ಹೊಗೆಮಂಜು: ಪೂರ್ವ ಪಾಕ್‌ನಲ್ಲಿಸಾವಿರಾರು ಜನರಿಗೆ ಅನಾರೋಗ್ಯ

KannadaprabhaNewsNetwork |  
Published : Nov 10, 2023, 01:01 AM IST

ಸಾರಾಂಶ

ಲಾಹೋರ್‌: ಪಾಕಿಸ್ತಾನದ ಸಾಂಸ್ಕೃತಿಕ ರಾಜಧಾನಿ ಎಂದೇ ಕರೆಸಿಕೊಳ್ಳುವ ಲಾಹೋರ್‌ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟವಾದ ಹೊಗೆ ಮಂಜು ಆವರಿಸಿದ್ದು, ಸಾವಿರಾರು ಜನರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

ಲಾಹೋರ್‌: ಪಾಕಿಸ್ತಾನದ ಸಾಂಸ್ಕೃತಿಕ ರಾಜಧಾನಿ ಎಂದೇ ಕರೆಸಿಕೊಳ್ಳುವ ಲಾಹೋರ್‌ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟವಾದ ಹೊಗೆ ಮಂಜು ಆವರಿಸಿದ್ದು, ಸಾವಿರಾರು ಜನರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ.

ಇದರಿಂದಾಗಿ ಶಾಲೆಗಳಿಗೆ ರಜೆ ನೀಡಲಾಗಿದ್ದು, ಮಾರುಕಟ್ಟೆಗಳು ಮತ್ತು ಉದ್ಯಾನವನಗಳನ್ನು 4 ದಿನಗಳ ಕಾಲ ಮುಚ್ಚಲಾಗಿದೆ. ಲಾಹೋರ್‌ ವಿಶ್ವದ ಅತಿ ಮಲಿನ ನಗರ ಸ್ಥಾನ ಪಡೆದುಕೊಂಡ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಾವಿರಾರು ಜನರು ಕೆಮ್ಮು ಮತ್ತು ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಇದರಿಂದ ರಕ್ಷಣೆ ಪಡೆದುಕೊಳ್ಳಲು ಮಾಸ್ಕ್‌ ಧರಿಸುವುದು ಮತ್ತು ಮನೆಯಲ್ಲೇ ಇರುವುದು ಮಾತ್ರ ನೆರವಾಗಲಿದೆ ಎಂದು ವೈದ್ಯರು ಹೇಳಿದ್ದಾರೆ. ಕೃಷಿ ತಾಜ್ಯವನ್ನು ಸುಡುವ ಪ್ರಮಾಣ ಅಧಿಕವಾಗಿರುವುದು ಈ ಮಾಲಿನ್ಯಕ್ಕೆ ಕಾರಣವಾಗಿದೆ ಎಂದು ತಜ್ಞರು ಹೇಳಿದ್ದಾರೆ.

PREV
Stay updated with latest International news (ಅಂತರಾಷ್ಟ್ರೀಯ ಸುದ್ದಿ) - global headlines, international politics, world events, economy, and breaking news from across the globe at KannadaPrabha News.

Recommended Stories

ಇರಾನ್‌ ಅಣ್ವಸ್ತ್ರ ತಯಾರಿ ಅಂತಿಮ ಹಂತಕ್ಕೆ ತಲುಪಿದ್ದೇ ದಾಳಿಗೆ ಕಾರಣ
ಇರಾನ್‌ ಪ್ರತೀಕಾರ ಜ್ವಾಲೆಗೆ ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಹತ್ಯೆ?