ಕನ್ನಡಪ್ರಭ ವಾರ್ತೆ, ತಿಪಟೂರು: ಚೀನಾದಲ್ಲಿ ನಡೆದ ಪ್ಯಾರಾ ಏಷ್ಯನ್ ಗೇಮ್ಸ್ನಲ್ಲಿ ಪುರುಷರ ೧೫೦೦ಮೀ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕ ಪಡೆದ ಕಲ್ಪತರು ನಾಡು ತಿಪಟೂರು ತಾಲೂಕಿನ ಮಾಕನಹಳ್ಳಿಯ ಶರತ್ಗೆ ಸ್ಫೋರ್ಟ್ಸ್ ಕ್ಲಬ್ ಅಧ್ಯಕ್ಷ ಹಾಗೂ ರಾಷ್ಟ್ರೀಯ ಖೋ-ಖೋ ಸಂಸ್ಥೆ ಉಪಾಧ್ಯಕ್ಷರಾದ ಲೋಕೇಶ್ವರ ನೇತೃತ್ವದಲ್ಲಿ ರೋಟರಿ ಸಂಸ್ಥೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳವರು ನಗರದ ಅರಳೀಕಟ್ಟೆ ಬಳಿ ಸನ್ಮಾನ ಸಮಾರಂಭ ದಲ್ಲಿ ಸನ್ಮಾನಿಸಿ ಶುಭಹಾರೈಸಿ ಅಭಿನಂದಿಸಲಾಯಿತು.
ಬಾಕ್ಸ್............
ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಚಿನ್ನದ ಪದಕ ಪಡೆದವರಿಗೆ ಕ್ಲಾಸ್-1 ಮತ್ತು ಬೆಳ್ಳಿ ಪದಕ ಪಡೆದವರಿಗೆ ಕ್ಲಾಸ್-2 ಉದ್ಯೋಗವನ್ನು ಸರ್ಕಾರಿ ಇಲಾಖೆಗಳಲ್ಲಿ ನೇರ ನೇಮಕಾತಿ ಮೂಲಕ ನೀಡುವುದಾಗಿ ಮುಖ್ಯಮಂತ್ರಿಗಳೇ ಘೋಷಿಸಿದ್ದು, ಪ್ಯಾರಾ ಏಷ್ಯನ್ ಗೇಮ್ಸ್ನಲ್ಲಿ ನಮ್ಮ ತಾಲೂಕಿನ ಶರತ್ ಬೆಳ್ಳಿ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದು, ಈತನಿಗೆ ಮುಖ್ಯಮಂತ್ರಿಗಳೇ ಹೇಳಿದಂತೆ ಸರ್ಕಾರಿ ಉದ್ಯೋಗ ನೀಡಿ ಒಲಂಪಿಕ್ ಮಟ್ಟದ ಕ್ರೀಡೆಗಳಿಗೆ ಪ್ರೋತ್ಸಾಹ ನೀಡಬೇಕು. ಲೋಕೇಶ್ವರ, ರಾಷ್ಟ್ರೀಯ ಖೋ-ಖೋ ಸಂಸ್ಥೆ ಉಪಾಧ್ಯಕ್ಷರು.ಶರತ್ ತಂದೆ ತಾಯಿಯರಾದ ಭಾಗ್ಯಮ್ಮ, ಶಂಕರಪ್ಪ ಮತ್ತು ಕುಟುಂಬ ವರ್ಗದವರು. ತಹಸೀಲ್ದಾರ್ ಪವನ್ಕುಮಾರ್, ನಗರಸಭೆ ಪೌರಾಯುಕ್ತ ವಿಶ್ವೇಶ್ವರ ಬದರಗಡೆ, ಬಿಇಒ ಚಂದ್ರಯ್ಯ, ನಗರಸಭೆ ಸದಸ್ಯರಾದ ಸೊಪ್ಪುಗಣೇಶ್, ಭಾರತಿ, ಆಶೀಫಾಬಾನು, ಕುಮಾರ್ ಆಸ್ಪತ್ರೆಯ ಡಾ. ಶ್ರೀಧರ್, ಮುಖಂಡರಾದ ಡಾಬಾ ಶಿವಶಂಕರ್, ಕೆ.ಆರ್, ದೇವರಾಜು, ಬಸವರಾಜು, ಕುಮಾರ್, ವನಿತಾ ಪ್ರಸನ್ನ, ತರಕಾರಿ ಗಂಗಾಧರ್, ಗುರುಸ್ವಾಮಿ, ರೇಣು, ಪ್ರಭಾ ವಿಶ್ವನಾಥ್ ಭಾಗವಹಿಸಿದ್ದರು.
ಫೋಟೋ 4-ಟಿಪಿಟಿ1ಪ್ಯಾರಾ ಏಷ್ಯನ್ ಗೇಮ್ಸ್ನಲ್ಲಿ ಬೆಳ್ಳಿ ಪದಕ ಪಡೆದ ತಿಪಟೂರು ತಾಲೂಕಿನ ಮಾಕನಹಳ್ಳಿಯ ಶರತ್ಗೆ ಸನ್ಮಾನಿಸಿ ಮಾತನಾಡಿದ ತಿಪಟೂರು ಸ್ಪೋಟ್ಸ್ ಕ್ಲಬ್ ಅಧ್ಯಕ್ಷ ಹಾಗೂ ರಾಷ್ಟ್ರೀಯ ಖೋ-ಖೋ ಸಂಸ್ಥೆ ಉಪಾಧ್ಯಕ್ಷರಾದ ಲೋಕೇಶ್ವರ.