ಬಿಸಿಸಿಐ ಮಾತಿಗೆ ಕ್ಯಾರೇ ಅನ್ನದ ಶ್ರೇಯಸ್‌, ಇಶಾನ್‌ ಗುತ್ತಿಗೆ ಪಟ್ಟಿಯಿಂದ ಔಟ್‌?

KannadaprabhaNewsNetwork |  
Published : Feb 24, 2024, 02:33 AM IST
ಶ್ರೇಯಸ್‌-ಇಶಾನ್‌ | Kannada Prabha

ಸಾರಾಂಶ

ವರದಿ ಪ್ರಕಾರ ಬಿಸಿಸಿಐ 2023-24ರ ಋತುವಿಗಾಗಿ ಕೇಂದ್ರ ಒಪ್ಪಂದಗಳಿಗೆ ಒಳಪಟ್ಟಿರುವ ಆಟಗಾರರ ಪಟ್ಟಿ ಕೆಲವೇ ದಿನಗಳಲ್ಲಿ ಪ್ರಕಟಿಸುವ ಸಾಧ್ಯತೆಯಿದೆ. ಆದರೆ ಎಚ್ಚರಿಕೆ ನೀಡಿದರೂ ರಣಜಿ ಆಡದ್ದಕ್ಕೆ ಇಶಾನ್ ಮತ್ತು ಅಯ್ಯರ್​ರನ್ನು ಪಟ್ಟಿಯಿಂದ ಹೊರಗಿಡಲು ನಿರ್ಧರಿಸಿದೆ ಎಂದು ಹೇಳಲಾಗುತ್ತಿದೆ.

ನವದೆಹಲಿ: ರಾಷ್ಟ್ರೀಯ ತಂಡದ ಆಯ್ಕೆಗೆ ಪರಿಗಣಿಸಬೇಕಿದ್ದರೆ ರಣಜಿ ಆಡಿ ಎಂಬ ಸೂಚನೆಯನ್ನು ಕಡೆಗಣಿಸುತ್ತಿರುವ ತಾರಾ ಕ್ರಿಕೆಟಿಗರಾದ ಶ್ರೇಯಸ್‌ ಅಯ್ಯರ್‌ ಹಾಗೂ ಇಶಾನ್‌ ಕಿಶನ್‌ರನ್ನು ಬಿಸಿಸಿಐ ಕೇಂದ್ರೀಯ ಗುತ್ತಿಗೆ ಪಟ್ಟಿಯಿಂದ ಹೊರಗಿಡಲು ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಬಿಸಿಸಿಐ ಈಗಾಗಲೇ 2023-24ರ ಗುತ್ತಿಗೆ ಪಟ್ಟಿ ಸಿದ್ಧಪಡಿಸಿದ್ದು, ಇಶಾನ್‌, ಶ್ರೇಯಸ್‌ರನ್ನು ಹೊರಗಿಟ್ಟಿದೆ ಎಂದು ಹೇಳಲಾಗುತ್ತಿದೆ. ಪಟ್ಟಿ ಶೀಘ್ರದಲ್ಲೇ ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಇಶಾನ್‌, ಶ್ರೇಯಸ್‌ ಇಬ್ಬರೂ ಸದ್ಯ ರಾಷ್ಟ್ರೀಯ ತಂಡದಿಂದ ಹೊರಗಿದ್ದಾರೆ. ಆದರೆ ರಣಜಿ ಆಡುವ ಬದಲು ಐಪಿಎಲ್‌ಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಇತ್ತೀಚೆಗಷ್ಟೇ ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ, ದೇಸಿ ಕ್ರಿಕೆಟ್​ ಆಡುವುದನ್ನು ತಪ್ಪಿಸಿಕೊಂಡರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಇದರ ನಡುವೆಯೂ ಇಬ್ಬರೂ ರಣಜಿ ಆಡುವುದರಿಂದ ಹಿಂದೆ ಸರಿದ್ದರು. ಹಾಗಾಗಿ ಯುವ ಆಟಗಾರರಿಬ್ಬರು ಕೇಂದ್ರೀಯ ಗುತ್ತಿಗೆಯಿಂದ ಹೊರಬೀಳುವ ಸಾಧ್ಯತೆ ಇದೆ.ಕಳೆದ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್​ ಸರಣಿಯಿಂದ ಹೊರಗುಳಿದ ನಂತರ ಕಿಶನ್ ಭಾರತದ ಪರ ಆಡಿಲ್ಲ. ಮತ್ತೊಂದೆಡೆ ಇಂಗ್ಲೆಂಡ್ ವಿರುದ್ಧದ ಅಂತಿಮ 3 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡದಿಂದ ಅಯ್ಯರ್‌ ಗಾಯದ ಕಾರಣಕ್ಕೆ ಹೊರಗುಳಿದಿದ್ದಾರೆ. ಆದರೆ ಗಾಯದಿಂದ ಈಗಾಗಲೇ ಅವರು ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ. ಇದರ ಹೊರತಾಗಿಯೂ ಅವರು ರಣಜಿ ಆಡುತ್ತಿಲ್ಲ.

PREV
Get the latest sports news in Kannada (ಕ್ರೀಡಾ ಸುದ್ದಿ) — live cricket scores, football highlights, tennis, badminton, and updates on all major sports events. Stay ahead with Kannada Prabha’s full-coverage sports reporting.

Recommended Stories

ಫೈನಲ್‌ ಟಿಕೆಟ್‌ಗಾಗಿ ಇಂದು ಕಿವೀಸ್‌ vs ದ.ಆಫ್ರಿಕಾ
ಅಂತೂ ಬೆಂಗಳೂರಿಗೆ ಐಪಿಎಲ್‌ ಬಂತು- ಚಿನ್ನಸ್ವಾಮಿ ಸ್ಟೇಡಿಯಂನಲ್ಲೇ ಉದ್ಘಾಟನಾ ಪಂದ್ಯ