;Resize=(412,232))
ಬೆಂಗಳೂರು : ರಾಜ್ಯದಲ್ಲಿ ವಿಶೇಷ ತೀವ್ರ ಮತ ಪರಿಷ್ಕರಣೆ (ಎಸ್ಐಆರ್) ಸರಿಯಾಗಿ ನಡೆಯುತ್ತಿಲ್ಲ ಎಂದು ಪ್ರತಿಪಕ್ಷದವರು ಮಾಡಿರುವ ಆರೋಪಗಳಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ‘ವಿರೋಧ ಪಕ್ಷದವರಿಗೆ ಅರೋಪ ಮಾಡುವುದೇ ಕೆಲಸ. ಮಾಡಿಕೊಳ್ಳಲಿ.
ಪಕ್ಷಾತೀತವಾಗಿ ಎಲ್ಲ ಮತದಾರರ ಹಕ್ಕು ಉಳಿಸಬೇಕು ಎಂಬುದಷ್ಟೇ ನಮ್ಮ ಉದ್ದೇಶ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇವೆ’ ಎಂದಿದ್ದಾರೆ.
ಭಾನುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಮಾತು ಹೇಳಿದರು.
‘ಪ್ರತಿಪಕ್ಷಗಳು ಇರುವುದೇ ಆರೋಪ ಮಾಡಲು. ಮಾಡಿಕೊಳ್ಳಲಿ. ಸರ್ಕಾರ ಇರುವುದು ಎಲ್ಲರಿಗೂ ನ್ಯಾಯ ಒದಗಿಸಲು. ಆ ಕೆಲಸ ನಾವು ಮಾಡುತ್ತೇವೆ. ರಾಜ್ಯದ ಎಲ್ಲ ಅರ್ಹ ಮತದಾರರ ಮತದಾನದ ಹಕ್ಕು ಉಳಿಯಬೇಕು ಎಂಬುದು ನಮ್ಮ ಉದ್ದೇಶ. ಎಲ್ಲರೂ ತಮ್ಮ ಮತದಾನದ ಹಕ್ಕು ಉಳಿಸಿಕೊಳ್ಳಿ ಎಂದು ಮನವಿ ಮಾಡಿದ್ದೇವೆ. ನಮ್ಮದೂ ಪ್ರತಿಭಟನೆ ಇದೆ. ಅದನ್ನು ನ್ಯಾಯಬದ್ಧವಾಗಿ ಎಲ್ಲಿ ಪ್ರತಿಭಟಿಸಬೇಕೋ ಪ್ರತಿಭಟಿಸುತ್ತೇವೆ’ ಎಂದರು.