ಮೇ 9ಕ್ಕೆ ಚಿತ್ರದುರ್ಗದಲ್ಲಿ ಯಡಿಯೂರಪ್ಪ ಉತ್ಸವ?

Published : Apr 21, 2026, 06:20 AM IST
BS Yediyurappa

ಸಾರಾಂಶ

ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜಕಾರಣಕ್ಕೆ ಪ್ರವೇಶಿಸಿ 50 ವಸಂತಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಬೃಹತ್ ಸಮಾವೇಶ ಬರುವ ಮೇ 9ರಂದು ನಡೆಯುವ ನಿರೀಕ್ಷೆಯಿದೆ.

 ಬೆಂಗಳೂರು :  ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜಕಾರಣಕ್ಕೆ ಪ್ರವೇಶಿಸಿ 50 ವಸಂತಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಬೃಹತ್ ಸಮಾವೇಶ ಬರುವ ಮೇ 9ರಂದು ನಡೆಯುವ ನಿರೀಕ್ಷೆಯಿದೆ.

ಅಮಿತ್ ಶಾ ಅವರು ಈ ಸಮಾವೇಶದಲ್ಲಿ ಭಾಗಿ ಸಂಭವ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 4ರಂದು ಹೊರಬಿದ್ದ ಬಳಿಕ ಆಗಮಿಸುವುದಾಗಿ ತಿಳಿಸಿದ್ದಾರೆ. ಬಹುತೇಕ ಮೇ 9ರಂದು ಸಮಾವೇಶ ನಡೆಯಬಹುದು ಎಂದು ಮೂಲಗಳು ತಿಳಿಸಿವೆ.

ಇನ್ನೂ ಅಂತಿಮಗೊಂಡಿಲ್ಲ

ಇದು ಅಮಿತ್ ಶಾ ಅವರ ಭೇಟಿಯ ಮೇಲೆ ನಿರ್ಧರಿತವಾಗುವುದರಿಂದ ಇನ್ನೂ ಅಂತಿಮಗೊಂಡಿಲ್ಲ. ಮೇ ತಿಂಗಳಲ್ಲೇ ಸಮಾವೇಶ ನಡೆಸಬೇಕು ಎಂಬ ನಿರ್ಣಯವಾಗಿದೆ. ಇದಕ್ಕೆ ಪೂರಕವಾಗಿ ತೆರೆಮರೆಯಲ್ಲಿ ಸಿದ್ಧತೆಗಳೂ ಆರಂಭಗೊಂಡಿವೆ. ಶೀಘ್ರದಲ್ಲೇ ಅಧಿಕೃತ ದಿನಾಂಕ ಪ್ರಕಟಿಸಲಾಗುವುದು ಎಂದು ಪಕ್ಷದ ಹಿರಿಯ ನಾಯಕರು ಮಾಹಿತಿ ನೀಡಿದ್ದಾರೆ

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಕಾಂಗ್ರೆಸ್ಸಲ್ಲಿ ದಾವಣಗೆರೆ ಮುಸ್ಲಿಂ ಕಿಚ್ಚು ಧಗಧಗ
ತಮಿಳುನಾಡಿನ ಥಳಿ, ಉತ್ತಂಗರೈ ಕ್ಷೇತ್ರದಲ್ಲಿ ಡಿ.ಕೆ.ಶಿವಕುಮಾರ್‌ ಬಿರುಸಿನ ಪ್ರಚಾರ