ಮಕ್ಕಳು ಎಷ್ಟೇ ಚುರುಕಾದರೂ, ಗಣಿತಕ್ಕೆ ‘ಕಬ್ಬಿಣದ ಕಡಲೆ’ ