ಚಿತ್ರದಯರ್ಗ : ಯುವ ಮತದಾರರಿಗೆ ಜಾಗೃತಿ

KannadaprabhaNewsNetwork |  
Published : Apr 06, 2024, 12:47 AM ISTUpdated : Apr 06, 2024, 04:44 AM IST
Parliament Election

ಸಾರಾಂಶ

ನಗರದ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿಯ ಬಾಲಕಿಯರ ವಸತಿ ನಿಲಯದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಯುವ ಮತದಾರರಿಗೆ ಜಾಗೃತಿ ಕಾರ್ಯಕ್ರಮ ನಡೆಯಿತು.

ಚಿತ್ರದುರ್ಗ:  ನಗರದ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿಯ ಬಾಲಕಿಯರ ವಸತಿ ನಿಲಯದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಯುವ ಮತದಾರರಿಗೆ ಜಾಗೃತಿ ಕಾರ್ಯಕ್ರಮ ನಡೆಯಿತು.

ಜಿ.ಪಂ ಸಿಇಒ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಸ್.ಜೆ.ಸೋಮಶೇಖರ್ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮತದಾನ ನಿಮ್ಮೆಲ್ಲರ ಹಕ್ಕು. ಅದನ್ನು ತಪ್ಪದೆ ಚಲಾಯಿಸುವ ಮೂಲಕ ಪ್ರೌಢ ನಾಗರಿಕರಾಗಿ ಎಂದು ಕರೆ ನೀಡಿದರು.

ವಿದ್ಯಾರ್ಥಿನಿಯರಿಗೆ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಕಾರ್ಯಕ್ರಮದಲ್ಲಿ ಜಿ.ಪಂ ಉಪ ಕಾರ್ಯದರ್ಶಿ ತಿಮ್ಮಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಓ.ಪರಮೇಶ್ವರಪ್ಪ, ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ, ಸ್ವೀಪ್ ಸಮಿತಿ ಜಿಲ್ಲಾ ಸಂಯೋಜಕಿ ಸುಷ್ಮಾರಾಣಿ ಹಾಗೂ ವಸತಿ ನಿಲಯಗಳ ನಿಲಯ ಪಾಲಕರು ಇದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಿ: ರಾಮಲಿಂಗಾರೆಡ್ಡಿ
ಯುದ್ಧದಿಂದ ರಾಜ್ಯದಲ್ಲಿ ಸಿಲುಕಿರುವ ಪ್ರವಾಸಿಗರ ಆತಿಥ್ಯಕ್ಕೆ ಕ್ರಮ: ಎಚ್‌.ಕೆ.ಪಾಟೀಲ್‌