ಜನರು ಕಾಂಗ್ರೆಸ್ ಪಕ್ಷಕ್ಕೆ ಐದು ವರ್ಷಕ್ಕೆ ಅಧಿಕಾರ ಕೊಟ್ಟಿದ್ದಾರೆ. ಮುಂದಿನ ಚುನಾವಣೆ ಗೆದ್ದು ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸದ್ಯಕ್ಕೆ ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದೂ ಕೊಟ್ಟ ಮಾತು ತಪ್ಪುವವರಲ್ಲ. ಅವರು ಯಾರಿಗೆ ಯಾವ ಮಾತು ಕೊಟ್ಟಿದ್ದರೂ ಅದನ್ನು ಈಡೇರಿಸುತ್ತಾರೆ ಎಂದು ಮಾಜಿ ಸಂಸದ, ಬಮುಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮಾರ್ಮಿಕವಾಗಿ ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ನಾವ್ಯಾರು ಹೇಳಿಲ್ಲ. ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಪಕ್ಷ ಜವಾಬ್ದಾರಿ ನೀಡಿದೆ. ಅದನ್ನು ನಾವ್ಯಾರು ಅದನ್ನು ಪ್ರಶ್ನೆ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಧರ್ಮದ ಹೆಸರಲ್ಲಿ ಸರ್ಕಾರಿ ಜಾಗ ಒತ್ತುವರಿ ಹಾಗೂ ದೇವರ ಹೆಸರಲ್ಲಿ ರಿಯಲ್ ಎಸ್ಟೇಟ್ ನಡೆಸಲು ಅವಕಾಶ ನೀಡಲಾಗದು ಎಂದು ಹೈಕೋರ್ಟ್ ಕಟುವಾಗಿ ಹೇಳಿದೆ. ಕೋಲಾರದ ವೇಮಗಲ್ ಒತ್ತುವರಿ ಕೇಸಲ್ಲಿ ಗರಂ ಆಗಿದೆ
ಎಚ್ಡಿಎಫ್ಸಿ ಬ್ಯಾಂಕ್ ಎಟಿಎಂ ಘಟಕಗಳಿಗೆ ತುಂಬಲೆಂದು ಕೊಂಡೊಯ್ಯುತ್ತಿದ್ದ 7.11 ಕೋಟಿ ರು. ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಇಬ್ಬರು ಶಂಕಿತ ದರೋಡೆಕೋರರನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ನಿರ್ಮಾಣದಲ್ಲಿ ಕಾದಂಬರಿಕಾರ ಗಜಾನನ ಶರ್ಮಾ ಅವರ ಕಾದಂಬರಿ ಆಧರಿತ ‘ಚೆನ್ನಭೈರಾದೇವಿ’ ಸಿನಿಮಾ ನಿರ್ದೇಶನಕ್ಕೆ ಮುಂದಾಗಿರುವುದಾಗಿ ಹಿರಿಯ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ಹೇಳಿದ್ದಾರೆ.
14 ವರ್ಷದ ಬಾಲಕನೊಬ್ಬ ಕ್ರೀಡಾ ಪಾಡ್ಕಾಸ್ಟ್ ವಿಭಾಗದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದ್ದಾರೆ. ಮಲ್ಲಯ್ಯ ಇಂಟರ್ನ್ಯಾಷನಲ್ ಸ್ಕೂಲ್ನಲ್ಲಿ ಓದುತ್ತಿರುವ ಮನನ್ ಪೆರಿವಾಲ್ ‘ಮೈಕ್ ಆ್ಯಂಡ್ ಮ್ಯಾಜಿಕ್ ವಿತ್ ಮನನ್’ ಎಂಬ ಪಾಡ್ಕಾಸ್ಟ್ ಅನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ
‘ನಾನೀಗ ನಟಿಯಾಗಿ ಮಾಗಿದ್ದೇನೆ. ಈ ಹಂತದಲ್ಲಿ ಸಿನಿಮಾ 100 ಕೋಟಿಯದ್ದಾ, 500- 600 ಕೋಟಿ ರು. ಬಜೆಟ್ನದ್ದಾ ಅನ್ನೋದು ಮುಖ್ಯವಾಗೋದಿಲ್ಲ. ಬದಲಿಗೆ ಈ ಸಿನಿಮಾ ಸತ್ಯಕ್ಕೆ ಎಷ್ಟು ಹತ್ತಿರವಾಗಿದೆ ಅನ್ನುವುದು ಮುಖ್ಯವಾಗುತ್ತದೆ.
8 ಬಾರಿ ಚಾಂಪಿಯನ್ ಕರ್ನಾಟಕ ತಂಡ ಈ ಬಾರಿ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ 2ನೇ ಬಾರಿ ಇನ್ನಿಂಗ್ಸ್ ಅಂತರದ ಗೆಲುವು ಸಾಧಿಸಿ ಬೋನಸ್ ಅಂಕ ಪಡೆದಿದೆ. ಮಂಗಳವಾರ ಚಂಡೀಗಢ ವಿರುದ್ಧ ರಾಜ್ಯ ತಂಡ ಇನ್ನಿಂಗ್ಸ್ ಹಾಗೂ 185 ರನ್ ಭರ್ಜರಿ ಜಯಗಳಿಸಿ, 7 ಅಂಕ ತನ್ನದಾಗಿಸಿಕೊಂಡಿತು.
ಒಂದು ದಿನದ ಮಟ್ಟಿಗೆ ಟ್ರಾಫಿಕ್ ಪೊಲೀಸ್ ಆಗಿ ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರು ಮಂಗಳವಾರ ಕರ್ತವ್ಯ ನಿರ್ವಹಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.ಬೆಂಗಳೂರು ಸಂಚಾರ ಪೊಲೀಸರು ಸಾರ್ವಜನಿಕರಿಗೆ ಒಂದು ದಿನದ ಮಟ್ಟಿಗೆ ಸಂಚಾರ ಪೊಲೀಸ್ ಆಗುವ ಅವಕಾಶವನ್ನು ನಾಗರಿಕರಿಗೆ ಕಲ್ಪಿಸಿದ್ದರು