ಆರ್‌ಸಿಬಿ ಟ್ರೋಫಿ ಗೆಲುವಿನ ಹಿಂದೆ ಕನ್ನಡತಿ ಶ್ರೇಯಾಂಕ ಚಮತ್ಕಾರ

KannadaprabhaNewsNetwork |  
Published : Mar 18, 2024, 01:47 AM IST
ಶ್ರೇಯಾಂಕ ಪಾಟೀಲ್‌(ಪಿಟಿಐ) | Kannada Prabha

ಸಾರಾಂಶ

ಫೈನಲ್‌ನಲ್ಲಿ 4 ವಿಕೆಟ್‌ ಕಬಳಿಸಿದ 21ರ ಶ್ರೇಯಾಂಕ ಟೂರ್ನಿಯ ಗರಿಷ್ಠ ವಿಕೆಟ್‌ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದರು. ಅಲ್ಲದೆ ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೂ ಭಾಜನರಾದರು.

ನವದೆಹಲಿ: 2ನೇ ಆವೃತ್ತಿಯ ವುಮೆನ್ಸ್‌ ಪ್ರೀಮಿಯರ್‌ ಲೀಗ್‌(ಡಬ್ಲ್ಯುಪಿಎಲ್‌)ನಲ್ಲಿ ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಫೈನಲ್‌ನಲ್ಲಿ ಸೋಲಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ಚಾಂಪಿಯನ್‌ ಆಗಿ ಹೊರಹೊಮ್ಮಿತು. ‘ಈ ಸಲ ಕಪ್‌ ನಮ್ದೇ’ ಎನ್ನುತ್ತಿದ್ದ ಆರ್‌ಸಿಬಿಯ ಕೋಟ್ಯಂತರ ಅಭಿಮಾನಿಗಳ ಹಾರೈಕೆ, ಪ್ರಾರ್ಥನೆಗೆ ಕೊನೆಗೂ ಫಲ ಸಿಕ್ಕಿದೆ. ಈ ಗೆಲುವಿನ ಹಿಂದೆ ಕರ್ನಾಟಕದ ಯುವ ಸ್ಟಾರ್‌ ಶ್ರೇಯಾಂಕ ಪಾಟೀಲ್‌ ಅವರ ಚಮತ್ಕಾರ ಮರೆಯಲಾಗದರು.ಕಳೆದ ವರ್ಷವೇ ಆರ್‌ಸಿಬಿ ಪರ ದೊಡ್ಡ ರೀತಿಯಲ್ಲಿ ಸದ್ದು ಮಾಡಿದ್ದ 21ರ ಶ್ರೇಯಾಂಕ ಪಾಟೀಲ್‌ ಈ ಬಾರಿ ಟ್ರೋಫಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಮುಂಬೈ ಇಂಡಿಯನ್ಸ್‌ ವಿರುದ್ಧದ ಸೆಮಿಫೈನಲ್‌ನಲ್ಲಿ ನಿರ್ಣಾಯಕ ಘಟ್ಟದಲ್ಲಿ ಹರ್ಮನ್‌ಪ್ರೀತ್‌ ಸೇರಿ ಒಟ್ಟು 2 ವಿಕೆಟ್‌ ಕಿತ್ತು ಗೆಲುವಿನ ರೂವಾರಿ ಎನಿಸಿಕೊಂಡಿದ್ದ ಶ್ರೇಯಾಂಕ ಫೈನಲ್‌ನಲ್ಲೂ ತಮ್ಮ ಕೈ ಚಳಕ ತೋರಿಸಿದರು. ಒಟ್ಟು 3.3 ಓವರಲ್ಲಿ ಕೇವಲ 12 ರನ್‌ ನೀಡಿ 4 ವಿಕೆಟ್‌ ಕಬಳಿಸಿದ 21ರ ಶ್ರೇಯಾಂಕ ಟೂರ್ನಿಯ ಗರಿಷ್ಠ ವಿಕೆಟ್‌ ಸರದಾರರ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದರು. ಅಲ್ಲದೆ ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೂ ಭಾಜನರಾದರು. ಫೈನಲ್‌ ಪಂದ್ಯದಲ್ಲಿ ಅವರು ಮೆಗ್‌ ಲ್ಯಾನಿಂಗ್‌, ಮಿನ್ನು ಮಾನಿ, ಅರುಂಧತಿ ರೆಡ್ಡಿ ಹಾಗೂ ತಾನಿಯಾ ಭಾಟಿಯಾ ವಿಕೆಟ್‌ ಕಿತ್ತರು.

PREV
Get the latest sports news in Kannada (ಕ್ರೀಡಾ ಸುದ್ದಿ) — live cricket scores, football highlights, tennis, badminton, and updates on all major sports events. Stay ahead with Kannada Prabha’s full-coverage sports reporting.

Recommended Stories

ಟಿ20 ವಿಶ್ವಕಪ್‌ನಿಂದ ಉಪನಾಯಕ ಗಿಲ್‌ಗೆ ಗೇಟ್‌ಪಾಸ್‌, ಕಿಶನ್ ಆಯ್ಕೆ!
ಶಿಕ್ಷಕ ತಂದೆಗೆ ₹12 ಸಾವಿರ ವೇತನ, ಮಗನಿಗೆ ₹14.2 ಕೋಟಿ!