ನಿನ್ನನ್ನು ಸಮಾಧಿ ಮಾಡುವೆ ಎಂದು ಬಿಭವ್ ಬೆದರಿಕೆ: ಸ್ವಾತಿ

KannadaprabhaNewsNetwork |  
Published : May 18, 2024, 12:34 AM ISTUpdated : May 18, 2024, 04:29 AM IST
ಬಿಭವ್ | Kannada Prabha

ಸಾರಾಂಶ

ದೆಹಲಿ ಮುಖ್ಯಮಂತ್ರಿ ನಿವಾಸದಲ್ಲಿ ಅರವಿಂದ್‌ ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ನಿಂದ ಹಲ್ಲೆಗೊಳಗಾದ ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ದಾಖಲಿಸಿದ್ದ ದೂರಿನ ಎಲ್ಲ ವಿವರ ಬಹಿರಂಗವಾಗಿದೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ ನಿವಾಸದಲ್ಲಿ ಅರವಿಂದ್‌ ಕೇಜ್ರಿವಾಲ್‌ ಆಪ್ತ ಬಿಭವ್‌ ಕುಮಾರ್‌ನಿಂದ ಹಲ್ಲೆಗೊಳಗಾದ ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ದಾಖಲಿಸಿದ್ದ ದೂರಿನ ಎಲ್ಲ ವಿವರ ಬಹಿರಂಗವಾಗಿದೆ. ಇದೇ ವೇಳೆ ಶುಕ್ರವಾರ ದಿಲ್ಲಿಯ ತೀಸ್ ಹಜಾರಿ ನ್ಯಾಯಾಲಯಕ್ಕೆ ಹಾಜರಾದ ಅವರು ನ್ಯಾಯಾಲಯದ ಮುಂದೆ ಸಮಸ್ತ ಘಟನಾವಳಿಯ ಹೇಳಿಕೆ ನೀಡಿದ್ದಾರೆ.

ಅದರಲ್ಲಿ ಬಿಭವ್‌ ಕುಮಾರ್‌ ಎಷ್ಟು ಹೇಳಿದರೂ ಕೇಳದೆ ತನಗೆ ಮೇಲಿಂದ ಮೇಲೆ ಹಲ್ಲೆ ಮಾಡಿದ. ನಿನ್ನನ್ನು ಸಮಾಧಿ ಮಾಡುವೆ ಎಂದು ಬೆದರಿಸಿದ. ಹೀಗಾಗಿ ತಾನೂ ಆತ್ಮರಕ್ಷಣೆಗಾಗಿ ಆತನ ತಲೆಯನ್ನು ಟೇಬಲ್‌ಗೆ ಅಪ್ಪಳಿಸಿ ಹಲ್ಲೆ ಮಾಡಿದೆ ಹಾಗೂ ಒದ್ದೆ ಎಂದು ಹೇಳಿದ್ದಾರೆ.

ಎಫ್‌ಐಆರ್‌ನಲ್ಲೇನಿದೆ?

ಸೋಮವಾರ ಮುಂಜಾನೆ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ಹೋದೆ ಅಲ್ಲಿನ ಭದ್ರತಾ ಸಿಬ್ಬಂದಿ, ಸಿಎಂ ಬರುವವರೆಗೆ ಒಂದು ರೂಂನಲ್ಲಿ ಕಾಯುವಂತೆ ಹೇಳಿದರು.

ಕೆಲ ಕ್ಷಣಗಳ ಬಳಿಕ ಬಿಭವ್‌ ಕುಮಾರ್‌ ಸ್ವಾತಿಯಿದ್ದ ರೂಂಗೆ ಬಂದು ಸಕಾರಣವಿಲ್ಲದೆ ನನ್ನ ಮೇಲೆ ನಿಂದನೆ ಹಾಗೂ ಬೈಗುಳವನ್ನು ಪ್ರಾರಂಭಿಸಿದರು. ನಾನು ನಿಂದನೆಯನ್ನು ನಿಲ್ಲಿಸಿ ಎಂದು ಹೇಳಿದ್ದಕ್ಕೆ ಆಕ್ರೋಶಗೊಂಡ ಭಿಭವ್‌ ನನ್ನ ಕೆನ್ನೆಗೆ 7-8 ಬಾರಿ ಬಾರಿಸಿದ. ಇದರಿಂದ ಆಕ್ರೋಶಗೊಂಡ ನಾನು ಕಾಪಾಡುವಂತೆ ಕಿರುಚಿದರೂ ಯಾರೂ ನೆರವಿಗೆ ಧಾವಿಸಲಿಲ್ಲ.

ಬಳಿಕ ಆತ್ಮರಕ್ಷಣೆಯ ಸಲುವಾಗಿ ಭಿಭವ್‌ಗೆ ಕಾಲಿನಿಂದ ಒದ್ದೆ.ತಲೆಯನ್ನು ಟೇಬಲ್‌ ಮೇಲೆ ಅಪ್ಪಳಿಸಿದೆ. ಇದರಿಂದ ಮತ್ತಷ್ಟು ಆಕ್ರೋಶಭರಿತನಾದ ಬಿಭವ್‌ ನೆಲದ ಮೇಲೆ ಬಿದ್ದಿದ್ದ ನನ್ನನ್ನು ತುಳಿದು, ಎಳೆದಾಡಿದ. ಶರ್ಟನ್ನು ಎಳೆದ ರಭಸಕ್ಕೆ ನನ್ನ ಶರ್ಟ್‌ ಗುಂಡಿಗಳು ಹರಿದು ಹೋದವು. ಬಳಿಕ ಆತ ನನ್ನ ಎದೆ, ಹೊಟ್ಟೆ, ಜಠರ ಮುಂತಾದ ಅಂಗಗಳಿಗೆ ಒದ್ದು ಹಲ್ಲೆ ಮಾಡಿದ. ಕೊನೆಗೆ ನಾನು ಋತುಚಕ್ರದಲ್ಲಿದ್ದೇನೆ ಎಂದೆ. ಆದರೂ ಬಿಭವ್‌ ತನ್ನ ಹಲ್ಲೆಯನ್ನು ಮುಂದುವರಿಸಿದ.

ಕೊನೆಗೆ ಸಾವರಿಸಿಕೊಂಡು ಎದ್ದು ಪೊಲೀಸ್‌ ಹೆಲ್ಪ್‌ಲೈನ್‌ಗೆ ಕರೆ ಮಾಡಿ ವಿಷಯ ತಿಳಿಸಿದೆ. ಆಗ ಬಿಭವ್‌ ದರ್ಪದಿಂದ ‘ಏನು ಬೇಕಾದರೂ ಮಾಡಿಕೋ. ನಿನ್ನ ಮೂಳೆಯನ್ನು ಮುರಿದು ನಿನ್ನನ್ನು ಸಮಾಧಿ ಮಾಡುತ್ತೇವೆ’ ಎಂದು ಗದರಿಸಿದ. ಪೊಲೀಸರು ಬರುವವರೆಗೆ ಇರುತ್ತೇನೆ ಎಂದರೂ ಕೇಳದೆ ಮನೆಯಿಂದ ಹೊರದಬ್ಬಿಸಿದ.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಬಾಂಗ್ಲಾ ಸರ್ಕಾರ ಕೆಡವಿದ ಜೆನ್‌-ಝೀಗಳೇನಾದರು?
ನಟ ವಿಜಯ್‌- ತ್ರಿಶಾ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಕೀಳು ಹೇಳಿಕೆ ವಿವಾದ, ವಿಷಾಧ