- 28 ವರ್ಷದಿಂದ ರಾಜ್ಯ ಕ್ರಿಕೆಟ್ ಮೇಲೆ ಬಿಗಿಹಿಡಿತ: ಮಾಜಿ ಕಾರ್ಯದರ್ಶಿ ವಿರುದ್ಧ ಆರೋಪ । ಕೆಎಸ್ಸಿಎ ಚುನಾವಣೆಗೆ ಇಂದಿನಿಂದ ನಾಮಪತ್ರ
ಕನ್ನಡಪ್ರಭ ವಾರ್ತೆ ಬೆಂಗಳೂರು
ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಚುನಾವಣೆ ಕಾವೇರುತ್ತಿದ್ದು, ನ.30ರಂದು ನಡೆಯಲಿರುವ ಚುನಾವಣೆಗೆ ಬುಧವಾರದಿಂದ ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ‘ಟೀಂ ಗೇಮ್ ಚೇಂಜರ್ಸ್’ ಹೆಸರಿನೊಂದಿಗೆ ಚುನಾವಣಾ ಅಖಾಡಕ್ಕೆ ಧುಮುಕುತ್ತಿರುವ ಭಾರತದ ಮಾಜಿ ವೇಗಿ ವೆಂಕಟೇಶ್ ಪ್ರಸಾದ್ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ತಮ್ಮ ತಂಡವನ್ನು ಪರಿಚಯಿಸಿದರು. ಈ ವೇಳೆ ಎದುರಾಳಿ ತಂಡದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ ಪ್ರಸಾದ್, ಕೆಎಸ್ಸಿಎ ಮಾಜಿ ಕಾರ್ಯದರ್ಶಿ ಬ್ರಿಜೇಶ್ ಪಟೇಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ಟೀಂ ಗೇಮ್ ಚೇಂಜರ್ಸ್ ತಂಡದ ಪರ ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಪ್ರಸಾದ್ ಕಣಕ್ಕಿಳಿಯುತ್ತಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ಸುಜಿತ್ ಸೋಮ್ಸುಂದರ್, ಕಾರ್ಯದರ್ಶಿ ಸ್ಥಾನಕ್ಕೆ ಕೆಎಸ್ಸಿಎ ಮಾಜಿ ಖಜಾಂಚಿ ವಿನಯ್ ಮೃತ್ಯುಂಜಯ, ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಎವಿ ಶಶಿಧರ, ಖಜಾಂಚಿ ಸ್ಥಾನಕ್ಕೆ ಬಿ.ಎನ್.ಮಧುಕರ್ ಸ್ಪರ್ಧೆ ಮಾಡಲಿದ್ದಾರೆ. ಮಾಜಿ ಕ್ರಿಕೆಟರ್ಗಳಾದ ಕಲ್ಪನಾ ವೆಂಕಟಾಚಾರ್, ಅವಿನಾಶ್ ವೈದ್ಯ ಸೇರಿ ಹಲವು ಅನುಭವಿಗಳ ಸಹ ವಿವಿಧ ಹುದ್ದೆಗಳಿಗೆ ಸ್ಪರ್ಧಿಸಲಿದ್ದಾರೆ. ಬ್ರಿಜೇಶ್ ತಮ್ಮ ಕೈಗೊಂಬೆಗಳನ್ನು
