ಭಾರತ ಸರ್ಕಾರದ ವಿರುದ್ಧ ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನೂನ್ ಕೇಸ್‌ : ಅಮೆರಿಕ ನೋಟಿಸ್‌

KannadaprabhaNewsNetwork |  
Published : Sep 20, 2024, 01:30 AM ISTUpdated : Sep 20, 2024, 04:43 AM IST
 ಪನ್ನೂನ್ | Kannada Prabha

ಸಾರಾಂಶ

ಖಲಿಸ್ತಾನಿ ಉಗ್ರ  ಗುರುಪತ್ವಂತ್ ಸಿಂಗ್ ಪನ್ನೂನ್ , ಭಾರತ ತಮ್ಮ ಹತ್ಯೆಗೆ ಸಂಚು ರೂಪಿಸಿದೆ ಎಂದು ಭಾರತ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ರಾ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ನವದೆಹಲಿ: ಖಲಿಸ್ತಾನಿ ಉಗ್ರ ಗುರುಪತ್ವಂತ್ ಸಿಂಗ್ ಪನ್ನೂನ್ , ಭಾರತ ತಮ್ಮ ಹತ್ಯೆಗೆ ಸಂಚು ರೂಪಿಸಿದೆ ಎಂದು ಭಾರತ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ರಾ ಮಾಜಿ ಮುಖ್ಯಸ್ಥ ಸಮಂತ್ ಗೋಯೆಲ್ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಭಾರತ ಸರ್ಕಾರ ಮತ್ತು ದೋವೆಲ್‌ಗೆ ನೋಟಿಸ್‌ ನೀಡಿದ್ದು, 21 ದಿನದೊಳಗೆ ಉತ್ತರಿಸುವಂತೆ ಹೇಳಿದೆ.

ಅಮೆರಿಕದ ನ್ಯಾಯಾಲಯ ನೀಡಿರುವ ನೋಟಿಸ್‌ಗೆ ವಿದೇಶಾಂಗ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿದ್ದು, ‘ಇದು ಸಂಪೂರ್ಣವಾಗಿ ಅನಗತ್ಯವಾದದ್ದು, ಪನ್ನೂನ್ ಕಾನೂನು ಬಾಹಿರ ಸಂಘಟನೆಯಿಂದ ಬಂದವರು. ಅಮೆರಿಕದಲ್ಲಿ ಭಾರತದ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೋಪ ಮಾಡಿರುವ ವ್ಯಕ್ತಿ ಭಾರತದ ನಂಟು ಹೊಂದಿದ್ದಾನೆ. ಇದು ಕಳವಳಕಾರಿ ವಿಚಾರ. ಇದು ಸರ್ಕಾರದ ನೀತಿಗೆ ವಿರುದ್ಧವಾಗಿದೆ’ ಎಂದಿದ್ದಾರೆ.

PREV
Stay updated with latest International news (ಅಂತರಾಷ್ಟ್ರೀಯ ಸುದ್ದಿ) - global headlines, international politics, world events, economy, and breaking news from across the globe at KannadaPrabha News.

Recommended Stories

ಆಸ್ಟ್ರೇಲಿಯಾದಲ್ಲಿ ಯಹೂದಿಗಳ ನರಮೇಧ!
ಜನಸಂಖ್ಯೆ ಹೆಚ್ಚಳಕ್ಕೆ ಚೀನಾದಲ್ಲಿ ಕಾಂಡೋಮ್‌ ಟ್ಯಾಕ್ಸ್‌