ಬ್ರಿಡ್ಜ್ಟೌನ್: ಟಿ20 ವಿಶ್ವಕಪ್ ವಿಜೇತ ಭಾರತ ತಂಡ ಬುಧವಾರ ತವರಿಗೆ ಆಗಮಿಸಲಿದೆ. ಆಟಗಾರರು, ಅವರ ಕುಟುಂಬಸ್ಥರು, ಕೋಚ್, ಸಹಾಯಕ ಸಿಬ್ಬಂದಿ ಸೇರಿ ಒಟ್ಟು 70ಕ್ಕೂ ಹೆಚ್ಚು ಮಂದಿ ಮಂಗಳವಾರ ರಾತ್ರಿ ವಿಶೇಷ ವಿಮಾನದಲ್ಲಿ ಬಾರ್ಬಡೋಸ್ನ ಬ್ರಿಡ್ಜ್ಟೌನ್ನಿಂದ ಹೊರಟು, ಸತತ 16 ಗಂಟೆಗಳ ಪ್ರಯಾಣಿಸಿ ಬುಧವಾರ ಸಂಜೆ 7.45ಕ್ಕೆ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ ಎಂದು ತಿಳಿದುಬಂದಿದೆ.
ರಾಷ್ಟ್ರ ರಾಜಧಾನಿಗೆ ಬುಧವಾರ ಸಂಜೆ ಆಗಮಿಸಲಿರುವ ತಂಡ ಗುರುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ. ತಮ್ಮ ನಿವಾಸದಲ್ಲಿ ಪ್ರಧಾನಿ, ಇಡೀ ತಂಡಕ್ಕೆ ಔತಣಕೂಟ ಏರ್ಪಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಕಾರ್ಯಕ್ರಮದ ದಿನಾಂಕ ಹಾಗೂ ಸಮಯ ಇನ್ನೂ ನಿಗದಿಯಾಗಿಲ್ಲ. ಕಾರ್ಯಕ್ರಮದಲ್ಲಿ ಭಾರತ ತಂಡಕ್ಕೆ ಮೋದಿ ಸನ್ಮಾನಿಸಲಿದ್ದಾರೆ ಎನ್ನಲಾಗಿದೆ.
ಮುಂಬೈನಲ್ಲಿ ಬೃಹತ್ ಮೆರವಣಿಗೆ?ಪ್ರಧಾನಿ ಭೇಟಿ ಬಳಿಕ ಆಟಗಾರರು, ಕೋಚ್ಗಳು ಹಾಗೂ ಸಹಾಯಕ ಸಿಬ್ಬಂದಿ ಮುಂಬೈಗೆ ತೆರಳಲಿದ್ದು, ಅಲ್ಲಿ ಬೃಹತ್ ಮೆರವಣಿಗೆ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ ಎನ್ನಲಾಗಿದೆ. ಬಳಿಕ ವಾಂಖೇಡೆ ಕ್ರೀಡಾಂಗಣದ ಆವರಣದಲ್ಲಿರುವ ಬಿಸಿಸಿಐ ಕೇಂದ್ರ ಕಚೇರಿಯಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದು, ಈ ವೇಳೆ ತಂಡಕ್ಕೆ 125 ಕೋಟಿ ರು. ಬಹುಮಾನ ವಿತರಿಸಲಾಗುತ್ತದೆ ಎಂದು ತಿಳಿದುಬಂದಿದೆ.ರೋಹಿತ್, ವಿರಾಟ್ಗೆ