ಉತ್ತರ ಕನ್ನಡಕ್ಕಾಗಿ ಅನಂತ್‌ ಏನು ಮಾಡಿದ್ದಾರೆ?: ಸಿಎಂ ಸಿದ್ಧರಾಮಯ್ಯ

KannadaprabhaNewsNetwork |  
Published : Jan 16, 2024, 01:49 AM ISTUpdated : Jan 16, 2024, 11:21 AM IST
siddaramaih

ಸಾರಾಂಶ

ಇತ್ತೀಚೆಗೆ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಕ್ಸಮರ ಜೋರಾಗಿದ್ದು, ಇದಕ್ಕೆ ಪುಷ್ಟಿ ಎಂಬಂತೆ ಮುಖ್ಯಮಂತ್ರಿಗಳು ‘ಅನಂತಕುಮಾರ ಹೆಗಡೆ ಉತ್ತರ ಕನ್ನಡ ಜಿಲ್ಲೆಗೆ ಏನು ಕೆಲಸ ಮಾಡಿದ್ದಾರೆ ಎಂದು ಪ್ರಶ್ನೆ ಮಾಡಿದ್ದಾರೆ.

ಕನ್ನಡಪ್ರಭ ವಾರ್ತೆ ಹಾವೇರಿ

ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ಸಂಸದ ಅನಂತ ಕುಮಾರ್‌ ಹೆಗಡೆ ಅವರ ಕೊಡುಗೆ ಏನು? ಅವರು ಏನಾದರೂ ಕ್ಷೇತ್ರ ಅಭಿವೃದ್ಧಿ ಮಾಡಿದ್ದಾರಾ? ಬಡವರ ಕಷ್ಟ ಕೇಳಿದ್ದಾರಾ? ಈಗ ಲೋಕಸಭಾ ಚುನಾವಣೆ ಬಂದಿರುವುದರಿಂದ ಏನೇನೋ ಮಾತನಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ತಾಲೂಕಿನ ನರಸೀಪುರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಈಗಲಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ‘ಸಂಸ್ಕೃತಿ’ ಎಂಬ ಪದವಿದೆ ಎಂಬುದು ಗೊತ್ತಾಯಿತಲ್ಲ ಎಂಬ ಸಂಸದರ ಟೀಕೆಗೆ ಪ್ರತಿಕ್ರಿಯಿಸಿ, ಅನಂತಕುಮಾರ ಹೆಗಡೆ ಅವರು ಇಷ್ಟು ದಿನ ಎಲ್ಲಿದ್ದರು? ಅವರ ಪತ್ತೆಯೇ ಇರಲಿಲ್ಲ. ನಾಪತ್ತೆಯಾಗಿ ಬಿಟ್ಟಿದ್ದರು. 

ಅವರನ್ನು ಬಹುಮತದಿಂದ ಆರಿಸಿ ಕಳುಹಿಸಿದ ಕ್ಷೇತ್ರದ ಜನರಿಗೆ ಏನಾದರೂ ಸಹಾಯ ಮಾಡಿದ್ದಾರಾ? ಕ್ಷೇತ್ರಕ್ಕೆ ಏನಾದರೂ ಅಭಿವೃದ್ಧಿ ಕೆಲಸ ಮಾಡಿದ್ದಾರಾ? ಕ್ಷೇತ್ರದ ಬಡವರ ಕಷ್ಟ ಕೇಳಿದ್ದಾರಾ? ಈಗ ಚುನಾವಣೆ ಸಮೀಪಿಸುತ್ತಿದ್ದರಿಂದ ರಾಜಕೀಯವಾಗಿ ಏನೇನೋ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದೇ ವೇಳೆ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧವೂ ಹರಿಹಾಯ್ದ ಸಿಎಂ, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಅನಂತಕುಮಾರ ಹೆಗಡೆ ಅವರ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತಾರೆ ಎಂದರೆ ಅವರಿಗೂ ಸಂಸ್ಕೃತಿಯಿಲ್ಲ ಎಂದಾಯಿತು. ಸಂಸ್ಕೃತಿ ಎಂದರೆ ಮನುಷ್ಯತ್ವ. ಮನುಷ್ಯನಿಗೆ ಮನುಷ್ಯತ್ವವೇ ಮುಖ್ಯ ಎಂದು ಪ್ರತಿಪಾದಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಸ್ವಪಕ್ಷೀಯರಿಂದಲೇ ಜೆಡಿಎಸ್ ಪಕ್ಷ ಅಡಮಾನ: ರವೀಂದ್ರ
ತ.ನಾಡು ಕಾಂಗ್ರೆಸ್‌ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಕೆಶಿ