ಜಿಟಿಡಿಗೆ ಆಮೇಲೆ ನಮ್ಮ ಶಕ್ತಿ ತೋರಿಸುವೆ : ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ

Published : Jan 25, 2025, 12:26 PM IST
HD Kumaraswamy

ಸಾರಾಂಶ

ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಆಮೇಲೆ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

  ಮೈಸೂರು : ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಅವರಿಗೆ ಆಮೇಲೆ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. 

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ತಮ್ಮ ಮೇಲೆ ಕ್ರಮ ಕೈಗೊಳ್ಳಲು ಧಂ ಬೇಕು ಎಂಬ ಶಾಸಕ ಜಿ.ಟಿ. ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯಿಸಿ, ಅವರು ಹಿರಿಯರು ನಮ್ಮ ಪಕ್ಷದಲ್ಲಿದ್ದಾರೆ. ಆ ಬಗ್ಗೆ ಆಮೇಲೆ ತೀರ್ಮಾನ ಕೈಗೊಳ್ಳುತ್ತೇವೆ. ನಮ್ಮ ಶಕ್ತಿ ಅಮೇಲೆ ತೋರಿಸುತ್ತೇವೆ ಎಂದರು.

ಕಾಂಗ್ರೆಸ್‌ ಅವರಿಗೆ ನಾಡಿನ ಜನತೆ ಒಳ್ಳೆ ಕೆಲಸ ಮಾಡಿ ಎಂದು ಅಧಿಕಾರ ಕೊಟ್ಟಿದ್ದಾರೆ. 18 ತಿಂಗಳಿನಿಂದ ಅವರ ನಡವಳಿಕೆ ನೋಡಿದರೆ ರಾಜ್ಯದ ಜನತೆಯ ಸಮಸ್ಯೆಗೆ ಪರಿಹಾರ ತರುವ ರೀತಿ ಕಾಣುತ್ತಿಲ್ಲ. ವಿರೋಧ ಪಕ್ಷಗಳನ್ನು ಅಸ್ಥಿರ ಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಆಡಳಿತಕ್ಕೆ ಕರ್ನಾಟಕಕ್ಕೆ ಒಳ್ಳೆಯ ಹೆಸರಿದೆ. ಅದನ್ನು ಸರ್ವನಾಶ ಮಾಡಲು ಕಾಂಗ್ರೆಸ್‌ ಅವರು ಹೊರಟ್ಟಿದ್ದಾರೆ ಎಂದು ದೂರಿದರು.

ಮುಖ್ಯಮಂತ್ರಿ ನಾವೆಲ್ಲ ಒಂದಾಗಿದ್ದೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾರಿಗೋಸ್ಕರ ಒಂದಾಗಿದ್ದಾರೆ‌. ಅಧಿಕಾರಕ್ಕೆ ಮತ್ತು ಕುರ್ಚಿಗಾಗಿ ಮಾತ್ರ ಒಂದಾಗುತ್ತಿದ್ದಾರೆ. ಜನರು ಕುರ್ಚಿ ಕೊಟ್ಟಿದ್ದಾರೆ. ಜನರಿಗೆ ಏನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದರು.

ಶ್ರೀರಾಮುಲು ಕಾಂಗ್ರೆಸ್‌ಗೆ ಹೋಗುವುದಿಲ್ಲ

ಶ್ರೀರಾಮುಲು ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಹೋಗುವುದಿಲ್ಲ ಸವಚಿವ ಎಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು. ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ಕಲಹ ಬಿಜೆಪಿಯ ಆಂತರಿಕ ವಿಚಾರ. ಬಿಜೆಪಿಯಲ್ಲಿ ಏನು ನಡೆಯುತ್ತಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಇಬ್ಬರೂ ಒಂದು ಕಾಲದಲ್ಲಿ ಆತ್ಮೀಯ ಸ್ನೇಹಿತರು, ಅಣ್ಣ ತಮ್ಮಂದಿರಕ್ಕಿಂತ ಚೆನ್ನಾಗಿದ್ದವರು. ಇಬ್ಬರ ಜಗಳವನ್ನು ಬಿಜೆಪಿಯ ನಾಯಕರೇ ಕುಳಿತು ಪರಿಹರಿಸಬೇಕು. ಈ ಬಗ್ಗೆ ನಾನು ಬಿಜೆಪಿ ನಾಯಕರಿಗೆ ಮನವಿ ಮಾಡುತ್ತೇನೆ. ಶ್ರೀರಾಮುಲು ನನ್ನ ಅಭಿಪ್ರಾಯದಲ್ಲಿ ಕಾಂಗ್ರೆಸ್‌ಗೆ ಹೋಗುವುದಿಲ್ಲ ಎಂದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಅಧಿಕಾರಕ್ಕಾಗಿ ಅಪವಿತ್ರ ರಾಜಕೀಯ ಮೈತ್ರಿ - ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ವೈರಿಗಳ ಮಿಲನ
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ವಿವಾದ