ಕಾವೇರಿ: ದುರ್ಬೀನು ಹಾಕಿಕೊಂಡು ವಿನೂತನ ಪ್ರತಿಭಟನೆ

KannadaprabhaNewsNetwork |  
Published : Nov 04, 2023, 12:31 AM IST
ಕಾವೇರಿ ಕಿಚ್ಚು :  ದುರ್ಬೀನು ಹಾಕಿಕೊಂಡು ವಿನೂತನ ಪ್ರತಿಭಟನೆ | Kannada Prabha

ಸಾರಾಂಶ

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 52 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಶುಕ್ರವಾರ ದುರ್ಬೀನು ಹಾಕಿಕೊಂಡು ವಿನೂತನ ಪ್ರತಿಭಟಿಸಲಾಯಿತು.

ರಾಜ್ಯ, ಕೇಂದ್ರ, ನೀರು ಮಂಡಳಿಗಳ ವಿರುದ್ದ ಧಿಕ್ಕಾರ ಘೋಷಣೆ ಕನ್ನಡಪ್ರಭ ವಾರ್ತೆ ಚಾಮರಾಜನಗರ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 52 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಶುಕ್ರವಾರ ದುರ್ಬೀನು ಹಾಕಿಕೊಂಡು ವಿನೂತನ ಪ್ರತಿಭಟಿಸಲಾಯಿತು. ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ದುರ್ಬೀನು ಹಾಕಿಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ಕಳೆದ 52 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಕೂಡ ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ ರಾಜ್ಯ ಸರ್ಕಾರ, ಸಂಸದರು, ಕೇಂದ್ರ ಸಚಿವರು ನಾಪತ್ತೆಯಾಗಿದ್ದಾರೆ ಎಂದು ಆರೋಪಿಸಿ ರಾಜ್ಯ ಸರ್ಕಾರ, ಸಂಸದರು, ಕೇಂದ್ರ ಸಚಿವರನ್ನು ಹುಡುಕಿಕೊಂಡುವಂತೆ ನಾವೆಲ್ಲರೂ ದುರ್ಬೀನು ಹಾಕಿಕೊಂಡು ವಿನೂತನ‌ ಪ್ರತಿಭಟನೆ ನಡೆಸಿದ್ದೇವೆ ಎಂದರು. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಶಾ.ಮುರಳಿ, ಚಾ.ವೆಂ.ರಾಜ್ ಗೋಪಾಲ್, ಪಣ್ಯದಹುಂಡಿ ರಾಜು,ಚಾ.ಹ.ರಾಮು,ಮಹೇಶ್ ಗೌಡ, ಸೋಮವಾರಪೇಟೆ ಮಂಜು, ನಂಜುಂಡಸ್ವಾಮಿ, ಲಿಂಗರಾಜು, ಚಾ. ಗು.ಪುರುಷೋತ್ತಮ್, ವೀರಭದ್ರ, ತಾಂಡವಮೂರ್ತಿ, ರಾಜಪ್ಪ, ಮೂಡ್ಲುಪುರಪ್ರಕಾಶ್ ಇತರರು ಹಾಜರಿದ್ದರು. -------- 3ಸಿಎಚ್‌ಎನ್‌7: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾಪಡೆ ವತಿಯಿಂದ ಚಾಮರಾಜನಗರದಲ್ಲಿ ದುರ್ಬೀನು ಹಾಕಿಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. --------

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಹಳದಿ ಮಾರ್ಗ ಮೆಟ್ರೋಗೆ ಆ.10ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