ಕೆಎಸ್‌ಸಿಎ : ಕೋರ್ಟಲ್ಲಿ ₹200 ಬಾಕಿ ವಾದ - ಪ್ರತಿವಾದ

Published : Nov 27, 2025, 11:49 AM IST
KSCA

ಸಾರಾಂಶ

ಕರ್ನಾಟಕ ರಾಜ್ಯ ಕ್ರಿಕೇಟ್ ಅಸೋಸಿಯೇಷನ್ (ಕೆಎಸ್‌ಸಿಎ) ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಗುರುವಾರ ಬೆಳಗ್ಗೆವರೆಗೆ ಪ್ರಕಟಿಸದಂತೆ ಚುನಾವಣಾಧಿಕಾರಿಗೆ ಹೈಕೋರ್ಟ್‌ ಸೂಚಿಸಿದೆ.

 ಬೆಂಗಳೂರು :  ಕರ್ನಾಟಕ ರಾಜ್ಯ ಕ್ರಿಕೇಟ್ ಅಸೋಸಿಯೇಷನ್ (ಕೆಎಸ್‌ಸಿಎ) ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಗುರುವಾರ ಬೆಳಗ್ಗೆವರೆಗೆ ಪ್ರಕಟಿಸದಂತೆ ಚುನಾವಣಾಧಿಕಾರಿಗೆ ಹೈಕೋರ್ಟ್‌ ಸೂಚಿಸಿದೆ.

ಕೆಎಸ್​ಸಿಎ ಅಧ್ಯಕ್ಷ ಸ್ಥಾನಕ್ಕೆ ತಾವು ಸಲ್ಲಿಸಿದ್ದ ನಾಮಪತ್ರ ತಿರಸ್ಕರಿಸಿರುವ ಕೆಎಸ್​ಸಿಎ, ಚುನಾವಣಾಧಿಕಾರಿಗಳ ಕ್ರಮ ಪ್ರಶ್ನಿಸಿ ಕೆ.ಎನ್​. ಶಾಂತಕುಮಾರ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್​ ಗೋವಿಂದರಾಜು ಅವರ ಪೀಠ, ನಾಮಪತ್ರ ಹಿಂಪಡೆದಿರುವವರನ್ನೂ ಸೇರಿಸಿದಂತೆ ಕಣದಲ್ಲಿರುವ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಬಾರದು. ಅರ್ಜಿದಾರ ನಾಮಪತ್ರ ಸಲ್ಲಿಸಿರುವ ಮತ್ತು ನಾಮಪತ್ರ ಪರಿಶೀಲನೆ ನಡೆಸಿರುವ ಎಲ್ಲ ಪ್ರಕ್ರಿಯೆಗಳ ವಿಡಿಯೋ ತುಣುಕು ಮತ್ತು ಬಾಕಿ ಚಂದ ಹಣ ಪಾವತಿಸಿರುವ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದೆ.

ನೋಟಿಸ್​ ಜಾರಿಗೊಳಿಸಿ ವಿಚಾರಣೆ ಮುಂದೂಡಿಕೆ

ಅಲ್ಲದೆ, ಕೆಎಸ್‌ಸಿಎ, ಅಧ್ಯಕ್ಷ ಸ್ಥಾನಕ್ಕೆ ಅರ್ಜಿ ಸಲ್ಲಿಸಿರುವ ವೆಂಕಟೇಶ್ ಪ್ರಸಾದ್​, ಕಲ್ಪನಾ ವೆಂಕಟಾಚಾರ್ ಮತ್ತು ಚುನಾವಣಾಧಿಕಾರಿಗೆ ನೋಟಿಸ್​ ಜಾರಿಗೊಳಿಸಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.

