ಅಧಿಕಾರಿಗಳಿಗೆ ದರ್ಶನ್ ಪುಟ್ಟಣ್ಣಯ್ಯ ತಾಕೀತು
ಬರದ ಛಾಯೆ ಎದುರಾಗಿರುವುದರಿಂದ ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ, ಮೇವಿನ ಸಮಸ್ಯೆಗಳು ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಸೂಚಿಸಿದರು. ಒಂದು ವೇಳೆ ಕುಡಿಯುವ ನೀರಿನ ಸಮಸ್ಯೆ ಎದುರಾದರೆ ತಕ್ಷಣವೇ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆದು ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಿ, ತಾಲೂಕಿನಲ್ಲಿ ನೀರಿನ ಸಮಸ್ಯೆ ಎದುರಾಗದಂತೆ ಕ್ರಮವಹಿಸಿ ಎಂದು ತಾಕೀತು ಮಾಡಿದರು. ಅಧಿಕಾರಿಗಳು ಜನಸಾಮಾನ್ಯರ ಕಷ್ಟಕಾರ್ಪಣ್ಯಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು. ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಸಕಾಲದಲ್ಲಿ ಪಿಂಚಣಿ ತಲುಪುವಂತೆ ಕ್ರಮವಹಿಸಿ ಹೊಸದಾಗಿ ಅರ್ಹರನ್ನು ಗುರುತಿಸಿ ಸೇರ್ಪಡೆ ಮಾಡಬೇಕು ಎಂದು ಸೂಚಿಸಿದರು. ಸಭೆಯಲ್ಲಿ ತಹಸೀಲ್ದಾರ್ ಶ್ರೇಯಸ್, ತಾಪಂ ಇಓ ಲೋಕೇಶ್ಮೂರ್ತಿ ಸೇರಿದಂತೆ ತಾಲೂಕು ಮಟ್ಟದ ಹಲವು ಅಧಿಕಾರಿಗಳು ಭಾಗವಹಿಸಿದ್ದರು.
------24ಕೆಎಂಎನ್ ಡಿ21