ಚುನಾವಣೆಯಲ್ಲಿ ರಾಜ್ಯ, ಕೇಂದ್ರ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿ : ಚಾಮರಸ ಮಾಲಿ ಪಾಟೀಲ್

KannadaprabhaNewsNetwork |  
Published : Apr 06, 2024, 12:49 AM ISTUpdated : Apr 06, 2024, 04:31 AM IST
ಫೋಟೋ:ಬರ ನಿರ್ವಹಣೆಯಲ್ಲಿ ವಿಫಲವಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ತಕ್ಕಪಾಠ ಕಲಿಸುವಂತೆ ಪತ್ರಿಕಾಗೋಷ್ಠಿಯಲ್ಲಿ ಚಾಮರಸ ಮಾಲಿ ಪಾಟೀಲ್ ಮನವಿ. | Kannada Prabha

ಸಾರಾಂಶ

ಬರ ನಿರ್ವಹಣೆಯಲ್ಲಿ ವಿಫಲವಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದೆಂದು ಕರ್ನಾಟಕ ಸರ್ವೋದಯ ಪಕ್ಷದ ರಾಜ್ಯಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಎಚ್ಚರಿಸಿದರು.

 ಚಿತ್ರದುರ್ಗ : ಬರ ನಿರ್ವಹಣೆಯಲ್ಲಿ ವಿಫಲವಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವುದೆಂದು ಕರ್ನಾಟಕ ಸರ್ವೋದಯ ಪಕ್ಷದ ರಾಜ್ಯಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ ಸರ್ವೋದಯ ಪಕ್ಷದಿಂದ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆಯಿಂದ ಸ್ಪರ್ಧಿಸಿದ್ದೇನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಎಂಟು ಕ್ಷೇತ್ರಗಳಲ್ಲಿ ಸ್ಪರ್ಧಿಸಲಾಗಿತ್ತು. ಒಂದು ಕ್ಷೇತ್ರದಲ್ಲಿ ಮಾತ್ರ ಗೆದ್ದಿದ್ದೇವೆ.

ಎನ್.ಡಿ.ಎ. ಮತ್ತು ಮಿತ್ರ ಪಕ್ಷಗಳ ವಿರುದ್ದವಾಗಿ ಮತ ಚಲಾಯಿಸುವಂತೆ ಜಾಗೃತಿಗೊಳಿಸಲಾಗುವುದು. 2014 ರ ಪಾರ್ಲಿಮೆಂಟ್ ಚುನಾವಣಾ ಪೂರ್ವದಲ್ಲಿ ನರೇಂದ್ರಮೋದಿ ರೈತರ ಸಾಲ ಮನ್ನ ಮಾಡುವುದಾಗಿ ಹೇಳಿ ಅಧಿಕಾರಕ್ಕೆ ಬಂದರು. ಎರಡನೆ ಬಾರಿಗೂ ಪ್ರಧಾನಿಯಾಗಿ ಹತ್ತು ವರ್ಷಗಳಲ್ಲಿ ಕಾರ್ಪೊರೇಟ್ ಕಂಪನಿಗಳ ಹದಿನಾಲ್ಕು ಲಕ್ಷ ರು.ಗಳ ಸಾಲ ಮನ್ನಾ ಮಾಡಿದರೆ ವಿನಃ ರೈತರ ಕಡೆ ತಿರುಗಿಯೂ ನೋಡಲಿಲ್ಲ ಎಂದರು.

ಸ್ವಾಮಿನಾಥನ್ ವರದಿ ಇದುವರೆಗೂ ಜಾರಿಗೊಳಿಸಿಲ್ಲ. ರೈತರಿಗೆ ಅತಿವೃಷ್ಟಿ ಪರಿಹಾರ ಕೊಟ್ಟಿಲ್ಲ. ಐದು ನೂರು ಒಂದು ಸಾವಿರ ರೂ. ಮುಖ ಬೆಲೆಯ ನೋಟುಗಳನ್ನು ಅಮಾನ್ಯೀಕರಣಗೊಳಿಸಿ ಸಿರಿವಂತರು ತಮ್ಮ ಬಳಿಯಿರುವ ಕಪ್ಪು ಹಣವನ್ನು ಬಿಳಿ ಮಾಡಿಸಿಕೊಳ್ಳಲು ಅನುಕೂಲ ಮಾಡಿದರಷ್ಟೆ. ರೈತರ ಆದಾಯ ದ್ವಿಗುಣವಾಗಲಿಲ್ಲ. ರೈತರು ಸಾವಿರಾರು ಕೋಟಿ ರು. ಬೆಳೆವಿಮೆ ಕಟ್ಟಿದ್ದಾರೆ. ಅಪ್ಪಿತಪ್ಪಿಯೂ ಬೆಳೆ ನಷ್ಟದ ಪರಿಹಾರ ರೈತರ ಕೈಸೇರಿಲ್ಲ. ಭದ್ರಾಮೇಲ್ದಂಡೆ ಯೋಜನೆಗೆ ಐದು ಸಾವಿರದ ಮುನ್ನೂರು ಕೋಟಿ ರು. ಘೋಷಿಸಿರುವ ಕೇಂದ್ರ ಸರ್ಕಾರ ನಯಾ ಪೈಸೆಯನ್ನು ಬಿಡುಗಡೆಗೊಳಿಸಿಲ್ಲ. ರಾಮ ಮಂದಿರದ ಹೆಸರಿನಲ್ಲಿ ಫಂಡ್ ಎತ್ತಿದೆ. ಕೃಷಿ, ಕೃಷಿ ಮಾರುಕಟ್ಟೆಯನ್ನು ಕಾರ್ಪೊರೇಟ್‍ಗಳಿಗೆ ನೀಡುವುದರಲ್ಲಿ ಅನುಮಾನವಿಲ್ಲ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಉಳಿಯುವುದಿಲ್ಲ. ಅದಕ್ಕಾಗಿ ಎಚ್ಚರಿಕೆಯಿಂದ ಮತ ಚಲಾಯಿಸಿ ಎಂದು ರಾಜ್ಯದ ಮತದಾರರನ್ನು ಎಚ್ಚರಿಸಲಾಗುವುದು ಎಂದರು.

ಸರ್ವೋದಯ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ, ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಬಸ್ತಿಹಳ್ಳಿ ಜಿ.ಸುರೇಶ್‍ಬಾಬು, ರಾಜ್ಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಪತ್ರಿಕಾಗೋಷ್ಠಿ ಯಲ್ಲಿ ಉಪಸ್ಥಿತರಿದ್ದರು. 

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಯುದ್ಧದಿಂದ ರಾಜ್ಯದಲ್ಲಿ ಸಿಲುಕಿರುವ ಪ್ರವಾಸಿಗರ ಆತಿಥ್ಯಕ್ಕೆ ಕ್ರಮ: ಎಚ್‌.ಕೆ.ಪಾಟೀಲ್‌
ಚಾಟ್‌ ಜಿಪಿಟಿಯಲ್ಲಿ ಐದು ಪ್ರಶ್ನೆ ಕೇಳಿದರೆ 500 ಲೀ. ನೀರು ಬಳಕೆ