ಅಯೋಧ್ಯೆ: ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಪನೆಗೆ ಭರದಿಂದ ಸಿದ್ಧತೆ ನಡೆಯುತ್ತಿರುವ ನಡುವೆಯೇ, ನ.9ರಂದು ಅಯೋಧ್ಯೆಯಲ್ಲಿ ಸಚಿವ ಸಂಪುಟದ ಸಭೆ ನಡೆಸಲು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ.1989ರಲ್ಲಿ ನ.9ರಂದೇ ವಿಶ್ವ ಹಿಂದೂ ಪರಿಷತ್ನಿಂದ ರಾಮಮಂದಿರದ ಶಿಲಾನ್ಯಾಸ ನೆರವೇರಿತ್ತು ಹಾಗೂ 2019ರಲ್ಲಿ ಇದೇ ದಿನದಂದು ಸುಪ್ರೀಂ ಕೋರ್ಟ್ನಿಂದ ರಾಮಜನ್ಮಭೂಮಿ ಪ್ರಕರಣದಲ್ಲಿ ಅಂತಿಮ ತೀರ್ಪು ಪ್ರಕಟವಾಗಿತ್ತು. ಈ ಹಿನ್ನೆಲೆಯಲ್ಲಿ ಇದೇ ದಿನಾಂಕದಂದು ಸಚಿವ ಸಂಪುಟ ಸಭೆ ನಡೆಸಲು ಉತ್ತರ ಪ್ರದೇಶ ಸರ್ಕಾರ ಸಿದ್ಧತೆ ನಡೆಸಿದೆ.