200 ರು. ಚಂದಾದಾರಿಕೆ ಬಾಕಿ

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರು ಪ್ರತಿನಿಧಿಸುವ ಪ್ರಜಾವಾಣಿ- ಡೆಕನ್​ ಹೆರಾಲ್ಡ್​ ಸ್ಪೋರ್ಟ್​ ಕ್ಲಬ್‌ನ 200 ರು. ಚಂದಾದಾರಿಕೆ ಬಾಕಿ ಉಳಿಸಿಕೊಳ್ಳಲಾಗಿದೆ ಎಂಬ ಕಾರಣ ನೀಡಿ ಕೆಎಸ್‌ಸಿಎ ಅಧ್ಯಕ್ಷ ಸ್ಥಾನಕ್ಕೆ ಕೆ.ಎನ್.ಶಾಂತಕುಮಾರ್ ಅವರ ಸಲ್ಲಿಸಿದ್ದ ನಾಮಪತ್ರವನ್ನು ತಿರಸ್ಕರಿಸಲಾಗಿದೆ. 200 ರು. ದೊಡ್ಡ ಮೊತ್ತವಲ್ಲ. ಅದು ಆರ್ಥಿಕ ಹಗರಣ ಅಥವಾ ಗಂಭೀರವಾದ ಉಲ್ಲಂಘನೆಯೂ ಅಲ್ಲ. 200 ರು. ಗಿಂತ ಹೆಚ್ಚಿನ ಮೌಲ್ಯದ ಅಧ್ಯಕ್ಷೀಯ ನಾಮಪತ್ರವನ್ನು ತಿರಸ್ಕರಿಸುವುದು ಸರಿಯಲ್ಲ. ನಾಮಪತ್ರ ಪರಿಶೀಲನೆಗೂ ಮುನ್ನ ಅರ್ಜಿದಾರರು ಎಲ್ಲ ಬಾಕಿ ಮೊತ್ತ ಪಾವತಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ವಿವರಿಸಿದರು.

ಕೆಎಸ್​ಸಿಎ ಪರ ವಕೀಲರು, ನಾಮಪತ್ರ ಸಲ್ಲಿಸಿದ ದಿನವೇ ಚಂದಾ ಹಣ ಪಾವತಿಸಿರುವ ರಸೀದಿ ಸಲ್ಲಿಸುವುದು ಕಡ್ಡಾಯ. ಚುನಾವಣಾ ಪ್ರಕ್ರಿಯೆಯ ಉಸ್ತುವಾರಿಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಸುಭಾಷ್‌ ಅಡಿ ಅವರನ್ನು ನೇಮಿಸಲಾಗಿದೆ. ಶಾಂತಕುಮಾರ್‌ ಅವರು ಚಂದಾ ಹಣ ಪಾವತಿಸಿದ್ದರೆ, ಆ ಕುರಿತ ದಾಖಲೆಯನ್ನು ನ್ಯಾ. ಅಡಿ ಅವರ ಮುಂದೆ ಇಡಬಹುದಿತ್ತು. ಅದನ್ನು ಮಾಡದಕ್ಕೆ ಅವರ ನಾಮಪತ್ರ ತಿರಸ್ಕರಿಸಲಾಗಿದೆ. ಆ ಕ್ರಮ ಸರಿಯಾಗಿದೆ ಎಂದು ಪ್ರತಿಪಾದಿಸಿದರು.

PREV
Get the latest sports news in Kannada (ಕ್ರೀಡಾ ಸುದ್ದಿ) — live cricket scores, football highlights, tennis, badminton, and updates on all major sports events. Stay ahead with Kannada Prabha’s full-coverage sports reporting.
Read more Articles on

Recommended Stories

ಟಿ20 ವಿಶ್ವಕಪ್‌ ಮುನ್ನ ಭಾರತಕ್ಕೆ ಕೊನೆ ಚಾಲೆಂಜ್‌
ಭಾರತಕ್ಕೆ ಬರದಿದ್ದರೆ ವಿಶ್ವಕಪ್‌ನಿಂದ ಹೊರಕ್ಕೆ : ಬಾಂಗ್ಲಾಗೆ ಐಸಿಸಿ ಎಚ್ಚರಿಕೆ