ಶಾರೀರಿಕ, ಮಾನಸಿಕ ವಿಕಾಸಕ್ಕಾಗಿ ಆಟ ಆಡಿ, ಜಾಹೀರಾತಿಗಾಗಿ ಆಡಬೇಡಿ

KannadaprabhaNewsNetwork | Published : Nov 22, 2023 1:00 AM

ಸಾರಾಂಶ

ಶಾರೀರಿಕ, ಮಾನಸಿಕ ವಿಕಾಸಕ್ಕಾಗಿ ಆಟ ಆಡಿ, ಜಾಹೀರಾತಿಗಾಗಿ ಆಡಬೇಡಿರಾಜ್ಯಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಗೆ ಶಾಸಕ ಬೆಲ್ದಾಳೆ ಚಾಲನೆ । ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯಾವಳಿ

ರಾಜ್ಯಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿಗೆ ಶಾಸಕ ಬೆಲ್ದಾಳೆ ಚಾಲನೆ । ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಪಂದ್ಯಾವಳಿಕನ್ನಡಪ್ರಭ ವಾರ್ತೆ ಬೀದರ್‌

ಕ್ರೀಡಾಪಟುಗಳು ತಮ್ಮ ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆಗಾಗಿ ಆಟ ಆಡಬೇಕೇ ವಿನಃ ಜಾಹೀರಾತಿಗಾಗಿ, ಆದಾಯ ಸಂಪಾದನೆಗಾಗಿ ಆಟ ಆಡಬಾರದು ಎಂದು ಬೀದರ್‌ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಕ್ರೀಡಾಪಟುಗಳಿಗೆ ಕಿವಿ ಮಾತು ಹೇಳಿದರು.

ಅವರು ನಗರದ ನೆಹರು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೀದರ್‌ ಇವರ ಸಹಯೋಗದಲ್ಲಿ ಹಮ್ಮಿಕೊಂಡ ಪ್ರಸಕ್ತ ಸಾಲಿನ ಪದವಿಪೂರ್ವ ಶಿಕ್ಷಣ ವಿದ್ಯಾರ್ಥಿಗಳ ರಾಜ್ಯಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಹೊಂದಿರುವ ಗುರಿ ಮುಟ್ಟುವವರೆಗೆ ನಿಲ್ಲಬಾರದು ಎಂದರು.

ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಕ್ರೀಡಾ ಧ್ವಜಾರೋಹಣ ನೇರವೇರಿಸಿ ಮಾತನಾಡಿ, ಸೋಲೇ ಗೆಲುವಿನ ಸೋಪಾನವಾಗಿದೆ. ವಿದ್ಯಾರ್ಥಿಗಳು ಆಟ ಮತ್ತು ಪಾಠ ಜೊತೆ- ಜೊತೆಯಲ್ಲಿ ತೆಗೆದುಕೊಂಡರೆ ಸರ್ವತೋಮುಖ ಬೆಳವಣಿಗೆ ಹೊಂದಲು ಸಾಧ್ಯ. ಮುಂಬರುವ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಲು ಕಠೀಣ ಪರಿಶ್ರಮದ ಅಗತ್ಯವಿದೆ ಎಂದರು.

