ಕನ್ನಡಪ್ರಭ ವಾರ್ತೆ ಮೈಸೂರು
ತಮಿಳುನಾಡು ನೀಲಗಿರಿ ಮೂಲದ ಕವೀಶ (21) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಇವರು ಖಾಸಗಿ ಕಾನೂನು ಕಾಲೇಜಿನಲ್ಲಿ ಓದುತ್ತಿದ್ದು, ಊಟಿ ನಿವಾಸಿ ಕಿರಣ್ ಎಂಬವರನ್ನು ಪ್ರೀತಿಸುತ್ತಿದ್ದರು. ಈ ವಿಚಾರ ಎರಡು ಮನೆಯವರಿಗೆ ಗೊತ್ತಾಗಿ, ಪೊಷಕರನ್ನ ಒಪ್ಪಿಸಿ ಮದುವೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ನಿಶ್ಚಿತಾರ್ಥದ ನಂತರ ಕಿರಣ್ ವರದಕ್ಷಿಣೆಯಾಗಿ ಕಾರು ಹಾಗೂ ಚಿನ್ನ ನೀಡಬೇಕೆಂದು ಪೀಡಿಸಿದ್ದಾನೆ. ಇಲ್ಲದಿದ್ದಲ್ಲಿ ಮದುವೆ ನಿಲ್ಲಿಸುವುದಾಗಿ ಬೆದರಿಸಿದ್ದಾನೆ. ಇದರಿಂದಾಗಿ ಮನನೊಂದ ಕವೀಶ ತಾನು ತಂಗಿದ್ದ ಹಾಸ್ಟೆಲ್ ನಲ್ಲಿ ನೇಣಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು, ಕಿರಣ್ ಹಾಗೂ ಆತನ ಪೋಷಕರ ವಿರುದ್ಧ ಕ್ರಮ ಜರುಗಿಸುವಂತೆ ಕವೀಶ ಪೋಷಕರು ದೂರು ನೀಡಿದ್ದಾರೆ.ಈ ಸಂಬಂಧ ಕುವೆಂಪುನಗರ ಪೊಲೀಸ್ ಠಾಣೆಯ ಪ್ರಕರಣ ದಾಖಲಾಗಿದೆ.