ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಶಿವಪುರದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಚುನಾವಣೆಯಲ್ಲಿ ಜೆಡಿಎಸ್ ಅಥವಾ ಬಿಜೆಪಿಯಲ್ಲಿ ಯಾರು ಅಭ್ಯರ್ಥಿ ಆಗಬೇಕು ಎಂಬ ಗೊಂದಲ ಮೂಡಿದೆ. ಈ ಎರಡು ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ಅದನ್ನು ಎದುರಿಸಲು ಕಾಂಗ್ರೆಸ್ ಸಿದ್ಧವಾಗಿದ್ದು. ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದೆ ಎಂದು ಭವಿಷ್ಯ ನುಡಿದರು.
ಸಂಸದ ಪ್ರಜ್ವಲ್ ರೇವಣ್ಣ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ಈ ಇಬ್ಬರ ಭೇಟಿ ಬಗ್ಗೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ ಎಂದರು.ಮಂಡ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕುರಿತಂತೆ ಹೈಕಮಾಂಡ್ ತೀರ್ಮಾನವೇ ಅಂತಿಮ. ಈಗಾಗಲೇ ಮೂವರು ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಿ ಪಕ್ಷದ ಹೈಕಮಾಂಡ್ಗೆ ಸಲ್ಲಿಸಲಾಗಿದೆ. ಆದರೆ, ಆಕಾಂಕ್ಷಿಗಳ ಹೆಸರು ಅಥವಾ ಅಂತಿಮ ಅಭ್ಯರ್ಥಿಯ ಹೆಸರನ್ನು ಈಗ ಬಹಿರಂಗ ಪಡಿಸುವುದಿಲ್ಲ. ಈ ಬಗ್ಗೆ ತೀರ್ಮಾನ ಕೈಗೊಳ್ಳುವ ಅಧಿಕಾರ ಎಐಸಿಸಿ ಹಾಗೂ ಕೆಪಿಸಿಸಿ ಮಾತ್ರವೇ ಇದ್ದು. ಈ ವಿಚಾರದಲ್ಲಿ ನಾವು ಮೂಗು ತೂರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನಿಗಮ ಮಂಡಳಿ ಅಧ್ಯಕ್ಷರ ನೇಮಕದ ವಿಚಾರದಲ್ಲಿ ಯಾರಿಗೂ ಅಸಮಾಧಾನವಿಲ್ಲ. ವಂಚಿತರಿಗೆ ಮತ್ತೊಂದು ಪಟ್ಟಿಯಲ್ಲಿ ಅವಕಾಶ ಕಲ್ಪಿಸಲಾಗುವುದು. ಮೊದಲ ಹಂತದಲ್ಲಿ ಪಕ್ಷದ ಶಾಸಕರಿಗೆ ಆದ್ಯತೆ ನೀಡಲಾಗಿದೆ. ಇನ್ನು ಎರಡು ಮತ್ತು ಮೂರನೇ ಪಟ್ಟಿ ಬಿಡುಗಡೆಯಾಗುತ್ತಿದೆ ಎಂದರು.
ಗ್ಯಾರಂಟಿ ಪರಿಶೀಲನೆಗೆ ಪ್ರಾಧಿಕಾರ ರಚನೆ:
ಪ್ರಾಧಿಕಾರ ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಅರ್ಹ ಫಲಾನುಭವಿಗಳಿಗೆ ಯೋಜನೆಗಳನ್ನು ತಲುಪಿಸುವ ಕೆಲಸ ಮಾಡಲಿದೆ ಎಂದರು.
ಎಚ್ಡಿಕೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳು ಬಿಜೆಪಿಯೊಂದಿಗೆ ಸೇರಿದ್ದಾರೆ: ಎನ್.ಚಲುವರಾಯಸ್ವಾಮಿ
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಳೀದುಳಿದ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ಸಂಸದೆ ಸುಮಲತಾ ಅವರನ್ನು ಭೇಟಿ ಮಾಡಿದಲ್ಲಿ ಅಚ್ಚರಿ ಪಡಬೇಕಾಗಿಲ್ಲ ಎಂದು ಲೇವಡಿ ಮಾಡಿದರು.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಜನರು ತಿರಸ್ಕರಿಸಿದ್ದಾರೆ. ಇದರ ಅರ್ಥ ಇನ್ನು ರಾಜ್ಯಕ್ಕೆ ಜೆಡಿಎಸ್ ಪಕ್ಷದ ಅವಶ್ಯಕತೆ ಎಂಬುದಾಗಿದೆ. ಜನ ಸಾಮಾನ್ಯರ ಜೊತೆ ನಿಲ್ಲದಿರುವುದು ಮತ್ತು ಕಾರ್ಯಕರ್ತರಿಗೆ ಅವಕಾಶ ನೀಡಿದೆ ಪಕ್ಷವನ್ನು ಕುಟುಂಬಕ್ಕೆ ಸೀಮಿತಗೊಳಿಸಿದ್ದರಿಂದಲೇ ಇವತ್ತು ಜೆಡಿಎಸ್ ಹೀನಾಯ ಸ್ಥಿತಿಗೆ ಬರಲು ಕಾರಣವಾಗಿದೆ ಎಂದು ಟೀಕಿಸಿದರು.