ಭಾರತದಲ್ಲೇ ಉಳಿವ ಹಕ್ಕು ರೋಹಿಂಗ್ಯಾ ನಿರಾಶ್ರಿತರ ಬೇಡಿಕೆ ತಿರಸ್ಕರಿಸಿದ ಕೇಂದ್ರ

KannadaprabhaNewsNetwork |  
Published : Mar 22, 2024, 01:12 AM IST
ರೋಹಿಂಗ್ಯಾ ನಿರಾಶ್ರಿತರ | Kannada Prabha

ಸಾರಾಂಶ

ಮ್ಯಾನ್ಮಾರ್‌ನಿಂದ ಭಾರತಕ್ಕೆ ವಲಸೆ ಬಂದಿರುವ ರೋಹಿಂಗ್ಯಾ ನಿರಾಶ್ರಿತರಿಗೆ ಭಾರತದಲ್ಲಿ ಉಳಿಯುವ ಹಕ್ಕನ್ನು ಕಲ್ಪಿಸಲಾಗದು

ನವದೆಹಲಿ: ಮ್ಯಾನ್ಮಾರ್‌ನಿಂದ ಭಾರತಕ್ಕೆ ವಲಸೆ ಬಂದಿರುವ ರೋಹಿಂಗ್ಯಾ ನಿರಾಶ್ರಿತರಿಗೆ ಭಾರತದಲ್ಲಿ ಉಳಿಯುವ ಹಕ್ಕನ್ನು ಕಲ್ಪಿಸಲಾಗದು. ಅಲ್ಲದೆ ಅವರಿಗೆ ನಿರಾಶ್ರಿತರ ಸ್ಥಾನಮಾನ ನೀಡಲಾಗದು ಎಂದು ಕೇಂದ್ರ ಸರ್ಕಾರ ಸ್ಪಷ್ಪಪಡಿಸಿದೆ. ಈ ಕುರಿತು ಅದು ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದೆ.ರೋಹಿಂಗ್ಯಾ ನಿರಾಶ್ರಿತರನ್ನು ಬಂಧನಾ ಕೇಂದ್ರಗಳಿಂದ ಬಿಡುಗಡೆ ಮಾಡಬೇಕು. ಇಂಥ ಬಂಧನ ವಿದೇಶಿ ಕಾಯ್ದೆಯ ಉಲ್ಲಂಘನೆ ಎಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಈ ಮಾಹಿತಿ ನೀಡಿದೆ.ಭಾರತ ಅಭಿವೃದ್ಧಿ ಹೊಂದುತ್ತಿರುವ ದೇಶ. ವಿಶ್ವದಲ್ಲೇ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿದೆ. ಹೀಗಾಗಿ ನಮ್ಮ ಪ್ರಜೆಗಳ ಆದ್ಯತೆ ಪೂರೈಸುವುದು ನಮ್ಮ ಮೊದಲ ಕರ್ತವ್ಯ. ಹೀಗಿರುವಾಗ ಅಕ್ರಮವಾಗಿ ಭಾರತ ಪ್ರವೇಶಿಸಿ ಇಲ್ಲಿ ಉಳಿದುಕೊಂಡಿರುವ ರೋಹಿಂಗ್ಯಾಗಳಿಗೆ ಇಲ್ಲೇ ಉಳಿಯುವ ಹಕ್ಕು ಕಲ್ಪಿಸುವುದು ದೇಶದ ಭದ್ರತೆ ಮೇಲೆ ಗಂಭೀರ ಪರಿಣಾಮಗಳನ್ನು ಬೀರುತ್ತದೆ. ಅಕ್ರಮ ವಲಸಿಗರಿಗೆ ನಿರಾಶ್ರಿತರ ಸ್ಥಾನಮಾನ ನೀಡುವುದು ಕೇಂದ್ರ ಸರ್ಕಾರದ ನೀತಿಯ ವಿಷಯ. ಈ ವಿಷಯದಲ್ಲಿ ನ್ಯಾಯಾಲಯಗಳು ಯಾವುದೇ ಆದೇಶ ಮೂಲಕ ಸ್ಥಾನಮಾನ ನೀಡುವುದು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.ರೋಹಿಂಗ್ಯಾಗಳು ಯಾರು?: ಬೌದ್ಧ ಧರ್ಮ ಅನುಯಾಯಿಗಳೇ ಹೆಚ್ಚಿರುವ ಮ್ಯಾನ್ಮಾರ್‌ನಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ಬಳಿಕ ಸಾವಿರಾರು ರೋಹಿಂಗ್ಯಾ ಮುಸ್ಲಿಮರು ಭಾರತಕ್ಕೆ ಪ್ರವೇಶಿಸಿ ಇಲ್ಲೇ ಉಳಿದುಕೊಂಡಿದ್ದಾರೆ.

PREV
Stay updated with latest International news (ಅಂತರಾಷ್ಟ್ರೀಯ ಸುದ್ದಿ) - global headlines, international politics, world events, economy, and breaking news from across the globe at KannadaPrabha News.

Recommended Stories

‘ಮೇಡ್‌ ಇನ್‌ ಚೀನಾ’ ಅಸ್ತ್ರಗಳು ಈಗ ವೆನಿಜುವೆಲಾದಲ್ಲೂ ಫೇಲ್‌!
ನಮ್ಮ ಯುದ್ಧ ವಿಮಾನಕ್ಕೆ ಭಾರೀ ಡಿಮ್ಯಾಂಡ್‌, ಸಾಲ ಬೇಡ : ಪಾಕ್‌