ಬೆಂಗಳೂರು (ಡಿ.26): ಒಂದೆಡೆ ಕರ್ನಾಟಕದಲ್ಲಿ ಸಿಎಂ ಕುರ್ಚಿ ಕಸರತ್ತು ನಡೆಯುತ್ತಿದೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.27ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಶುಕ್ರ ವಾರ ಸಂಜೆ ತೆರಳಲಿದ್ದಾರೆ. ಆದರೆ ಈ ವೇಳೆ ಅವಕಾಶ ಸಿಕ್ಕರೆ ಸಚಿವ ಸಂಪುಟ ಪುನಾರಚನೆ ಬಗ್ಗೆ ಮಾತ್ರ ಅವರು ಹೈಕಮಾಂಡ್ ಜತೆ ಚರ್ಚಿಸುವ' ಸಾಧ್ಯತೆ ಇದೆ.ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್ಲೈವ್ ಬ್ಲಾಗ್
01:23 PM (IST) Dec 26
ಬೆಂಗಳೂರಿನಲ್ಲಿ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ಪಾಲಿಕೆಯು ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ನಿಯಮವನ್ನು ಉಲ್ಲಂಘಿಸುವವರಿಗೆ ದಂಡ ಹಾಗೂ ಜೈಲು ಶಿಕ್ಷೆಯ ಎಚ್ಚರಿಕೆ ನೀಡಲಾಗಿದೆ.
01:17 PM (IST) Dec 26
01:16 PM (IST) Dec 26
ಮದುವೆಯಾಗಿ ಒಂದೂವರೆ ತಿಂಗಳಲ್ಲೇ ನವವಧು ಗಾನವಿ ಆ*ತ್ಮಹತ್ಯೆ ಮಾಡಿಕೊಂಡಿದ್ದು, ವರದಕ್ಷಿಣೆ ಕಿರುಕುಳ ಹಾಗೂ ಪತಿ ಸೂರಜ್ ನಪುಂಸಕ ಎಂದು ಮೃತರ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಪತಿ, ಅತ್ತೆ ಹಾಗೂ ನಾದಿನಿಯನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ, ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ.
01:08 PM (IST) Dec 26
ಡಿಸೆಂಬರ್ 25 ಸ್ಯಾಂಡಲ್ವುಡ್ನಲ್ಲಿ ದೊಡ್ಡ ಹಬ್ಬ ಎಂದೇ ಹೇಳಬಹುದು. ಶಿವರಾಜ್ಕುಮಾರ್, ಉಪೇಂದ್ರ, ರಾಜ್ ಬಿ ಶೆಟ್ಟಿ ನಟನೆಯ ‘45’ ಸಿನಿಮಾ ಒಂದು ಕಡೆ ರಿಲೀಸ್ ಆದರೆ, ಇನ್ನೊಂದು ಕಡೆ ಕಿಚ್ಚ ಸುದೀಪ್ ನಟನೆಯ ‘ಮಾರ್ಕ್’ ಸಿನಿಮಾ ರಿಲೀಸ್ ಆಗಿದೆ. ಹಾಗಾದರೆ ಮಾರ್ಕ್ ಸಿನಿಮಾ ಕಲೆಕ್ಷನ್ ಎಷ್ಟು?
12:58 PM (IST) Dec 26
ನಟಿ ಜಯಮಾಲಿನಿ, ಶ್ರೀದೇವಿಯೊಂದಿಗಿನ ತಮ್ಮ ಬಾಂಧವ್ಯ ಮತ್ತು ಅವರ ಸಾವಿನ ಬಗ್ಗೆ ಮಾತನಾಡುತ್ತಾ ತುಂಬಾ ಭಾವುಕರಾದರು. ಕೃಷ್ಣ, ಶೋಭನ್ ಬಾಬು, ಎಂಜಿಆರ್ ಅವರಂತಹ ದಿಗ್ಗಜರೊಂದಿಗೆ ತಮ್ಮ ಸಿನಿಮಾ ಪಯಣವನ್ನು ನೆನಪಿಸಿಕೊಂಡರು. ಅವರು ಏನು ಹೇಳಿದ್ದಾರೆಂದು ಈ ಸ್ಟೋರಿಯಲ್ಲಿ ತಿಳಿಯೋಣ ಬನ್ನಿ..
