ನೀವು ಗಂಭೀರ್‌ ಕಾಲು ನೆಕ್ಕುತ್ತಿದ್ದೀರಿ : ಹೊಸ ಕೋಚ್‌ ಬಗ್ಗೆ ಕ್ರೀಡಾ ತಜ್ಞರ ಹೊಗಳಿಕೆಗೆ ಗವಾಸ್ಕರ್‌ ಕಿಡಿ

KannadaprabhaNewsNetwork |  
Published : Oct 08, 2024, 01:17 AM ISTUpdated : Oct 08, 2024, 03:41 AM IST
ಸುನಿಲ್‌ ಗವಾಸ್ಕರ್‌-ಗಂಭೀರ್‌ | Kannada Prabha

ಸಾರಾಂಶ

ಭಾರತದ ಗೆಲುವಿಗೆ ಯಾವುದೇ ಕ್ರೆಡಿಟ್ ನೀಡಬಹುದಾಗಿದ್ದಾರೆ ಅದು ಕೇವಲ ರೋಹಿತ್‌ ಶರ್ಮಾಗೆ ಮಾತ್ರ ಎಂದು ಸುನಿಲ್‌ ಗವಾಸ್ಕರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಬಾಂಗ್ಲಾದೇಶ ವಿರುದ್ಧ 2ನೇ ಟೆಸ್ಟ್‌ ಪಂದ್ಯದಲ್ಲಿ ಟಿ20 ಶೈಲಿಯಲ್ಲಿ ಆಡಿ ಭಾರತ ಗೆಲುವು ಸಾಧಿಸಿದ್ದಕ್ಕೆ ಹಲವು ಮಾಜಿ ಕ್ರಿಕೆಟಿಗರು ಕೋಚ್‌ ಗೌತಮ್‌ ಗಂಭೀರ್‌ರನ್ನು ಹೊಗಳುತ್ತಿದ್ದಾರೆ. ಇಂಗ್ಲೆಂಡ್‌ನ ಬಾಜ್‌ಬಾಲ್‌ ರೀತಿ ಭಾರತವೂ ಗಂಭೀರ್‌ ಕೋಚಿಂಗ್‌ನಲ್ಲಿ ಆಕ್ರಮಣಕಾರಿಯಾಡಿ ಆಡುತ್ತಿದೆ ಎಂದಿದ್ದಾರೆ. 

ಈ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಭಾರತದ ಮಾಜಿ ಆಟಗಾರ ಸುನಿಲ್‌ ಗವಾಸ್ಕರ್‌, ‘ಗಂಭೀರ್ ಕೇವಲ ಒಂದೆರಡು ತಿಂಗಳಿನಿಂದ ತರಬೇತಿ ನೀಡುತ್ತಿದ್ದಾರೆ. ಈಗಲೇ ಈ ರೀತಿ ಹೊಗಳಿಕೆ ಮೂಲಕ ಅವರ ಕಾಲು ನೆಕ್ಕುತ್ತಿದ್ದೀರಿ. ಸ್ವತಃ ಗಂಭೀರ್‌ ಕೂಡಾ ಆಕ್ರಮಣಕಾರಿ ಶೈಲಿಯಲ್ಲಿ ಹೆಚ್ಚೂನೂ ಆಡಿಲ್ಲ. ಭಾರತದ ಗೆಲುವಿಗೆ ಯಾವುದೇ ಕ್ರೆಡಿಟ್ ನೀಡಬಹುದಾಗಿದ್ದಾರೆ ಅದು ಕೇವಲ ರೋಹಿತ್‌ ಶರ್ಮಾಗೆ ಮಾತ್ರ’ ಎಂದಿದ್ದಾರೆ.

ಶ್ರೀಲಂಕಾದ ಪೂರ್ಣಾವಧಿ ಕೋಚ್‌ ಆಗಿ ಜಯಸೂರ್ಯ

ಕೊಲಂಬೊ: ದಿಗ್ಗಜ ಕ್ರಿಕೆಟಿಗ ಸನತ್‌ ಜಯಸೂರ್ಯ ಶ್ರೀಲಂಕಾ ಕ್ರಿಕೆಟ್‌ ತಂಡದ ಪೂರ್ಣಾವಧಿ ಮುಖ್ಯ ಕೋಚ್‌ ಆಗಿ ನೇಮಕಗೊಂಡಿದ್ದಾರೆ. ಅವರು 2026ರ ಟಿ20 ವಿಶ್ವಕಪ್‌ ಮುಕ್ತಾಯದ ವರೆಗೂ ತಂಡಕ್ಕೆ ಕೋಚ್‌ ಆಗಿರಲಿದ್ದಾರೆ ಎಂದು ಲಂಕಾ ಕ್ರಿಕೆಟ್‌ ಮಂಡಳಿ ತಿಳಿಸಿದೆ. 

ಲಂಕಾದ ಮಾಜಿ ಆರಂಭಿಕ ಆಟಗಾರ ಜಯಸೂರ್ಯ ಜುಲೈನಲ್ಲಿ ತಂಡದ ಹಂಗಾಮಿ ಕೋಚ್‌ ಆಗಿ ನೇಮಕಗೊಂಡಿದ್ದರು. ಅವರ ಅವಧಿಯಲ್ಲಿ ಭಾರತ ವಿರುದ್ಧ 27 ವರ್ಷ ಬಳಿಕ ಏಕದಿನ ಸರಣಿ ಗೆದ್ದಿದ್ದ ಲಂಕಾ, ಇಂಗ್ಲೆಂಡ್‌ ವಿರುದ್ಧ ಅದರದೇ ತವರಿನಲ್ಲಿ ಟೆಸ್ಟ್‌ ಪಂದ್ಯ ಜಯಿಸಿತ್ತು. ಇತ್ತೀಚೆಗಷ್ಟೇ ನ್ಯೂಜಿಲೆಂಡ್‌ ವಿರುದ್ಧ ತವರಿನ 2 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಗೆದ್ದಿತ್ತು.

PREV
Get the latest sports news in Kannada (ಕ್ರೀಡಾ ಸುದ್ದಿ) — live cricket scores, football highlights, tennis, badminton, and updates on all major sports events. Stay ahead with Kannada Prabha’s full-coverage sports reporting.

Recommended Stories

ಪಾಕ್‌ ಪಂದ್ಯಕ್ಕೆ ಮುನ್ನ ಭಾರತಕ್ಕೆ ನಮೀಬಿಯಾ ವಿರುದ್ಧ ರಿಹರ್ಸಲ್
ಭಾರತ ವಿರುದ್ಧ ಪಂದ್ಯಕ್ಕೆ ಪಾಕ್‌ನ ಮನವೊಲಿಸಿ ಐಸಿಸಿ ಈಗ ನಿರಾಳ : ಭಾರೀ ನಷ್ಟದಿಂದ ಪಾರು