ಫೋಟೋ- 13ಎಂವೈಎಸ್ 29
ಲೋಕಸಭಾ ಚುನಾವಣೆ ಹತ್ತಿರವಾದರೆ ಒಂದಿಲ್ಲೊಂದು ರೀತಿಯ ಭದ್ರತಾ ವೈಫಲ್ಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಆರೋಪಿಸಿದ್ದಾರೆ.
2001ರಲ್ಲಿ ಎಲ್.ಕೆ. ಅಡ್ವಾಣಿ ಅವರು ಗೃಹ ಸಚಿವರಾಗಿದ್ದಾಗ ಸಂಸತ್ ಮೇಲೆ ದಾಳಿ ನಡೆದಿತ್ತು. ಕಳೆದ ಬಾರಿಯ ಚುನಾವಣೆ ಸಂದರ್ಭದಲ್ಲಿ ಭದ್ರತಾ ವೈಫಲ್ಯದ ಪರಿಣಾಮ ಪುಲ್ವಾಮ ಗಡಿಯ ಒಳಗೆ ಬರೋಬ್ಬರಿ 40 ಕೆಜಿಯಷ್ಟು ಆರ್.ಡಿ.ಎಕ್ಸ್ ಸ್ಪೋಟದಿಂದ ನಮ್ಮ ಸೈನಿಕರ ಅಮೂಲ್ಯ ಜೀವವು ಹೋಗುವಂತಾಯಿತು.ಅಚ್ಚರಿ ಎಂದರೆ ಇಲ್ಲಿಯವರೆಗೂ ಕೂಡಾ ಪುಲ್ವಾಮ ಗಡಿಯಲ್ಲಿ ಆರ್.ಡಿ.ಎಕ್ಸ್ ಹೇಗೆ ಬಂತು ಎಂಬುದರ ಬಗ್ಗೆ ಯಾವ ತನಿಖೆಯೂ ಆಗಿಲ್ಲ. ಈಗ ಮತ್ತೆ ಲೋಕಸಭೆಯೊಳಗೆ ಭದ್ರತಾ ವೈಫಲ್ಯದಿಂದಾಗಿ ಆತಂಕ ಸೃಷ್ಟಿ ಆಗಿದ್ದು ನಮ್ಮ ಮೈಸೂರಿನ ಸಂಸದರೇ ಆಗಂತುಕ ಆರೋಪಿಗೆ ಪಾಸ್ ನೀಡಿರುದು ಸ್ಪಷ್ಟವಾಗಿದೆ.