ಗಂಭೀರ್‌ಗೆ ಖಾಲಿ ಚೆಕ್‌ನೀಡಿ ಸ್ವಾಗತಿಸಿದ್ದ ಶಾರುಖ್‌?

KannadaprabhaNewsNetwork |  
Published : May 27, 2024, 01:04 AM ISTUpdated : May 27, 2024, 04:25 AM IST
ಕೆಕೆಆರ್‌ ತಂಡದ ಮೆಂಟರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ತಂಡದ ಮಾಜಿ ನಾಯಕ ಗೌತಮ್‌ ಗಂಭೀರ್‌. | Kannada Prabha

ಸಾರಾಂಶ

ಗೌತಮ್‌ ಗಂಭೀರ್‌ರನ್ನು ಮೆಂಟರ್‌ ಆಗುವಂತೆ ಖಾಲಿ ಚೆಕ್‌ ನೀಡಿ ಆಹ್ವಾನಿಸಿದ್ದರಂತೆ ಕೋಲ್ಕತಾ ನೈಟ್‌ರೈಡರ್ಸ್‌ ತಂಡದ ಮಾಲಿಕ, ಬಾಲಿವುಡ್‌ ಬಾದ್‌ಷಾ ಶಾರುಖ್‌ ಖಾನ್‌. 10 ವರ್ಷ ಬಳಿಕ ಕೆಕೆಆರ್‌ ತಂಡವನ್ನು ಚಾಂಪಿಯನ್‌ ಪಟ್ಟಕ್ಕೇರಿಸಿದ ಗಂಭೀರ್‌.

ನವದೆಹಲಿ: ಭಾರತ ತಂಡದ ನೂತನ ಕೋಚ್‌ ಹುದ್ದೆ ರೇಸ್‌ನಲ್ಲಿರುವ ಗೌತಮ್‌ ಗಂಭೀರ್‌ಗೆ 2024ರ ಐಪಿಎಲ್‌ಗೂ ಮುನ್ನ ತಂಡದ ಮೆಂಟರ್‌ ಆಗಿ ಸೇರ್ಪಡೆಗೊಳ್ಳಲು ಕೋಲ್ಕತಾ ನೈಟ್‌ರೈಡರ್ಸ್‌ ತಂಡದ ಮಾಲಿಕ ಶಾರುಖ್‌ ಖಾನ್‌ ಖಾಲಿ ಚೆಕ್‌ ನೀಡಿ ಸ್ವಾಗತಿಸಿದ್ದರು ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.

ಗಂಭೀರ್‌ಗೆ ಮುಂದಿನ 10 ವರ್ಷಗಳ ಕಾಲ ತಂಡದೊಂದಿಗೆ ಇರುವಂತೆ ಶಾರುಖ್‌ ಕೇಳಿದ್ದರು ಎನ್ನಲಾಗಿದೆ. ಸದ್ಯ ಭಾರತ ತಂಡದ ಕೋಚ್‌ ಆಗಲು ಗಂಭೀರ್‌ ಹೆಸರು ಮುಂಚೂಣಿಯಲ್ಲಿದ್ದು, ಗಂಭೀರ್‌ರ ನಡೆ ಬಗ್ಗೆ ಕುತೂಹಲ ಮೂಡಿದೆ.

ಟ್ರೋಫಿ ಗೆಲ್ಲಿಸಲು ಗಂಭೀರ್‌ ಮತ್ತೆ ಬರಬೇಕಾಯಿತು!

ಚೆನ್ನೈ: ಕೆಕೆಆರ್‌ ಈ ಹಿಂದೆ 2 ಬಾರಿ ಐಪಿಎಲ್‌ ಚಾಂಪಿಯನ್‌ ಆಗಿತ್ತು. 2012, 2014ರಲ್ಲಿ ಟ್ರೋಫಿ ಎತ್ತಿಹಿಡಿದಾಗ ತಂಡದ ನಾಯಕರಾಗಿದ್ದವರು ಗೌತಮ್‌ ಗಂಭೀರ್‌. ಆ ನಂತರ ಗಂಭೀರ್‌ ತಂಡ ತೊರೆದು ಬಳಿಕ ನಿವೃತ್ತಿ ಪಡೆದಿದ್ದರು. 2024ರ ಐಪಿಎಲ್‌ಗೂ ಮುನ್ನ ಕೆಕೆಆರ್‌ ಗಂಭೀರ್‌ರನ್ನು ತಂಡಕ್ಕೆ ಮರಳಿ ಕರೆತಂದಿತು.

ತಂಡದ ಮಾರ್ಗದರ್ಶಕರಾಗಿ ನೇಮಕಗೊಂಡ ಗಂಭೀರ್‌, ಭಾರತೀಯ ದೇಸಿ ಕ್ರಿಕೆಟ್‌ನ ಅತ್ಯಂತ ಯಶಸ್ವಿ ಕೋಚ್‌ಗಳಲ್ಲಿ ಒಬ್ಬರಾದ ಚಂದ್ರಕಾಂತ್‌ ಪಂಡಿತ್‌ ಜೊತೆಗೂಡಿ ಕೆಕೆಆರ್‌ಗೆ 10 ವರ್ಷ ಬಳಿಕ ಮತ್ತೊಂದು ಐಪಿಎಲ್‌ ಟ್ರೋಫಿ ಗೆಲ್ಲಿಸಿಕೊಟ್ಟಿದ್ದಾರೆ.

PREV
Get the latest sports news in Kannada (ಕ್ರೀಡಾ ಸುದ್ದಿ) — live cricket scores, football highlights, tennis, badminton, and updates on all major sports events. Stay ahead with Kannada Prabha’s full-coverage sports reporting.

Recommended Stories

ಶಿಕ್ಷಕ ತಂದೆಗೆ ₹12 ಸಾವಿರ ವೇತನ, ಮಗನಿಗೆ ₹14.2 ಕೋಟಿ!
ಫಿಫಾ ವಿಶ್ವಕಪ್‌ ಗೆದ್ರೆ ₹452 ಕೋಟಿ!