12:40 PM (IST) Dec 26
ಅಮೆರಿಕಾ ಮೂಲದ ಸ್ಯಾನ್ಸನ್ ಗ್ರೂಪ್ನಿಂದ ಸೆಮಿ ಕಂಡಕ್ಟರ್ ಫ್ಯಾಬ್ರಿಕೇಷನ್ ಯೂನಿಟ್ ಸ್ಥಾಪನೆಗೆ ಸಿದ್ಧಪಡಿಸದ ಕೈಗಾರಿಕಾ ಭೂಮಿ ಸದ್ಯಕ್ಕೆ ಜಿಲ್ಲೆಯಲ್ಲಿ ಲಭ್ಯವಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
12:32 PM (IST) Dec 26
12:24 PM (IST) Dec 26
Areca Catechu: ಮಕ್ಕಳಂತೆ ಬೆಳೆಸಿದ ಅಡಿಕೆ ಮರಗಳನ್ನು ಅರಣ್ಯ ಇಲಾಖೆಯವರೇ ಕಟ್ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ ನಡೆದಿದೆ. ಈ ಘಟನೆಯನ್ನು ರೈತರು ಖಂಡಿಸಿದ್ದಾರೆ. ಜಯರಾಮ್ ಹೆಗಡೆ ತೋಟದಲ್ಲಿಯೇ ಈ ಘಟನೆ ನಡೆದಿದೆ.
12:16 PM (IST) Dec 26
ಬಿಜೆಪಿಯವರಿಗೆ ಕೃತಜ್ಞತೆ ಇಲ್ಲ. ಗಾಂಧೀಜಿಯವರ ಕೊಡುಗೆ ಬಗ್ಗೆ ಜ್ಞಾನ ಇಲ್ಲ. ಅದಕ್ಕಾಗಿಯೇ ನರೇಗಾದಲ್ಲಿರುವ ಗಾಂಧೀಜಿ ಅವರ ಹೆಸರು ಬದಲಾವಣೆ ಮಾಡುವ ಕಾರ್ಯಕ್ಕೆ ಮುಂದಾಗಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು.
12:16 PM (IST) Dec 26
12:06 PM (IST) Dec 26
ಉದಯಪುರದಲ್ಲಿ ಹೊಸ ವರ್ಷದ ಪಾರ್ಟಿ ಮುಗಿದ ನಂತರ ಐಟಿ ಕಂಪನಿಯ ಸಿಇಒ ಮತ್ತು ಹಿರಿಯ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರು ತನಗೆ ಲಿಫ್ಟ್ ಆಫರ್ ನೀಡಿ ಚಲಿಸುವ ಕಾರಿನಲ್ಲಿ ಅ*ತ್ಯಾಚಾರ ಮಾಡಿದ್ದಾರೆ ಎಂದು ಐಟಿ ಕಂಪನಿಯ ಮ್ಯಾನೇಜರ್ ಆರೋಪಿಸಿದ್ದಾರೆ.
11:49 AM (IST) Dec 26
₹40 ಲಕ್ಷ ವೆಚ್ಚದಲ್ಲಿ ಅದ್ದೂರಿಯಾಗಿ ಮದುವೆಯಾಗಿ ಶ್ರೀಲಂಕಾ ಹನಿಮೂನ್ಗೆ ತೆರಳಿದ್ದ ನವವಿವಾಹಿತೆ, ಅರ್ಧಕ್ಕೆ ಹನಿಮೂನ್ ಬಿಟ್ಟುಬಂದು ಅಪ್ಪನ ಮನೆಯಲ್ಲಿ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾದ ಒಂದೂವರೆ ತಿಂಗಳಲ್ಲೇ ನವವಿವಾಹಿತೆ ಗಾನವಿ ಸಾವನ್ನಪ್ಪಿದ್ದಾರೆ.
