ತೀವ್ರ ಮಾತಿನ ಚಕಮಕಿ ನಡುವೆ ಬೆಂಗಳೂರು ಹಾಲು ಒಕ್ಕೂಟ ನಿಯಮಿತದ (ಬಮುಲ್) ಒಂಬತ್ತು ನಿರ್ದೇಶಕ ಸ್ಥಾನಕ್ಕೆ ಭಾನುವಾರ ನಡೆದ ಚುನಾವಣೆಯಲ್ಲಿ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಏಳು ಸ್ಥಾನ ಗಳಿಸಿ ಪಾರಮ್ಯ ಸಾಧಿಸಿದ್ದಾರೆ.
ಖಾಸಗಿ ಲೇಔಟ್ಗೆ ರಸ್ತೆ ನಿರ್ಮಿಸಲು ಮತ್ತು ಅಕ್ರಮ ಕಲ್ಲು ಗಣಿಗಾರಿಕೆ ನಡೆಸಲು ಒತ್ತುವರಿ ಮಾಡಿಕೊಂಡಿದ್ದ ಸರ್ಕಾರಿ ಗೋಮಾಳ ಜಮೀನು ಸೇರಿದಂತೆ ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 74.98 ಕೋಟಿ ರು. ಮೌಲ್ಯದ 19.3 ಎಕರೆ ಜಮೀನನನ್ನು ನಗರ ಜಿಲ್ಲಾಡಳಿತ ವಶಕ್ಕೆ ಪಡೆದಿದೆ.
ತನ್ನ ಪತ್ನಿಯನ್ನು ಮತ್ತೆ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಮರು ನೇಮಕ ಮಾಡಲಿಲ್ಲ ಎಂದು ಆಕ್ರೋಶದಿಂದ ಪಕ್ಷದ ಕಚೇರಿಗೆ ಪತಿ ಬೆಂಕಿ ಹಾಕಿದ್ದಕ್ಕೆ ಪತ್ನಿಗೆ ಕೆಪಿಸಿಸಿ ಶಿಕ್ಷೆ ನೀಡಿದೆ. ಮಾಜಿ ಅಧ್ಯಕ್ಷೆ ಮಂಜುಳಾ ಗೂಳಿ ಅವರನ್ನು ಅಮಾನತು ಮಾಡಿ ಆದೇಶಿಸಲಾಗಿದೆ.
ವಕೀಲಿಕೆ ನಡೆಸಲು ಕರ್ನಾಟಕ ವಕೀಲರ ಪರಿಷತ್ನಲ್ಲಿ ಸನ್ನದು ನೋಂದಣಿ ಮಾಡಿಕೊಂಡ ನಂತರ ನ್ಯಾಯಾಂಗ ಸೇರಿ ಸರ್ಕಾರದ ವಿವಿಧ ಇಲಾಖೆಯಲ್ಲಿ ಉದ್ಯೋಗಕ್ಕೆ ಸೇರಿರುವ ಒಟ್ಟು 830 ಜನ ತಮ್ಮ ಸನ್ನದು ಅಮಾನತು ಪಡಿಸಿಕೊಂಡಿದ್ದಾರೆ.
‘ಸುವರ್ಣ ಶಿಕ್ಷಣ ಮೇಳ’ ಆಯೋಜನೆಯಿಂದ ಒಂದೇ ಸೂರಿನಡಿ ವಿದ್ಯಾರ್ಥಿಗಳು, ಪೋಷಕರಿಗೆ ಶಿಕ್ಷಣ ಸಂಸ್ಥೆಗಳ ಮಾಹಿತಿ ಸಿಗುತ್ತಿದೆ ಎಂದು ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರೀತಿಸಿ ಮದುವೆಯಾದ ಮೂರು ತಿಂಗಳಿಗೆ ಪತಿ ಹಾಗೂ ಆತನ ಕುಟುಂಬದ ಸದಸ್ಯರು ವರದಕ್ಷಿಣೆ ಕಿರುಕುಳ ನೀಡಿ ಮನೆಯಿಂದ ಹೊರ ಹಾಕಿದ್ದಾರೆ
ಸಹ ನಟಿ ಮೇಲೆ ಅತ್ಯಾಚಾರ ಆರೋಪದಡಿ ನಟ ಮನು ಮಡೇನೂರು ಬಂಧನ ಪ್ರಕರಣದ ತನಿಖೆ ಮುಂದುವರೆದಿದ್ದು, ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಸಂತ್ರಸ್ತೆ ಹಾಗೂ ಆರೋಪಿಯ ತಲಾ ಎರಡು ಮೊಬೈಲ್ಗಳನ್ನು ಜಪ್ತಿ ಮಾಡಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ(ಎಫ್ಎಸ್ಎಲ್) ಕಳುಹಿಸಿದ್ದಾರೆ.
ಡ್ರೋನ್ ಸರ್ವೇ ಮಾಹಿತಿ ಆಧಾರಿಸಿ ತಪ್ಪು ಮಾಹಿತಿ ನೀಡಿ ಆಸ್ತಿ ತೆರಿಗೆ ವಂಚಿಸಿದ ನಾಲ್ಕು ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ನೋಟಿಸ್ ನೀಡಲು ಪಾಲಿಕೆ ಮುಂದಾಗಿದೆ.
ರಾಜ್ಯದಲ್ಲಿ ಭಾನುವಾರ ಮತ್ತೆ 9 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಎಲ್ಲಾ ಸೋಂಕು ಪ್ರಕರಣ ಬೆಂಗಳೂರು ನಗರದಲ್ಲೇ ವರದಿಯಾಗಿದೆ. ತನ್ಮೂಲಕ ರಾಜ್ಯದಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.
ಫಾರ್ಮ್ ಹೌಸ್ನಲ್ಲಿ ರೇವ್ ಪಾರ್ಟಿ ಮಾಡಿ ಮಾದಕ ವಸ್ತು, ಮದ್ಯದ ನಶೆಯಲ್ಲಿ ತೇಲುತ್ತಿದ್ದ ಯುವಕ- ಯುವತಿಯರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕನ್ನಮಂಗಲ ಸಮೀಪ ನಡೆದಿದೆ.