಲಕೃಷ್ಣ, ವಿಜಯಾನಂದ ಕಾಶಪ್ಪನವರ್, ರಿಜ್ವಾನ್ ಅರ್ಷದ್ಗೆ ಮೊದಲ ಬಾರಿ ಸಚಿವ ಸ್ಥಾನ
- ಇದೇ ಮೊದಲ ಬಾರಿ ಶಾಸಕರಾಗಿರುವ ಕೆ.ಎಸ್.ಬಸವಂತಪ್ಪ ಅವರಿಗೂ ಹೈಕಮಾಂಡ್ನಿಂದ ಮಂತ್ರಿಗಿರಿ