11:41 AM (IST) Dec 26
ರಾಜಮೌಳಿ ನಿರ್ದೇಶನದ ಪ್ರಭಾಸ್, ರಾಣಾ ದಗ್ಗುಬಾಟಿ, ಅನುಷ್ಕಾ, ರಮ್ಯಾ ಕೃಷ್ಣನ್ ನಟನೆಯ ಬಾಹುಬಲಿ ದಿ ಎಪಿಕ್ ಸಿನಿಮಾ ಈಗ OTT ಪ್ಲಾಟ್ಫಾರ್ಮ್ನಲ್ಲಿ ಬಿಡುಗಡೆಯಾಗಿದೆ. ಅದರ ಬಗ್ಗೆ ನೋಡೋಣ.
11:20 AM (IST) Dec 26
ತಮಿಳು ಬಿಗ್ಬಾಸ್ನಲ್ಲಿ ಸ್ಪರ್ಧಿ ವಿ.ಜೆ ಪಾರ್ವತಿ ಮಧ್ಯರಾತ್ರಿ ಸಹ ಸ್ಪರ್ಧಿ ಕಮರುದ್ದೀನ್ ಅವರ ಕಂಬಳಿಯೊಳಗೆ ನುಸುಳಿದ ಘಟನೆ ನಡೆದಿದೆ. ಕ್ಯಾಮೆರಾದಲ್ಲಿ ಸೆರೆಯಾದ ಈ ದೃಶ್ಯ ಪ್ರಸಾರವಾಗಿದ್ದು, ಟಿಆರ್ಪಿಗಾಗಿ ಅಸಭ್ಯತೆಯನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ
11:15 AM (IST) Dec 26
2026ಕ್ಕೆ ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಎ ಫಾರ್ ಆನಂದ್’, ‘ಡ್ಯಾಡಿ’ ಸೇರಿದಂತೆ ಹಲವು ಚಿತ್ರಗಳು ಬಿಡುಗಡೆಯಾಗಬಹುದು. ಡಾಲಿ ನಟನೆಯ ‘ಅಣ್ಣ ಫ್ರಂ ಮೆಕ್ಸಿಕೋ’, ‘ಜಿಂಗೋ’ ಸಿನಿಮಾಗಳು ಬರಬಹುದು.
11:14 AM (IST) Dec 26
Bigg Boss Kannada Season 12 Episode Update: ಬಿಗ್ ಬಾಸ್ ಕನ್ನಡ ಸೀಸನ್ 12 ಶೋನಲ್ಲಿ ಗಿಲ್ಲಿ ನಟ ಅವರು ಸಖತ್ ಆಗಿ ಆಡುತ್ತಿದ್ದಾರೆ. ಈಗ ಗಿಲ್ಲಿ ನಟನ ತಂದೆ-ತಾಯಿ ಮನೆಗೆ ಬಂದಿದ್ದು, ಮದುವೆ ವಿಚಾರ ಚರ್ಚೆ ಆಗಿದೆ. ಅಂದಹಾಗೆ ಅಶ್ವಿನಿ ಗೌಡ ಅವರು ಗಿಲ್ಲಿ ನಟನ ಮದುವೆ ಬಗ್ಗೆ ಮಾತನಾಡಿದ್ದಾರೆ.
10:53 AM (IST) Dec 26
ಮೈಸೂರು ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು ಬಲೂನ್ ಮಾರಾಟಗಾರ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆ ಆಕಸ್ಮಿಕವೇ ಅಥವಾ ಉದ್ದೇಶಪೂರ್ವಕವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
10:38 AM (IST) Dec 26
ಈ ವಿಧೇಯಕ ಶಿಕ್ಷೆ ನೀಡುವುದಕ್ಕೆ ಮಾತ್ರ ಸೀಮಿತವಾಗದೆ, ದ್ವೇಷ ಹರಡುವಿಕೆ ತಡೆಯುವ ಸಮಗ್ರ ಉದ್ದೇಶವನ್ನೂ ಹೊಂದಿದೆ. ದ್ವೇಷ ಭಾಷಣದ ಪ್ರಸಾರ, ಪ್ರಕಟಣೆ ಅಥವಾ ಪ್ರಚಾರವನ್ನು ಪರಿಣಾಮಕಾರಿಯಾಗಿ ತಡೆಯುತ್ತದೆ.
