ಲಕ್ಷ್ಮಣ ರೇಖೆ ದಾಟಬಾರದು ಭಾರತಕ್ಕೆ ಅಮೆರಿಕ ಎಚ್ಚರಿಕೆ

KannadaprabhaNewsNetwork |  
Published : Apr 01, 2024, 12:52 AM ISTUpdated : Apr 01, 2024, 04:12 AM IST
ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನೂನ್‌ | Kannada Prabha

ಸಾರಾಂಶ

ಅಮೆರಿಕದಲ್ಲಿರುವ ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನೂನ್‌ ಹತ್ಯೆಗೆ ಭಾರತ ಯತ್ನಿಸಿತ್ತು ಎಂಬ ಆರೋಪಗಳ ಬೆನ್ನಲ್ಲೇ, ಮತ್ತೊಂದು ದೇಶದ ಪ್ರಜೆ ವಿಷಯದಲ್ಲಿ ಯಾರೂ ಕೂಡಾ ಲಕ್ಷ್ಮಣ ರೇಖೆ ದಾಟಬಾರದು ಎಂದು ಅಮೆರಿಕ ಭಾರತಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆ.

ನವದೆಹಲಿ: ಅಮೆರಿಕದಲ್ಲಿರುವ ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನೂನ್‌ ಹತ್ಯೆಗೆ ಭಾರತ ಯತ್ನಿಸಿತ್ತು ಎಂಬ ಆರೋಪಗಳ ಬೆನ್ನಲ್ಲೇ, ಮತ್ತೊಂದು ದೇಶದ ಪ್ರಜೆ ವಿಷಯದಲ್ಲಿ ಯಾರೂ ಕೂಡಾ ಲಕ್ಷ್ಮಣ ರೇಖೆ ದಾಟಬಾರದು ಎಂದು ಅಮೆರಿಕ ಭಾರತಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆ. 

ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿರುವ ಭಾರತದಲ್ಲಿನ ಅಮೆರಿಕ ರಾಯಭಾರಿ ಎರಿಕ್‌ ಗಾರ್ಸೆಟಿ, ‘ವಿದೇಶಿ ಪ್ರಜೆಯೊಬ್ಬನ ಹತ್ಯೆಗೆ ಯಾವುದೇ ಸರ್ಕಾರ, ಯಾವುದೇ ಸರ್ಕಾರದ ಉದ್ಯೋಗಿ ಯತ್ನಿಸಬಾರದು. ಈ ವಿಷಯದಲ್ಲಿ ಯಾರೂ ಲಕ್ಷ್ಮಣರೇಖೆ ದಾಟಬಾರದು. ಏಕೆಂದರೆ ಅದು ಒಂದು ದೇಶದ ಸಾರ್ವಭೌಮತೆಯ ಪ್ರಶ್ನೆ ಎಂದರು. 

ಜೊತೆಗೆ ಪನ್ನೂನ್‌ ಹತ್ಯೆ ವಿಫಲ ಯತ್ನಕ್ಕೆ ಸಂಬಂಧಿಸಿದಂತೆ ಭಾರತ ಮತ್ತು ಅಮೆರಿಕ ಜಂಟಿಯಾಗಿ ತನಿಖೆ ನಡೆಸುತ್ತಿವೆ ಎಂದು ಹೇಳಿದರು.

PREV
Stay updated with latest International news (ಅಂತರಾಷ್ಟ್ರೀಯ ಸುದ್ದಿ) - global headlines, international politics, world events, economy, and breaking news from across the globe at KannadaPrabha News.

Recommended Stories

‘ಮೇಡ್‌ ಇನ್‌ ಚೀನಾ’ ಅಸ್ತ್ರಗಳು ಈಗ ವೆನಿಜುವೆಲಾದಲ್ಲೂ ಫೇಲ್‌!
ನಮ್ಮ ಯುದ್ಧ ವಿಮಾನಕ್ಕೆ ಭಾರೀ ಡಿಮ್ಯಾಂಡ್‌, ಸಾಲ ಬೇಡ : ಪಾಕ್‌