2008ರ ಮುಂಬೈಸರಣಿ ದಾಳಿಯಲ್ಲಿ 166 ಜನರ ಕೊಂದಿದ್ದ
==
ಇಂದು ಬೆಳಗ್ಗೆ ವಿಶೇಷ ವಿಮಾನದಲ್ಲಿ ಅಮೆರಿಕದಿಂದ ಭಾರತಕ್ಕೆ ಆಗಮನಭಾರತ ಸರ್ಕಾರದ ರಾಜತಾಂತ್ರಿಕತೆಗೆ ಜಾಗತಿಕ ಮಟ್ಟದಲ್ಲಿ ದೊಡ್ಡ ಜಯ
ಯಾರು ಈ ರಾಣಾ?ಪಾಕಿಸ್ತಾನ ಮೂಲಕ ರಾಣಾ ಕೆನಡಾದ ಉದ್ಯಮಿ. ಈತ ವಲಸೆ ಸೇವೆಗಳನ್ನೂ ಒದಗಿಸುತ್ತಿದ್ದ ಹಾಗೂ ಮುಂಬೈನಲ್ಲಿ ಕಚೇರಿ ಹೊಂದಿದ್ದ. ಈತನ ಸ್ನೇಹಿತನಾಗಿದ್ದ ಡೇವಿಡ್ ಹೆಡ್ಲಿ ಎಂಬಾತ ಪಾಕ್ನ ಲಷ್ಕರ್ ಎ ತೊಯ್ಬಾ ಉಗ್ರರ ಆಪ್ತನೂ ಆಗಿದ್ದ.
ಮುಂಬೈ ಸಮೀಕ್ಷೆ ನಡೆಸಿದ್ದ ಉಗ್ರ
==
- ಅಮಿತ್ ಶಾ, ಗೃಹ ಸಚಿವ
ನ್ಯೂಯಾರ್ಕ್/ಮುಂಬೈ: 26/11 ಮುಂಬೈ ಉಗ್ರ ದಾಳಿಯ ಆರೋಪಿ ತಹಾವುರ್ ರಾಣಾ ಭಾರತಕ್ಕೆ ಬಂದಿಳಿಯುವ ಕಾಲ ಸನ್ನಿಹಿತವಾಗಿದೆ. ಆತನನ್ನು ಅಮೆರಿಕದ ವಿಶೇಷ ವಿಮಾನದಲ್ಲಿ ಗಡೀಪಾರು ಮಾಡಲಾಗಿದೆ ಹಾಗೂ ಗುರುವಾರ ಬೆಳಗ್ಗೆ ಭಾರತಕ್ಕೆ ಆಗಮಿಸುವ ನಿರೀಕ್ಷೆಯಿದೆ.
ಇದರೊಂದಿಗೆ 26/11 ಘಟನೆ ನಡೆದು 17 ವರ್ಷಗಳ ಬಳಿಕ ಭಯೋತ್ಪಾದನೆ ವಿಚಾರದಲ್ಲಿ ದೊಡ್ಡ ಜಯ ಭಾರತಕ್ಕೆ ಸಿಕ್ಕಂತಾಗಿದೆ.
ತನ್ನನ್ನು ಭಾರತಕ್ಕೆ ಗಡೀಪಾರು ಮಾಡದಂತೆ ಕೋರಿದ್ದ ರಾಣಾನ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಈ ಬೆಳವಣಿಗೆಯಾಗಿದೆ. ‘ರಾಣಾನನ್ನು ಭಾರತದ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದೇವೆ’ ಎಂದು ಅಮೆರಿಕ ಜೈಲಧಿಕಾರಿಗಳು ಹೇಳಿದ್ದಾರೆ. ಇದರ ಬೆನ್ನಲ್ಲೇ ಆತನಿದ್ದ ವಿಮಾನ ಬುಧವಾರ ಸಂಜೆ ಅಮೆರಿಕದಿಂದ ಹೊರಟಿದೆ ಎಂಬ ಮಾಹಿತಿ ಲಭಿಸಿದೆ.ರಾಣಾನನ್ನು ಭಾರತಕ್ಕೆ ಗಡೀಪಾರು ಮಾಡುವುದಾಗಿ ಅಮೆರಿಕದ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಬಳಿಕ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದಾಗ ರಾಣಾನನ್ನು ಗಡೀಪಾರು ಮಾಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭರವಸೆ ನೀಡಿದ್ದರು.
ಅದರ ಬೆನ್ನಲ್ಲೇ, ‘ನಾನು ಪಾಕಿಸ್ತಾನ ಮೂಲದವನಾಗಿರುವುದರಿಂದ ಭಾರತದಲ್ಲಿ ನನ್ನ ಪ್ರಾಣಕ್ಕೆ ಅಪಾಯವಿದೆ. ಅಂತೆಯೇ ನನಗೆ ಆರೋಗ್ಯ ಸಮಸ್ಯೆಗಳೂ ಇವೆ. ಆದಕಾರಣ ನನ್ನನ್ನು ಗಡೀಪಾರು ಮಾಡಬಾರದು’ ಎಂದು ಆತ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ. ಆದರೆ ಅವನ ಮನವಿಯನ್ನು ಅಲ್ಲಿನ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಇದೀಗ ಗಡೀಪಾರಿಗೆ ಸಂಬಂಧಿಸಿದ ಎಲ್ಲಾ ಕಾಗದಪತ್ರಗಳ ಕೆಲಸ ಸಂಪನ್ನಗೊಂಡಿದ್ದು, ಭಾರತದ ವಶಕ್ಕೆ ಒಪ್ಪಿಸಲಾಗಿದೆ.ಗಲ್ಲಿಗೇರಿಸಿ- ಸಂತ್ರಸ್ತರು:
ಭಾರತದಲ್ಲಿ ರಾಣಾ ವಿಚಾರಣೆ ನಡೆಸಿ ಆತನನ್ನು ಗಲ್ಲಿಗೇರಿಸಬೇಕು ಎಂದು ಮುಂಬೈ ದಾಳಿ ಸಂತ್ರಸ್ತರು ಆಗ್ರಹಿಸಿದ್ದಾರೆ.