10:20 AM (IST) Dec 26
ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕ, 40 ಪ್ರಯಾಣಿಕರ ಜೀವವನ್ನು ಪಣಕ್ಕಿಟ್ಟು ಡ್ರೈವಿಂಗ್ ಮಾಡುವಾಗಲೇ ಮೊಬೈಲ್ನಲ್ಲಿ ಮಾತನಾಡಿದ್ದಾನೆ. ಧಾರವಾಡದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ಘಟನೆಯನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿದ್ದಾರೆ.
10:17 AM (IST) Dec 26
ವಿಧೇಯಕಲ್ಲಿ ಜಾತಿ ಎಂಬ ಪದವನ್ನು ಏಕೆ ಕೈಬಿಡಲಾಗಿದೆ? ಜಾತಿ ವಿರುದ್ಧ ದ್ವೇಷ ಕಾರುವುದು, ದ್ವೇಷ ಭಾಷಣ, ದ್ವೇಷ ಅಪರಾಧದ ವ್ಯಾಪ್ತಿಗೆ ಬರುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಕಾನೂನು ತಜ್ಞರು, ಕಾಯ್ದೆ ಮಾಡಿದವರು ಸ್ಪಷ್ಟಪಡಿಸಬೇಕು.
09:49 AM (IST) Dec 26
ಚಿತ್ರದುರ್ಗದ ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಚಿಕಿತ್ಸೆ ಪಡೆಯುತ್ತಿದ್ದ ಬಸ್ ಚಾಲಕ ಮೊಹಮದ್ ರಫೀಕ್ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸುಟ್ಟು ಕರಕಲಾದ ಮೃತದೇಹಗಳನ್ನು ಡಿಎನ್ಎ ಪರೀಕ್ಷೆಯ ನಂತರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು.
09:41 AM (IST) Dec 26
Actress Pallavi Mattighatta: ಕನ್ನಡ ಕಿರುತೆರೆ ನಟಿ ಪಲ್ಲವಿ ಮತ್ತಿಘಟ್ಟ ಅವರು ಶೃಂಗೇರಿ ಕ್ಷೇತ್ರದ ಗುರುಗಳ ಜೊತೆ ಒಂದು ಗಂಟೆ ಮಾತನಾಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಮಠದವರು ಸ್ಪಷ್ಟೀಕರಣ ನೀಡಿದ್ದಾರೆ. ಹಾಗಾದರೆ ನಡೆದಿದ್ದು ಏನು?
09:36 AM (IST) Dec 26
ಡಿಸೆಂಬರ್ ಮಾಸದಲ್ಲಿ ಬಿಡುಗಡೆಯಾದ ಮೂರು ಸ್ಟಾರ್ ಸಿನಿಮಾಗಳು ಚಿತ್ರರಂಗಕ್ಕೆ ತಕ್ಕಮಟ್ಟಿನ ಚೈತನ್ಯ ತಂದಿವೆ. ಬಹುತೇಕ ಚಿತ್ರಮಂದಿರಗಳು ಭರ್ತಿಯಾಗಿ ಸ್ಯಾಂಡಲ್ವುಡ್ ಕಳೆಗಟ್ಟುತ್ತಿದೆ.
09:25 AM (IST) Dec 26
ರಣವೀರ್ ಸಿಂಗ್ ಅವರ 'ಧುರಂಧರ್ 2' ಮಾರ್ಚ್ 19, 2026 ರಂದು ಹಿಂದಿ, ತೆಲುಗು, ತಮಿಳು, ಕನ್ನಡ, ಮಲಯಾಳಂನಲ್ಲಿ ಪ್ಯಾನ್ ಇಂಡಿಯಾ ರಿಲೀಸ್ ಆಗಲಿದೆ. 640 ಕೋಟಿ ಗಳಿಸಿದ ಮೊದಲ ಭಾಗದ ನಂತರ, ಸೀಕ್ವೆಲ್ ಪೋಸ್ಟ್ ಪ್ರೊಡಕ್ಷನ್ನಲ್ಲಿದೆ.
