ಪೀಣ್ಯ ದಾಸರಹಳ್ಳಿ: ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶ ಸುಭದ್ರವಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ದೇಶದ ಭದ್ರತೆ ಹಾಗೂ ಗಡಿಗಳ ರಕ್ಷಣೆಗಾಗಿ ಮೋದಿಯವರು ದುಡಿದಿದ್ದಾರೆ ಎಂದು ಉತ್ತರ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಶೋಭಾ ಕರಂದ್ಲಾಜೆ ತಿಳಿಸಿದರು.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಶಕ್ತಿಯಿಂದ ಮತ್ತೊಮ್ಮೆ ಮೋದಿಯವರಿಗೆ ಬೆಂಬಲ ಸಿಗಬೇಕು. ಕಾರ್ಯಕರ್ತರು ಪ್ರತಿ ಮನೆಗೆ ಹೋಗಿ ದೇಶದ ಅಭಿವೃದ್ಧಿ ಮತ್ತು ಮೋದಿಜಿ ಅವರ ಸಾಧನೆಯ ತಿಳಿಸಬೇಕು ಎಂದರು.
ಶಾಸಕ ಎಸ್.ಮುನಿರಾಜು ಮಾತನಾಡಿ, ಎನ್ಡಿಎ ಮೈತ್ರಿ ಕೂಟದಲ್ಲಿ ಭಾಗಿಯಾಗುವ ಮೂಲಕ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಕಾರ್ಯಕ್ಕೆ ಜೆಡಿಎಸ್ ಹಾಗೂ ಬಿಜಿಪಿ ಮುಖಂಡರು ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.ದೇವೇಗೌಡರ ನೆರಳಿನಲ್ಲಿ ಬೆಳೆದ ಸಿದ್ದರಾಮಯ್ಯ ಇಂದು ಅವರನ್ನೇ ಏಕವಚನದಲ್ಲಿ ಮಾತಾನಾಡುತ್ತಾರೆ. ಅಂತಹವರಿಗೆ ನಾವು ನೀವು ತಕ್ಕ ಪಾಠ ಕಲಿಸಬೇಕು. ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತದಲ್ಲಿ ಪರಿವರ್ತನೆಯಾಗಿದೆ. ಅದಕೋಸ್ಕರ ದೇವೇಗೌಡರು ಎನ್ಡಿಎ ಜೊತೆ ಕೈಜೋಡಿಸಿ ದೇಶದಲ್ಲಿ ಕಾಂಗ್ರೆಸ್ ಕಿತ್ತೊಗೆರಯರಿ ಎಂಬ ಸಂದೇಶ ನೀಡಿದ್ದಾರೆ. ಬಿಟ್ಟಿ ಭಾಗ್ಯಗಳಿಗೋಸ್ಕರ 1ಲಕ್ಷದ 3ಸಾವಿರ ಕೋಟಿ ಸಾಲ ಮಾಡಿದ್ದಾರೆ. ರಾಜ್ಯವನ್ನು ಸಾಲಗಾರರನ್ನಾಗಿ ಮಾಡಿ ಅದೋಗತಿಗೆ ತಂದಿದ್ದಾರೆ. ನಿಮಗೆ ಧೈರ್ಯವಿದ್ದರೆ ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಿ. 40 ಸ್ಥಾನಗಳು ಸಿಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಇದೆ ಎಂದು ಕಿಡಿಕಾರಿದರು.