ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪ್ರಕರಣ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದ್ದು, ಸೆಸ್ಕಾಂ ಅಧಿಕಾರಿಗಳ ವಿರುದ್ದ ಗ್ರಾಮಸ್ಥರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತರಲಾಗಿದೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.
ತಂತಿ, ಕಂಬ ಬದಲಿಸದ ಅಧಿಕಾರಿಗಳು:ತಾಲೂಕಿನಾದ್ಯಂತ ಸೆಸ್ಕಾಂ ಇಲಾಖೆಯವರ ನಿರ್ಲಕ್ಷ್ಯದಿಂದ ಪದೇಪದೇ ಇಂತಹ ಘಟನೆಗಳು ಸಂಭವಿಸುತ್ತಿದ್ದರೂ ಹಳೆಯ ವಿದ್ಯುತ್ ತಂತಿಗಳು ಮತ್ತು ಕಂಬಗಳನ್ನು ಬದಲಿಸುವ ಗೋಜಿಗೆ ಹೋಗದಿರುವುದು ಇಂತಹ ಘಟನೆಗಳು ನಡೆಯಲು ಕಾರಣ ಎಂದು ತಾಲೂಕು ರೈತಸಂಘದ ಅಧ್ಯಕ್ಷ ಕಾರಿಗನಹಳ್ಳಿ ಪುಟ್ಟೇಗೌಡ ದೂರಿದ್ದಾರೆ. ವಿದ್ಯುತ್ ಅವಘಡಗಳಿಂದ ಮೃತಪಟ್ಟಿರುವ ವ್ಯಕ್ತಿಗಳ ಕುಟುಂಬಕ್ಕೆ ಕನಿಷ್ಠ 25 ಲಕ್ಷ ರು. ಪರಿಹಾರ ನೀಡಬೇಕು. ನಿರ್ಲಕ್ಷ್ಯ ಮತ್ತು ಕರ್ತವ್ಯ ಲೋಪ ಮಾಡಿರುವ ಅಧಿಕಾರಿಗಳ ವಿರುದ್ದ ಕ್ರಿಮಿನಲ್ ಮೊಕ್ಕದ್ದಮೆ ದಾಖಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.
24ಕೆಎಂಎನ್ ಡಿ27
ರೈತ ರವಿಕುಮಾರ್