09:09 AM (IST) Dec 26
ಬಿಗ್ ಬಾಸ್ ಕನ್ನಡ ಸೀಸನ್ 12 ಶೋಗೆ ಫ್ಯಾಮಿಲಿ ರೌಂಡ್ ಇದ್ದು, ಈಗಾಗಲೇ ಮನೆಗೆ ಎಲ್ಲ ಸ್ಪರ್ಧಿಗಳ ಮನೆಯವರು ಎಂಟ್ರಿ ಕೊಟ್ಟಿದ್ದಾರೆ. ಈಗ ಮಾಳು ನಿಪನಾಳ ಅವರ ಕುಟುಂಬ ಕೂಡ ದೊಡ್ಮನೆಗೆ ಬಂದಿದೆ.
08:40 AM (IST) Dec 26
Halli Power Show: ಸಿಟಿ ಲೈಫ್ ಬಿಟ್ಟು, ಹಳ್ಳಿಯಲ್ಲಿ ಜೀವನ ಮಾಡುವ ಕಥೆಯೇ ‘ಹಳ್ಳಿ ಪವರ್’ ರಿಯಾಲಿಟಿ ಶೋನ ತಿರುಳು. ಈಗ ಈ ಶೋ ಗ್ರ್ಯಾಂಡ್ ಫಿನಾಲೆ ಸಮಯ ಹತ್ತಿರ ಬಂದಿದೆ. ಹಾಗಾದರೆ ಯಾರು ವಿನ್ನರ್ ಆಗ್ತಾರೆ?
08:26 AM (IST) Dec 26
ಡಾ.ಶಾಮನೂರು ಶಿವಶಂಕರಪ್ಪ ಅವರು ರಾಜ್ಯ ರಾಜಕಾರಣದಲ್ಲಿ ಸರಳ ಸಜ್ಜನ, ಸಾತ್ವಿಕ ರಾಜಕಾರಣಿಯಾಗಿದ್ದರು. ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದಲ್ಲೂ ಅಚ್ಚಳಿಯದ ಮುದ್ರೆ ಒತ್ತಿದ್ದರು. ಅವರು ದೇಶದ ಯಾವುದೇ ರಾಜ್ಯ ವಿಧಾನಸಭೆ ಪ್ರತಿನಿಧಿಸುವ ಶಾಸಕರ ಪೈಕಿ ಅತ್ಯಂತ ಹಿರಿಯರು ಎನ್ನುವುದು ವಿಶೇಷ.
08:15 AM (IST) Dec 26
ಪ್ರಸ್ತುತ ದಿನಮಾನಗಳಲ್ಲಿ ನಾವು ಆಧುನಿಕ ಆಹಾರ ಪದ್ಧತಿ ಅಳವಡಿಕೆ ಮಾಡಿಕೊಂಡಿದ್ದೇವೆ. ಆದರೆ, ಯಾವುದು ಶುದ್ಧ ಮತ್ತು ಯಾವುದು ಅಶುದ್ಧ ಎಂಬುದನ್ನು ಪತ್ತೆ ಮಾಡುವುದೇ ಸವಾಲಿನ ಸಂಗತಿ ಆಗಿದೆ.
07:41 AM (IST) Dec 26
ಹೀರೋನ ಒಂದು ಏಟಿಗೇ ರಕ್ತ ಕಾರುವ, ಗಾಳಿಯಲ್ಲಿ ಹಾರುವ ಹತ್ತಾರು ವಿಲನ್ಗಳು, ನೆಲಕ್ಕೆ ಗುದ್ದಿದರೆ ನೆಲವೇ ಒಡೆಯುವಂಥಾ ಹೀರೋ ಕೇಂದ್ರಿತ ವೈಭವೀಕರಣಗಳು ಸಾಕಷ್ಟಿವೆ. ಬೋನಸ್ನಂತೆ ಡ್ಯಾನ್ಸಿಂಗ್ ಸ್ಟೈಲ್ ಫೈಟ್ ಇದೆ.
