ಸುಳ್ಳು ಭರವಸೆಗಳ ಕೇಂದ್ರ ಬಜೆಟ್‌: ರಕ್ಷಾರಾಮಯ್ಯ

KannadaprabhaNewsNetwork |  
Published : Feb 03, 2024, 01:48 AM IST
ಸಿಕೆಬಿ-1 ರಕ್ಷಾರಾಮಯ್ಯ | Kannada Prabha

ಸಾರಾಂಶ

ಬಜೆಟ್‌ ಭಾಷಣದ ಉದ್ದಕ್ಕೂ ಅಭಿವೃದ್ಧಿ ಹೊಂದಿ ಭಾರತ, ವಿಕಸಿತ ಭಾರತ ಎಂಬ ವರ್ಣಮಯ ಶಬ್ಧಗಳನ್ನು ಬಳಸಿ ಜನ ಸಾಮಾನ್ಯರನ್ನು ಕಲ್ಪನಾ ಲೋಕದಲ್ಲಿ ವಿಹರಿಸುವಂತೆ ಮಾಡಿದ್ದು, ವಾಸ್ತವವಾಗಿ ಸಾಮಾನ್ಯ ಜನರಿಗೆ ಬಜೆಟ್‌ನಿಂದ ಯಾವುದೇ ಪ್ರಯೋಜನವಿಲ್ಲ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕೇಂದ್ರ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್‌ ರವರು ಮಂಡಿಸಿದ ಆಯವ್ಯಯದಿಂದ ಬಡವರು, ಯುವ ಸಮೂಹಕ್ಕೆ ಯಾವುದೇ ರೀತಿಯಲ್ಲೂ ಅನುಕೂಲ ಕಲ್ಪಿಸಿಲ್ಲ. ಉದ್ಯೋಗ ಸೃಷ್ಟಿ ಬಗ್ಗೆ ಯಾವುದೇ ಪ್ರಸ್ತಾಪವಿಲ್ಲ. ಜನ ಸಾಮಾನ್ಯರ ಸಂಕಷ್ಟ ನಿವಾರಣೆಗೆ ಪರಿಹಾರಗಳನ್ನು ಪ್ರಕಟಿಸಿಲ್ಲ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಎಂ.ಎಸ್.‌ ರಕ್ಷಾ ರಾಮಯ್ಯ ಟೀಕಿಸಿದ್ದಾರೆ.ಪೆಟ್ರೋಲ್‌ ದರ ಇಳಿಸಿಲ್ಲ

ಬಜೆಟ್‌ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಜಾಗತಿಕವಾಗಿ ಕಚ್ಚಾ ತೈಲ ದರ ಗಣನೀಯವಾಗಿ ಇಳಿಕೆಯಾಗಿದ್ದರೂ ಜನ ಸಾಮಾನ್ಯರಿಗೆ ಇದರ ಲಾಭ ವರ್ಗಾವಣೆ ಮಾಡುವ ಕೆಲಸ ಮಾಡುತ್ತಿಲ್ಲ. ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ ದರ ಇಳಿಕೆ ಮಾಡುವ ಬಡವರ ಪರ ತೀರ್ಮಾನಗಳನ್ನು ಪ್ರಕಟಿಸಿಲ್ಲ. ಮಹಿಳೆಯರನ್ನು ಲಕ್ಷಾಧಿಪತಿ ಮಾಡುವ ಸುಳ್ಳು ಭರವಸೆಗಳನ್ನು ಕೊಡುತ್ತಿದೆ. ಕಾಂಗ್ರೆಸ್‌ ಸರ್ಕಾರದಲ್ಲಿ ಆರಂಭವಾದ ಸ್ತ್ರೀ ಶಕ್ತಿ ಸಂಘಗಳಲ್ಲಿ ನಮ್ಮ ಮಹಿಳೆಯರು ಈಗಾಗಲೇ ಸ್ವಾವಲಂಭಿ ಬದುಕು ಕಟ್ಟಿಕೊಂಡು ದೇಶಕ್ಕೆ ಮಾದರಿಯಾಗಿದ್ದಾರೆ ಎಂದರು.ಒಂದು ಕೋಟಿ ಮನೆಗಳ ಮೇಲೆ ಸೌರ ಫಲಕಗಳನ್ನು ಅಳವಡಿಸಿ ಉಚಿತ ವಿದ್ಯುತ್‌ ದೊರಕಿಸಿಕೊಡುವ ಜೊತೆಗೆ ಪ್ರತಿ ವರ್ಷ ಬಡವರಿಗೆ 15 ರಿಂದ 18 ಸಾವಿರ ರುಪಾಯಿ ಆದಾಯ ದೊರೆಯುವಂತೆ ಮಾಡುವುದಾಗಿ ಹೇಳಿದ್ದಾರೆ. ಬರುವ ದಿನಗಳಲ್ಲಿ ಇದು ಸಹ ಸುಳ್ಳು ಭರವಸೆಯಾಗಲಿದೆ. ಆದರೆ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಈಗಾಗಲೇ ಕೋಟ್ಯಂತರ ಕುಟುಂಬಗಳಿಗೆ ಉಚಿತ ವಿದ್ಯುತ್‌ ಗ್ಯಾರಂಟಿ ಯೋಜನೆ ಜಾರಿಗೊಳಿಸಿ ನುಡಿದಂತೆ ನಡೆದಿದೆ ಎಂದರು. ವರ್ಣಮಯ ಶಬ್ದಗಳ ಬಳಕೆ

