ಸೂರತ್: ತೀವ್ರ ಬ್ಯಾಟಿಂಗ್ ವೈಫಲ್ಯದ ಹೊರತಾಗಿಯೂ ರೈಲ್ವೇಸ್ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕಕ್ಕೆ ಇನ್ನಿಂಗ್ಸ್ ಮುನ್ನಡೆ ಲಭಿಸಿದೆ. ಕಡಿಮೆ ಮೊತ್ತದ ಪಂದ್ಯ ಸದ್ಯ ಕುತೂಹಲ ಘಟ್ಟ ತಲುಪಿದ್ದು, ಗೆಲುವಿಗಾಗಿ ಉಭಯ ತಂಡಗಳು ಹೋರಾಡುತ್ತಿವೆ.
ಮೊದಲ ದಿನದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು ಕೇವಲ 90 ರನ್ ಕಲೆಹಾಕಿದ್ದ ಕರ್ನಾಟಕದ ಶನಿವಾರ ಕೆಳಕ್ರಮಾಂಕದ ಬ್ಯಾಟರ್ಗಳು ನೆರವಾದರು. ಶ್ರೀನಿವಾಸ್ ಶರತ್ 24, ವೈಶಾಕ್ 24 ರನ್ ಗಳಿಸಿ ತಂಡಕ್ಕೆ ಮುನ್ನಡೆ ಒದಗಿಸಿದರು. ಆಕಾಶ್ ಪಾಂಡೆ 5, ಅಯಾನ್ ಚೌಧರಿ 4 ವಿಕೆಟ್ ಪಡೆದರು.
ಮಾರಕ ದಾಳಿ: ಬಳಿಕ 2ನೇ ಇನ್ನಿಂಗ್ಸ್ನಲ್ಲೂ ರೈಲ್ವೇಸನ್ನು ರಾಜ್ಯದ ಬೌಲರ್ಗಳು ಕಾಡಿದರು. ಮೊಹಮದ್ ಸೈಫ್ (ಔಟಾಗದೆ 51), ಸೂರಜ್ ಅಹುಜಾ (48) ಆಕರ್ಷಕ ಆಟದಿಂದಾಗಿ ತಂಡ 200ರ ಗಡಿ ದಾಟಿದ್ದು, ಕರ್ನಾಟಕಕ್ಕೆ ದೊಡ್ಡ ಗುರಿ ನೀಡಲು ಹೋರಾಡುತ್ತಿದೆ. ವೈಶಾಕ್ 3, ವಿದ್ವತ್ 2 ವಿಕೆಟ್ ಕಿತ್ತರು.ಸ್ಕೋರ್: ರೈಲ್ವೇಸ್ 155/10 ಮತ್ತು 209/8 (2ನೇ ದಿನದಂತ್ಯಕ್ಕೆ) (ಸೈಫ್ 51*, ವೈಶಾಕ್ 3-45), ಕರ್ನಾಟಕ 174/10 (ವೈಶಾಕ್ 24, ಆಕಾಶ್ 5-63)