ಕನ್ನಡಪ್ರಭ ವಾರ್ತೆ ಬೆಂಗಳೂರು
ಬೆಂಗಳೂರು ವಿಶ್ವವಿದ್ಯಾಲಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕವು ಮಂಗಳವಾರ ಆಯೋಜಿಸಿದ್ದ ‘ಯುಜಿಸಿಯ ಹೊಸ ಕರಡು ನಿಯಮಾವಳಿಗಳ ಸಾಧಕ-ಬಾಧಕಗಳು’ ಕುರಿತ ವಿಚಾರಗೋಷ್ಠಿಯಲ್ಲಿ ಮಾತನಾಡಿದರು. ಸ್ವಾತಂತ್ರ್ಯ ಭಾರತದಲ್ಲಿ 12ರಿಂದ 13 ಶಿಕ್ಷಣ ನೀತಿಗಳನ್ನು ಕಂಡಿದ್ದೇವೆ. ಸದ್ಯ ಯುಜಿಸಿ ತಂದಿರುವ ಹೊಸ ಕರಡು ನಿಯಮಾವಳಿಗಳು ಈವರೆಗೆ ಸಹಾಯಕ ಪ್ರಾಧ್ಯಾಪಕನಾಗಬೇಕಾದರೆ ನಿರ್ದಿಷ್ಟ ವಿಷಯ ಜ್ಞಾನ ಮತ್ತು ಆಳವಾದ ಅಧ್ಯಯನದ ಅಗತ್ಯವನ್ನೇ ಸಡಿಲಗೊಳಿಸಿದೆ.
ಅಲ್ಲದೆ, ಪಿಎಚ್.ಡಿ ಅಗತ್ಯವನ್ನೂ ತಗ್ಗಿಸಿದೆ. ಇದರಿಂದ ಪ್ರಾಧ್ಯಾಪಕರಲ್ಲಿ ಸಂಶೋಧನಾ ಪ್ರವೃತ್ತಿ, ಸುದೀರ್ಘ ಅಧ್ಯಯನದ ಆಸಕ್ತಿ ಕುಂಟುತ್ತದೆ. ಪ್ರಾಧ್ಯಾಪಕರೇ ಸಂಶೋಧನಾ ಆಸಕ್ತಿ ರೂಡಿಸಿಕೊಳ್ಳದಿದ್ದರೆ ವಿದ್ಯಾರ್ಥಿಗಳಲ್ಲಿ ಸಂಶೋಧನಾ ಅನ್ವೇಷಣಾ, ಅಧ್ಯಯನ ಪ್ರವೃತ್ತಿ ವೃದ್ಧಿಸಲು ಹೇಗೆ ಸಾಧ್ಯ? ಎಂದರು.ಕುಲಪತಿ ನೇಮಕದಲ್ಲೂ ಸಾಕಷ್ಟು ಸಡಿಲಿಕೆ ತರಲಾಗಿದೆ. ಶಿಕ್ಷಣ ವ್ಯವಸ್ಥೆಯ ಅರಿವಿಲ್ಲದವರು ಕುಲಪತಿಗಳಾಗಬಹುದು ಎಂಬ ಚಿಂತನೆ ಸಮಂಜಸವಲ್ಲ. ಶಿಕ್ಷಣ ಕ್ಷೇತ್ರದಲ್ಲಿ ಅನುಭವ ಹೊಂದಿದ ಮಾತ್ರಕ್ಕೆ ಪ್ರಾಧ್ಯಾಪಕರಿಗೆ ಎಚ್ಎಎಲ್, ಬಿಹೆಚ್ಇಎಲ್ ಸಂಸ್ಥೆಗಳಲ್ಲಿ ನಿರ್ದೇಶಕ ಹುದ್ದೆ ಪಡೆಯಲು ಸಾಧ್ಯವೇ? ಬೇರೆ ಕ್ಷೇತ್ರದಲ್ಲಿ ಇಲ್ಲದ ಸಡಿಲಿಕೆ, ಉದಾರತೆ ಉನ್ನತ ಶಿಕ್ಷಣದಲ್ಲಿ ಮಾತ್ರ ಏಕೆ ಎಂದು ಪ್ರಶ್ನಿಸಿದರು. ಅಲ್ಲದೆ, ಕುಲಪತಿ ನೇಮಕದಲ್ಲಿ ರಾಜ್ಯ ಸರ್ಕಾರದ ಅಧಿಕಾರ ಮೊಟಕುಗೊಳಿಸುವುದು ಸರಿಯಲ್ಲ, ಪರಿಗಣಿಸಬೇಕು ಎಂದು ಆಗ್ರಹಿಸಿದರು.
ವಿಚಾರಗೋಷ್ಠಿಯಲ್ಲಿ ಕೋಶಾಧಿಕಾರಿ ಜಿ.ಕೃಷ್ಣಮೂರ್ತಿ, ವಿಜ್ಞಾನ ವಿಭಾಗದ ಡೀನ್ ಪ್ರೊ.ಅಶೋಕ್ ಡಿ.ಹಂಜಗಿ, ಶಿಕ್ಷಣ ವಿಭಾಗದ ಡೀನ್ ಪ್ರೊ. ಪಿ.ಸಿ.ಕೃಷ್ಣಮೂರ್ತಿ, ಪ್ರೊ.ಮುರುಳಿಧರ್ ಉಪಸ್ಥಿತರಿದ್ದರು.