ಬಜೆಟ್‌ ಭಾಷಣದ ಉದ್ದಕ್ಕೂ ಅಭಿವೃದ್ಧಿ ಹೊಂದಿ ಭಾರತ, ವಿಕಸಿತ ಭಾರತ ಎಂಬ ವರ್ಣಮಯ ಶಬ್ಧಗಳನ್ನು ಬಳಸಿ ಜನ ಸಾಮಾನ್ಯರನ್ನು ಕಲ್ಪನಾ ಲೋಕದಲ್ಲಿ ವಿಹರಿಸುವಂತೆ ಮಾಡಿದ್ದು, ವಾಸ್ತವವಾಗಿ ಸಾಮಾನ್ಯ ಜನರಿಗೆ ಬಜೆಟ್‌ ನಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದರು.ಕರ್ನಾಟದದಿಂದ ಕೇಂದ್ರಕ್ಕೆ ಹೆಚ್ಚಿನ ತೆರಿಗೆ ದೊರೆಯುತ್ತಿದ್ದು, ರಾಜ್ಯಕ್ಕೆ ಸೂಕ್ತ ಪಾಲು ಸಿಗುತ್ತಿಲ್ಲ. ಕೇಂದ್ರ ಹಣಕಾಸು ಆಯೋಗ ಕೇಂದ್ರ ಸರ್ಕಾರದ ಅಣತಿಯಂತೆ ಕುಣಿದು ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ. ಕರ್ನಾಟಕವನ್ನು ಬಿಜೆಪಿ ಯಾವತ್ತಿಗೂ ನಮ್ಮ ದೇಶದ ಭಾಗವಾಗಿ ನೋಡಿಲ್ಲ, ಹಾಗಿದ್ದರೂ ನಮ್ಮಿಂದ 25 ಬಿಜೆಪಿ ಸಂಸದರು ಆಯ್ಕೆ ಆಗಿದ್ದಾರೆ. ರಾಜ್ಯ ಹಿತ ಕಾಯುವಲ್ಲಿ ಬಿಜೆಪಿ ಸಂಸದರು, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಆಪಾದಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಜ.6 ಇಲ್ಲವೇ 9ಕ್ಕೆ ಡಿಕೆಶಿ ಸಿಎಂ 200% ಕನ್ಫರ್ಮ್: ಇಕ್ಬಾಲ್
ಜಿಬಿಎ ಚುನಾವಣೆಗೆ ಕಾಂಗ್ರೆಸ್‌ ಅರ್ಜಿಗೆ ₹50 ಸಾವಿರ!