ಡಿಡಿಪಿಯು ಚಂದ್ರಕಾಂತ ಶಾಹಾಬಾದಕರ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯಮಟ್ಟದ ಟೇಬಲ್ ಟೆನಿಸ್ ಪಂದಾವಳಿಯಲ್ಲಿ ರಾಜ್ಯದ ಶೈಕ್ಷಣಿಕ 30 ಜಿಲ್ಲೆಯ ಕ್ರೀಡಾಪಟುಗಳು ಭಾಗವಹಿಸಿದ್ದು ಸಂತಸ ತಂದಿದೆ. ಪ್ರಾಂಶುಪಾಲ ಮತ್ತು ಉಪನ್ಯಾಸಕ ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ದೈಹಿಕ ಶಿಕ್ಷಕರ ನೆರವು ಮರೆಯಲಿಕ್ಕಾಗಲ್ಲ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಗುರುನಾನಕ ಪಿಯು ಕಾಲೇಜಿನ ಶ್ರೀಕಾಂತ ದೇಶಪಾಂಡೆ, ಶಾಹಿನ ಪಿಯು ಕಾಲೇಜಿನ ಎಮ್‌ಡಿ ಖಾದರ್‌, ಎಸ್‌ಬಿಆರ್ ಪಿಯು ಕಾಲೇಜಿನ ಸತೀಶ, ಮಾತಾ ಮಾಣಿಕೇಶ್ವರಿ ಪಿಯು ಕಾಲೇಜಿನ ಲೋಕೇಶ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ಸಂಜಯ ಜಸ್ಸಿ, ಮುಖ್ಯ ತೀರ್ಪುಗಾರ ರತನ ಕಮಲ ಅವರನ್ನು ಗೌರವಿಸಲಾಯಿತು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಗೌತಮ ಅರಳಿ, ಬೆಂಗಳೂರಿನಿಂದ ಕ್ರೀಡಾ ವೀಕ್ಷಕರಾಗಿ ಪ್ರಕಾಶ ಮೆಹತಾ ಮತ್ತು ಶಂಕರ ಸೋಲಾಪುರೆ, ಪ್ರಾಚಾರ್ಯರ ಸಂಘದ ಪ್ರ.ಕಾರ್ಯದರ್ಶಿ ಡಾ.ಮನ್ಮಥ ಡೋಲೆ, ರಾಜ್ಯಪ್ರತಿನಿಧಿ ಪ್ರಭು ಎಸ್. ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಓಂಕಾರ ಸೂರ್ಯವಂಶಿ, ಕಾರ್ಯದರ್ಶಿ ಶಿವರಾಜ ಪಾಟೀಲ್ ಅಲಿಯಾಬಾದ, ಪ್ರಾಚಾರ್ಯ ಸಂಘದ ಉಪಾಧ್ಯಕ್ಷರಾದ ಓಂಪ್ರಕಾಶ ದಡ್ಡೆ, ಡಿಡಿಪಿಯು ಕಚೇರಿ ಶಾಖಾಧಿಕಾರಿ ಸಂಗನಬಸವ ಮತ್ತಿತರರು ಇದ್ದರು.

ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಸುರೇಶ ಅಕ್ಕಣ್ಣ ಸ್ವಾಗತಿಸಿದರು. ಪ್ರಾಂಶುಪಾಲರ ಸಂಘದ ಉಪಾಧ್ಯಕ್ಷ ಅಶೋಕ ರಾಜೋಳೆ ನಿರೂಪಿಸಿದರೆ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಪ್ರ.ಕಾರ್ಯದರ್ಶಿ ರಾಜಶೇಖರ ಮಂಗಲಗಿ ವಂದಿಸಿದರು.

--

21ಬಿಡಿಆರ್54

ಬೀದರ್‌ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಪದವಿಪೂರ್ವ ಶಿಕ್ಷಣ ವಿದ್ಯಾರ್ಥಿಗಳ ರಾಜ್ಯಮಟ್ಟದ ಟೇಬಲ್ ಟಿನಿಸ್ ಪಂದ್ಯಾವಳಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹಾಗೂ ಜಿಲ್ಲಾಧಿಕಾರಿಗಳು ಆಟ ಆಡಿ ಚಾಲನೆ ನೀಡಿದರು.

--

21ಬಿಡಿಆರ್55

ಬೀದರ್‌ನಲ್ಲಿ ಪದವಿಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ಟೇಬಲ್ ಟಿನಿಸ್ ಪಂದ್ಯಾವಳಿ ನಿಮಿತ್ತ ಕ್ರೀಡಾ ಜ್ಯೋತಿಯನ್ನು ಶಾಸಕ ಬೆಲ್ದಾಳೆ ಹಾಗೂ ಜಿಲ್ಲಾಧಿಕಾರಿಗಳು ಮಕ್ಕಳಿಗೆ ಹಸ್ತಾಂತರಿಸಿದರು.

--

Share this article