07:41 AM (IST) Dec 26
ರಾಜ್ಯದಲ್ಲಿ ಇರುವುದು ಕಾಂಗ್ರೆಸ್ನ ಲೂಟಿ ಸರ್ಕಾರ. ಒಬ್ಬ ಆರ್ಥಿಕ ಸಚಿವರಿಗೆ ಗೃಹಲಕ್ಷ್ಮೀ ಯೋಜನೆಯ ₹5 ಸಾವಿರ ಕೋಟಿ ಬಗ್ಗೆ ಮಾಹಿತಿಯೇ ಇಲ್ಲವೆಂದರೆ ಹೇಗೆ? ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
07:40 AM (IST) Dec 26
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ ಸಂಬಂಧ ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಂ ಮಾಲೀಕತ್ವದ ಮೆಟಾ ಕಂಪನಿಗೆ ಅಧಿಕಾರಿಗಳು ಪತ್ರ ಬರೆದು ಮಾಹಿತಿ ಕೋರಿದ್ದಾರೆ ಎಂದು ತಿಳಿದು ಬಂದಿದೆ.
07:40 AM (IST) Dec 26
ಶರವೇಗವಾಗಿ ಮೊಬೈಲ್ ಫೋನ್ಗಳನ್ನು ಸ್ಕ್ರೋಲ್ ಮಾಡುವ ಇವತ್ತಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ ಎಂಬುದು ನಮ್ಮನ್ನು ಪರಸ್ಪರ ಬೆಸೆಯುವ ವೇದಿಕೆಯಾಗಬೇಕಿತ್ತು. ದುರ್ದೈವವೆಂದರೆ, ಅದು ಈಗ ವಿಷ ಉಗುಳುವ ಪೆಡಂಭೂತವಾಗಿಬಿಟ್ಟಿದೆ.
07:39 AM (IST) Dec 26
ವಾಜಪೇಯಿ ಅವರ ದೇಶಭಕ್ತಿ ನಮಗೆ ಪ್ರೇರಣೆ ಆಗಬೇಕು. ಅವರ ದೂರದೃಷ್ಟಿತ್ವವನ್ನು ಅರ್ಥ ಮಾಡಿಕೊಳ್ಳಿ. ಅಸ್ತಿತ್ವ ಕಳಕೊಳ್ಳುತ್ತಿರುವ ಕಾಂಗ್ರೆಸ್ಸಿನ ಸ್ಥಿತಿಯನ್ನು ಪಂಚಾಯಿತಿ ಚುನಾವಣೆ ತೋರಿಸಿಕೊಟ್ಟಿದೆ ಎಂದರು ಬಿವೈವಿ.
07:39 AM (IST) Dec 26
ಒಂದೆಡೆ ಕರ್ನಾಟಕದಲ್ಲಿ ಸಿಎಂ ಕುರ್ಚಿ ಕಸರತ್ತು ನಡೆಯುತ್ತಿದೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.27ರಂದು ದೆಹಲಿಯಲ್ಲಿ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಶುಕ್ರವಾರ ಸಂಜೆ ತೆರಳಲಿದ್ದಾರೆ.
07:39 AM (IST) Dec 26
ಮೂಲ ಸೌಕರ್ಯದ ಬಗ್ಗೆ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಲಹೆ ಕೊಟ್ಟರೆ, ರಾಜ್ಯ ಸರ್ಕಾರದವರು ದುರಂಹಕಾರದ ಮಾತುಗಳನ್ನು ಆಡುತ್ತಾರೆ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
07:38 AM (IST) Dec 26
ರಾಜ್ಯ ಸರ್ಕಾರವು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಅಂತಿಮ ಅಧಿಸೂಚನೆ ಹೊರಡಿಸಿದ್ದು, ಮಾಸ್ಟರ್ ಪ್ಲಾನ್ ಏರಿಯಾ (ಸಮಗ್ರ ಯೋಜನಾ ಪ್ರದೇಶ) ಪ್ರಕಾರ ಭೂ ಬಳಕೆ ಮಾಡಿಕೊಳ್ಳಲು ಪ್ರತ್ಯೇಕವಾಗಿ ಜಿಲ್ಲಾಧಿಕಾರಿಗಳಿಂದ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.