ಕೊಡಗು ಹೆಗ್ಗಡೆ ಸಮಾಜದ ನಿವೇಶನದಲ್ಲಿ ಸಾಂಸ್ಕೃತಿಕ ಭವನ: ಸ್ಥಳ ಪರಿಶೀಲನೆ

KannadaprabhaNewsNetwork |  
Published : Mar 10, 2024, 01:47 AM IST
ಚಿತ್ರ : 9ಎಂಡಿಕೆ3 : ಸಾಂಸ್ಕೃತಿಕ ಭವನ ಜಾಗ ಪರಿಶೀಲಿಸಿದ ಕೊಡಗು ಹೆಗ್ಗಡೆ ಸಮಾಜದ ಪ್ರಮುಖರು.  | Kannada Prabha

ಸಾರಾಂಶ

ಸಮುದಾಯ ಭವನ ನಿರ್ಮಾಣಕ್ಕೆ ಅಂದಾಜು ಇಪ್ಪತ್ತೆಂಟು ಲಕ್ಷ ರುಪಾಯಿಗಳ ನೀಲಿ ನಕಾಶೆ ತಯಾರಿಸಲಾಗಿದೆ

ಕನ್ನಡಪ್ರಭ ವಾರ್ತೆ ಮಡಿಕೇರಿ

ವಿರಾಜಪೇಟೆ ಸಮೀಪದ ಬಾಳುಗೋಡು ಗ್ರಾಮದಲ್ಲಿ ಕೊಡಗು ಹೆಗ್ಗಡೆ ಸಮಾಜದ ನಿವೇಶನದಲ್ಲಿನ ಸಭಾಂಗಣದ ಮುಂಭಾಗದಲ್ಲಿ ಸಾಂಪ್ರದಾಯಿಕ ಶೈಲಿಯ ನೂತನ ಸಾಂಸ್ಕೃತಿಕ ಭವನ ನಿರ್ಮಾಣ ಮಾಡಲು ಶನಿವಾರ ಕೊಡಗು ಹೆಗ್ಗಡೆ ಸಮಾಜದ ಆಡಳಿತ ಮಂಡಳಿ ಪದಾಧಿಕಾರಿಗಳು ಸಮಾಜದ ಅಧ್ಯಕ್ಷರಾದ ಪಡಿಞರಂಡ ಅಯ್ಯಪ್ಪನವರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.ಸಮಾಜದ ಉಪಾಧ್ಯಕ್ಷರಾದ ಕೊರಕುಟ್ಟೀರ ಸರಾ ಚಂಗಪ್ಪನವರು ಮಾತನಾಡಿ, ಸಾಂಸ್ಕೃತಿಕ ಭವನ ನಿರ್ಮಾಣ ಮಾಡುವುದರಿಂದ ವರ್ಷದ ಎಲ್ಲಾ ಋತುಗಳಲ್ಲಿ ಜಾನಪದ ಕಲೆಗಳನ್ನು ಅಭ್ಯಾಸ ಮಾಡಲು ಮತ್ತು ಸಮಾರಂಭಗಳು ನಡೆದಾಗ ಕಲಾ ತಂಡಗಳಿಂದ ಜಾನಪದ ಕಲೆಗಳ ಪ್ರದರ್ಶನಕ್ಕೂ ಮತ್ತು ವಸ್ತು ಪ್ರದರ್ಶನಕ್ಕೂ ಇಲ್ಲಿ ಸಾಕಷ್ಟು ಸ್ಥಳಾವಕಾಶ ಲಭ್ಯವಾಗಲಿದೆಯೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸಮುದಾಯ ಭವನ ನಿರ್ಮಾಣಕ್ಕೆ ಅಂದಾಜು ಇಪ್ಪತ್ತೆಂಟು ಲಕ್ಷ ರುಪಾಯಿಗಳ ನೀಲಿ ನಕಾಶೆ ತಯಾರಿಸಲಾಗಿದ್ದು ಆರ್ಥಿಕ ನೆರವಿಗಾಗಿ ಶಾಸಕರ ಮೂಲಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವ ಪ್ರಯತ್ನ ಮಾಡುವುದರೊಂದಿಗೆ ಸಮಾಜದ ನಿಧಿಯಲ್ಲಿ ಇರುವ ಹಣವನ್ನು ಬಳಸಿಕೊಂಡು ಅಗತ್ಯ ಬಿದ್ದಲ್ಲಿ ದಾನಿಗಳ ನೆರವನ್ನು ಸಹ ಪಡೆಯಲಾಗುವುದು ಎಂದು ತಿಳಿಸಿದರು. ಕೊಡಗು ಹೆಗ್ಗಡೆ ಸಮಾಜದ ಕಾರ್ಯದರ್ಶಿ ಪಡಿಞರಂಡ ಪ್ರಭು ಕುಮಾರ್, ಕೋಶಾಧ್ಯಕ್ಷರಾದ ಪಾನಿಕುಟ್ಟಿರ ಕುಟ್ಟಪ್ಪ, ನಿರ್ದೇಶಕರಾದ ಕೊಕ್ಕೇರ ಜಗನ್ನಾಥ್, ಚರ್ಮಾಂಡ ಅಪ್ಪುಣು ಪೂವಯ್ಯ, ಕೊಪ್ಪಡ ಪಟ್ಟು ಪಳಂಗಪ್ಪ, ಕೊಂಗೆಪಂಡ ರವಿ, ತಂಬಂಡ ಮಂಜುನಾಥ್, ಪುದಿಯತಂಡ ಬೆಳ್ಳಿಯಪ್ಪ, ಪಂದಿಕಂಡ ಸುನಾ, ಪಂದಿಕಂಡ ನಾಗೇಶ್, ಚಳಿಯಂಡ ಕಮಲಾ ಉತ್ತಯ್ಯ, ಮಲ್ಲಾಡ ಸುತಾ, ಮೂರೀರ ಶಾಂತಿ ಹಾಜರಿದ್ದರು.

PREV
Get the latest sports news in Kannada (ಕ್ರೀಡಾ ಸುದ್ದಿ) — live cricket scores, football highlights, tennis, badminton, and updates on all major sports events. Stay ahead with Kannada Prabha’s full-coverage sports reporting.

Recommended Stories

ವಿಶ್ವಕಪ್‌ ಪಂದ್ಯ ಬಹಿಷ್ಕಾರಕ್ಕಿದೆ ದೀರ್ಘ ಇತಿಹಾಸ
ರೋಲರ್‌ ಸ್ಕೇಟಿಂಗ್‌: ಮಂಗಳೂರು ಮೂಲದ ಅಹ್ಯಾನ್ ಅನ್ವರ್‌ಗೆ ಚಿನ್ನ