ಮಾಜಿ ಕ್ರಿಕೆಟಿಗ, ಮಾಜಿ ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ವೆಂಕಟೇಶ್ ಪ್ರಸಾದ್, ‘ಚುನಾವಣೆಯಲ್ಲಿ ಬ್ರಿಜೇಶ್ ತಮ್ಮ ಕೈಗೊಂಬೆಗಳನ್ನು ಕಣಕ್ಕಿಳಿಸುತ್ತಿದ್ದಾರೆ’ ಎಂದು ಆರೋಪಿಸಿದರು. ‘ಕಳೆದ 28 ವರ್ಷಗಳಿಂದ ಕೆಎಸ್ಸಿಎಯನ್ನು ತಮ್ಮ ಕಪಿಮುಷ್ಠಿಯಲ್ಲಿ ಹಿಡಿದಿಟ್ಟುಕೊಂಡಿರುವ ಬ್ರಿಜೇಶ್, ಹಿಂಬದಿ ಆಸನದಲ್ಲಿ ಕೂತು ಸವಾರಿ ಮಾಡುತ್ತಿದ್ದಾರೆ. ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಅವರಿಷ್ಟದಂತೆ ಎಲ್ಲವೂ ನಡೆಯುತ್ತಿದೆ. ಇದು ನಿಲ್ಲಬೇಕು. ರಾಜ್ಯ ಕ್ರಿಕೆಟ್ ಅಧಃಪತನದತ್ತ ಸಾಗಿದ್ದು, ಅದನ್ನು ತಡೆಯಬೇಕು ಎನ್ನುವ ದೃಢ ಸಂಕಲ್ಪದಿಂದ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಈಗಾಗಲೇ 250-300 ಸದಸ್ಯರನ್ನು ಸಂಪರ್ಕಿಸಿದ್ದು, ಎಲ್ಲರೂ ಬದಲಾವಣೆ ಬಯಸುತ್ತಿದ್ದಾರೆ. ರಾಜ್ಯದ ಬಹುತೇಕ ಮಾಜಿ ಕ್ರಿಕೆಟಿಗರು ನಮ್ಮ ತಂಡವನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಕುಂಬ್ಳೆ, ಶ್ರೀನಾಥ್ರಂಥ ದಿಗ್ಗಜರು ನಮ್ಮ ಬೆನ್ನಿಗೆ ನಿಂತಿದ್ದಾರೆ’ ಎಂದರು.
ಕೆಲಸವೆಲ್ಲಾ ವ್ಯರ್ಥವಾಗಿದೆ: ಕುಂಬ್ಳೆ
ಎಲ್ಲವೂ ಈಗ ಹಾಳಾಗಿವೆ: ಶ್ರೀನಾಥ್
‘ಆಟಗಾರರು ಪನ್ನೀರ್
ಕೆಎಸ್ಸಿಎಗೆ ಪ್ರತಿ ವರ್ಷ ಬಿಸಿಸಿಐನಿಂದ ನೂರಾರು ಕೋಟಿ ಅನುದಾನ ಸಿಗುತ್ತದೆ. ಕಳೆದ ವರ್ಷ 115 ಕೋಟಿ ರು. ಬಂದಿದೆ. ಎಲ್ಲವನ್ನೂ ಬ್ಯಾಂಕ್ನಲ್ಲಿ ಎಫ್ಡಿ ಇಡುವುದರಿಂದ ಕ್ರಿಕೆಟ್ ಬೆಳವಣಿಗೆ ಆಗುವುದಿಲ್ಲ. ಅದನ್ನು ಮಾಡಲು ಕ್ರಿಕೆಟ್ ಆಡಳಿತಗಾರರಾಗಬೇಕಾಗಿಲ್ಲ. ಕಳೆದ 3 ವರ್ಷದಲ್ಲಿ ಕೆಎಸ್ಸಿಎ ಆಡಳಿತ ಎಷ್ಟು ಕಳಪೆಯಾಗಿದೆ ಎಂದರೆ, ಆಟಗಾರರು ಪ್ರೊಟೀನ್ಗಾಗಿ ಪನ್ನೀರ್ ಕೇಳಿದರೆ ಅದನ್ನೂ ಕೊಟ್ಟಿಲ್ಲ. ಇನ್ನು, ರಾಜ್ಯದಲ್ಲಿ ಮಹಿಳಾ ಕ್ರಿಕೆಟ್ ಅಂತೂ ಹೇಳ ಹೆಸರಿಲ್ಲದಂತಾಗಿದೆ. ಇದೆಲ್ಲವೂ ಬದಲಾಗಬೇಕು.