ಕನ್ನಡಪ್ರಭ ವಾರ್ತೆ ಮೈಸೂರು
ಆರೋಪಿ ಮನೋರಂಜನ್ ಎಂಬಾತನನ್ನು ಎಸ್ಎಫ್ಐ ಜಿಲ್ಲಾಧ್ಯಕ್ಷ ಆದ ತಮ್ಮ ಹಳೆ ಪೋಟೋ ಬಳಸಿ, ಇವನೇ ಮನೋರಂಜನ್ ಎಂದು ಎಸ್ಎಫ್ಐ ಹಾಗೂ ನನ್ನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಅಂತಹವರ ಮೇಲೆ ಸೂಕ್ತ ಕಾನೂನು ಕ್ರಮಕ್ಕೆ ಜರುಗಿಸುವಂತೆ ಒತ್ತಾಯಿಸಿ ವಿಜಯ್ ಕುಮಾರ್ ದೂರು ನೀಡಿದ್ದಾರೆ. ಈ ವೇಳೆ ಎಸ್ಎಫ್ಐ ಕಾರ್ಯದರ್ಶಿ ಅಭಿ, ವೀರಭದ್ರ, ಕರ್ನಾಟಕ ಪ್ರಾಂತ ರೈತ ಸಂಘದ ಜಗದೀಶ್ ಸೂರ್ಯ, ಕೆ. ಬಸವರಾಜ್ ಇದ್ದರು.