ಕನ್ನಡಪ್ರಭ ವಾರ್ತೆ ಬೆಂಗಳೂರು
ಗುರುವಾರ ಉತ್ತಮ ಗುಣಮಟ್ಟದ ಪ್ರಥಮ ದರ್ಜೆ ಈರುಳ್ಳಿ ದರ ₹80 - ₹90 ತಲುಪಿದ್ದರೆ, ಟೊಮೆಟೋ ₹60 ವರೆಗೂ ಮಾರಾಟವಾಗಿದೆ. ಹಾಪ್ಕಾಮ್ಸ್ನಲ್ಲಿ ಈರುಳ್ಳಿ ಕೇಜಿ ₹100ಕ್ಕೆ ಮಾರಾಟವಾಗಿದ್ದರೆ, ಬೆಳ್ಳುಳ್ಳಿ ಕೇಜಿಗೆ ₹547 ಆಗಿ ದಾಖಲೆ ಬರೆದಿದೆ. ಸಾಮಾನ್ಯ ಮಾರುಕಟ್ಟೆಯಲ್ಲೂ ಬೆಳ್ಳುಳ್ಳಿ ಗರಿಷ್ಠ ₹400 - ₹500 ಬೆಲೆಯಿತ್ತು. ನಿತ್ಯ ಅಗತ್ಯವಾದ ಕೊತ್ತಂಬರಿ ಮತ್ತು ಕರಿಬೇವಿನ ಸೊಪ್ಪು ಕ್ರಮವಾಗಿ ಕೇಜಿಗೆ ₹98- ₹155 ಮತ್ತು ₹135ರಷ್ಟಿತ್ತು.
ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರದ ರೈತರಿಂದ ಬೆಂಗಳೂರಿಗೆ ತರಕಾರಿ ಕಡಿಮೆ ಪೂರೈಕೆಯಾಗುತ್ತಿದೆ. ಆದರೆ ಬರುತ್ತಿರುವ ತರಕಾರಿ ಕಳಪೆಯಾಗಿದೆ. ಹೀಗಾಗಿ ದರ ಹೆಚ್ಚಳವಾಗುತ್ತಿದೆ. ಮಳೆಯಿಂದಾಗಿ ಬೆಳೆಗೆ ಹಾನಿ ಆಗಿರುವುದರಿಂದ ಕಲಾಸಿಪಾಳ್ಯಕ್ಕೆ ಟೊಮೆಟೋ ತೀರಾ ಕಡಿಮೆ ಬರುತ್ತಿದೆ. ಸಾಮಾನ್ಯವಾಗಿ ಬೇಸಿಗೆಯ ಏಪ್ರಿಲ್-ಮೇ ತಿಂಗಳಲ್ಲಿ ಟೊಮೆಟೋ ಬೆಲೆ ಏರುತ್ತದೆ. 12 ಕೇಜಿ ಬಾಕ್ಸ್ನ ಸಗಟು ದರವೇ ₹480 ಇತ್ತು. ಈ ಬಾರಿ, ಮಳೆ ಮತ್ತು ಮೋಡ ಕವಿದ ವಾತಾವರಣ ಮತ್ತು ಚಳಿಗಾಲದಿಂದ ಬೆಳೆ ಹಾಳಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಬೆಲೆ ಇನ್ನಷ್ಟು ಹೆಚ್ಚುವ ಸಾಧ್ಯತೆಯೂ ಇದೆ ಎಂದು ವ್ಯಾಪಾರಿಗಳು ಹೇಳಿದರು.ಜತೆಗೆ, ಸೀಸನ್ ಆರಂಭದಿಂದ ಯಶವಂತಪುರ, ದಾಸನಪುರ ಎಪಿಎಂಸಿಗೆ ಮಾರುಕಟ್ಟೆಗೆ ಕರ್ನಾಟಕದ ಈರುಳ್ಳಿ ಕಡಿಮೆಯೇ ಬರುತ್ತಿದೆ. ಈ ವಾರದ ಮಳೆಯ ಪರಿಣಾಮ ಈರುಳ್ಳಿಯ ಗುಣಮಟ್ಟ ಹಾಳಾಗಿದೆ. ಈರುಳ್ಳಿಯ ಸಗಟು ಬೆಲೆಯೇ ₹65 - ₹70 ಆಗಿದೆ ಎಂದು ವರ್ತಕರು ತಿಳಿಸಿದ್ದಾರೆ. ಜತೆಗೆ ನಗರದ ಅಲ್ಲಲ್ಲಿ ಎನ್ಸಿಸಿಎಫ್ನಿಂದ ಕಡಿಮೆ ಬೆಲೆಗೆ ಮಾರಲಾಗುತ್ತಿರುವ ಚಿಕ್ಕ ಗಾತ್ರದ ಈರುಳ್ಳಿಗೆ ಬೇಡಿಕೆ ಬಂದಿದೆ.
ಇನ್ನು ಚಳಿಗಾಲದ ನೆಚ್ಚಿನ ಸೊಗಡವರೆ ಬೆಳೆ ಮಾರುಕಟ್ಟೆಗೆ ಇನ್ನೂ ಬಂದಿಲ್ಲ. ಕಡಿಮೆ ಪ್ರಮಾಣದಲ್ಲಿ ಬಂದಿದ್ದರೂ ಸೊಗಡು ಇರದ ಕಾರಣಕ್ಕೆ ಹೆಚ್ಚಿನ ಗ್ರಾಹಕರು ಇಷ್ಟಪಡುತ್ತಿಲ್ಲ. ಈ ಕಾರಣದಿಂದ ಬೆಲೆ ಹೆಚ್ಚಳಗೊಂಡಿದ್ದು, ಸದ್ಯದ ದರ ಪ್ರತಿ ಕೇಜಿಗೆ ₹95-₹110 ಗಳಾಗಿವೆ. ಡಿಸೆಂಬರ್ ಅಂತ್ಯ, ಸಂಕ್ರಾಂತಿ ವೇಳೆಗೆ ಹುಣಸೂರಿನ ಅವರೆ ಬರಲಿದ್ದು, ಆಗಿನ ಬೆಲೆ ಕಾದುನೋಡಬೇಕು ಎಂಬುದು ವ್ಯಾಪಾರಿಗಳು ಹೇಳುತ್ತಾರೆ.
ಇನ್ನು, ನುಗ್ಗಿಕಾಯಿ ಕೂಡಾ ಮಾರುಕಟ್ಟೆಯಲ್ಲಿ ವಿರಳವಾಗಿದ್ದು, ಒಂದಕ್ಕೆ ₹12- ₹13 ನಂತೆ ಮಾರಲಾಗುತ್ತಿದೆ.ತರಕಾರಿ ಬೆಲೆ
ಈರುಳ್ಳಿ - ₹80- ₹90ಬೆಳ್ಳುಳ್ಳಿ - ₹500
ಬದನೆಕಾಯಿ - ₹40-₹56
ಡಬಲ್ ಬೀನ್ಸ್ - ₹120ಸೌತೆಕಾಯಿ - ₹28
ಮೂಲಂಗಿ - ₹50 - ₹70ಕ್ಯಾರೆಟ್ ₹80
ಹಾಗಲಕಾಯಿ - ₹40
ಬೆಂಡೆಕಾಯಿ - ₹60ಆಲೂಗಡ್ಡೆ - ₹50- ₹60
ಹೂಕೋಸು - ₹40ಮಳೆಯಿಂದ ತರಕಾರಿ ಹೆಚ್ಚು ಡ್ಯಾಮೇಜ್ ಬರುತ್ತಿದ್ದು, ಸಗಟು ಮಾರುಕಟ್ಟೆಯಲ್ಲೇ ಈರುಳ್ಳಿ, ಟೊಮೆಟೋ ದರ ವಿಪರೀತವಾಗಿದೆ. ಹೀಗಾಗಿ ಚಿಲ್ಲರೆ ವ್ಯಾಪಾರಸ್ಥರೂ ದರ ಹೆಚ್ಚಿಸಬೇಕಾದುದು ಅನಿವಾರ್ಯ.
-ನಂಜಪ್ಪ, ವಿಜಯನಗರ ತರಕಾರಿ ವ್ಯಾಪಾರಸ್ಥ.ಮಳೆ ಪರಿಣಾಮ ಸಗಟು ಮಾರುಕಟ್ಟೆಗೆ ತರಕಾರಿ ಕಡಿಮೆ ಬಂದಿದೆ. ಹತ್ತು ದಿನ ಬೆಲೆಯೇರಿಕೆ ಕಾಣಬಹುದು. ಬಳಿಕ ಯಥಾಸ್ಥಿತಿಗೆ ಬರಲಿದೆ.
-ರಾಜಣ್ಣ, ಕಲಾಸಿಪಾಳ್ಯ ತರಕಾರಿ ಎಪಿಎಂಸಿ ಅಧಿಕಾರಿ.