ಕಾರ್ಗಿಲ್‌ ಯುದ್ಧ ತಡೆಗೆಯತ್ನಿಸಿದ್ದಕ್ಕೆ ಪದಚ್ಯುತಿ: ನವಾಜ್‌ ಷರೀಫ್‌

KannadaprabhaNewsNetwork |  
Published : Dec 11, 2023, 01:15 AM IST
ಭಾರತೀಯ ಧ್ವಜ | Kannada Prabha

ಸಾರಾಂಶ

ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಕಾರ್ಗಿಲ್ ಯುದ್ಧವನ್ನು ತಡೆಯಲು ನಾನು ಪ್ರಯತ್ನಿಸಿದ್ದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್‌ ಹೇಳಿದ್ದಾರೆ

ಇಸ್ಲಾಮಾಬಾದ್‌: ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಕಾರ್ಗಿಲ್ ಯುದ್ಧವನ್ನು ತಡೆಯಲು ನಾನು ಪ್ರಯತ್ನಿಸಿದ್ದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್‌ ಹೇಳಿದ್ದಾರೆ. ಮುಂದಿನ ಚುನಾವಣೆಗೆ ಟಿಕೆಟ್‌ ಆಕಾಂಕ್ಷಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಾನು ಕಾರ್ಗಿಲ್‌ ಯುದ್ಧ ನಡೆಯದಂತೆ ಮಾಡಲು ಸಾಕಷ್ಟು ಪ್ರಯತ್ನಪಟ್ಟಿದ್ದೆ. ಇದೇ ಕಾರಣಕ್ಕೆ ಅಂದಿನ ಸೇನಾ ಮುಖ್ಯಸ್ಥ ಪರ್ವೇಜ್ ಮುಷರಫ್‌ ಅವರು ನನ್ನನ್ನು ಸರ್ಕಾರದಿಂದ ಹೊರದೂಡಿದ್ದರು’ ಎಂದು ಹೇಳಿದ್ದಾರೆ. ಅಲ್ಲದೇ ಇದರ ಜೊತೆಗೆ ಪಾಕಿಸ್ತಾನ ಭಾರತ ಸೇರಿದಂತೆ ಇತರ ನೆರೆಯ ದೇಶಗಳೊಂದಿಗೆ ತನ್ನ ಸಂಬಂಧವನ್ನು ಸುಧಾರಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದ್ದಾರೆ.

PREV
Stay updated with latest International news (ಅಂತರಾಷ್ಟ್ರೀಯ ಸುದ್ದಿ) - global headlines, international politics, world events, economy, and breaking news from across the globe at KannadaPrabha News.

Recommended Stories

ಲಾಟರಿ ಮೂಲಕ ವೀಸಾ ವಿತರಣೆಗೆ ಟ್ರಂಪ್‌ ಬ್ರೇಕ್‌
ಕಾಂಬೋಡಿಯಾದ 30 ಅಡಿಯ ವಿಷ್ಣು ಪ್ರತಿಮೆ ಥಾಯ್ಲೆಂಡಿಂದ ಧ್ವಂಸ