‘ಎಚ್ಎಸ್ವಿ’ ಎಂದೇ ಚಿರಪರಿಚಿತರಾಗಿದ್ದ ಹಿರಿಯ ಕವಿ, ಭಾವಗೀತೆಗಳ ಸರದಾರ, ನಾಟಕ ರಚನೆಕಾರ ಡಾ.ಎಚ್.ಎಸ್. ವೆಂಕಟೇಶ ಮೂರ್ತಿ (80) ಶುಕ್ರವಾರ ನಿಧನರಾದರು.
ವಸತಿ, ವಾಣಿಜ್ಯ ಹಾಗೂ ಕೈಗಾರಿಕೆ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಪಡೆಯಲು ಸಮಸ್ಯೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ ಶೀಘ್ರದಲ್ಲೇ ಪರಿಹಾರ ಕಂಡುಕೊಳ್ಳುತ್ತೇವೆ ಎಂದ ಇಂಧನ ಸಚಿವ ಕೆ.ಜೆ.ಜಾರ್ಜ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಪರಿಷತ್ ಸದಸ್ಯ ಹಾಗೂ ಹೈಕಮಾಂಡ್ನಲ್ಲಿ ತಮ್ಮದೇ ಆದ ಧ್ವನಿ ಹೊಂದಿರುವ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ಗುರುವಾರ ಭೇಟಿ ಮಾಡಿ, ಸುದೀರ್ಘ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ತಾಂತ್ರಿಕ ಪ್ರಸ್ತಾವನೆಗೆ ಅನುಮೋದನೆ ಪಡೆಯುವಿಕೆ ವಿಳಂಬ ಹಿನ್ನೆಲೆಯಲ್ಲಿ ಆರ್.ವಿ.ರಸ್ತೆ - ಬೊಮ್ಮಸಂದ್ರ (19.15ಕಿಮೀ) ಸಂಪರ್ಕಿಸುವ ನಮ್ಮ ಮೆಟ್ರೋ ಮಾರ್ಗ ಜನಸಂಚಾರಕ್ಕೆ ಮುಕ್ತವಾಗುವುದು ಇನ್ನಷ್ಟು ವಿಳಂಬ
ನಗರದ ಬನಶಂಕರಿ 6ನೇ ಹಂತದ ಬಡಾವಣೆ ಅಭಿವೃದ್ಧಿಗಾಗಿ ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ಹೆಮ್ಮಿಗೆಪುರ, ಗಾಣಕಲ್ಲು ಮತ್ತಿತರ ಗ್ರಾಮಗಳಲ್ಲಿನ ಭೂ ಸ್ವಾಧೀನಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ರಾಜ್ಯದಲ್ಲಿ ಪ್ರತಿ ತಿಂಗಳು ಸುಮಾರು 40 ಸಾವಿರ ನಾಯಿ ಕಡಿತದ ಪ್ರಕಣಗಳು ವರದಿಯಾಗುತ್ತಿದ್ದು, ನಾಯಿ ಕಡಿತದಿಂದ ಜೀವ ಉಳಿಸುವ ಆ್ಯಂಟಿ ರೇಬೀಸ್ ಲಸಿಕೆ (ಎಆರ್ವಿ) ಮತ್ತು ರೇಬಿಸ್ ಇಮ್ಯುನೊಗ್ಲೋಬುಲಿನ್ ಔಷಧ ಸಾಕಷ್ಟು ಲಭ್ಯವಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಿಬಿಎಂಪಿಯ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ಹೋಟೆಲ್ ಉದ್ಯಮ ದೇಶದ ಪ್ರವಾಸೋದ್ಯಮ ಮತ್ತು ಆರ್ಥಿಕತೆಗೆ ಗಮನಾರ್ಹ ಕೊಡುಗೆ ನೀಡುತ್ತಿದ್ದು, 30 ಲಕ್ಷಕ್ಕೂ ಅಧಿಕ ಜನರಿಗೆ ಉದ್ಯೋಗ ಕಲ್ಪಿಸಿದೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಶ್ಲಾಘಿಸಿದರು.
ರಿಸರ್ವ್ ಬ್ಯಾಂಕ್ನಿಂದ ತಿರಸ್ಕೃತಗೊಂಡ 50 ಲಕ್ಷ ರು. ನೋಟನ್ನು ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ ನಂಬಿಸಿ ಹಣ ಸುಲಿಗೆ ಮಾಡಿದ್ದ ಕಾನ್ಸ್ಟೇಬಲ್ ಹಾಗೂ ಆತನ ಸಹಚರರನ್ನು ಪೀಣ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೂರು ದಿನಗಳ ಹಿಂದೆ ನಡೆದಿದ್ದ ಬಟ್ಟೆ ವ್ಯಾಪಾರಿ ಪತ್ನಿ ಲತಾ ಕೊಲೆ ಪ್ರಕರಣ ಸಂಬಂಧ ಮೃತಳ ಸೋದರ ಸಂಬಂಧಿ ಸೇರಿದಂತೆ ಇಬ್ಬರನ್ನು ಕಾಟನ್ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.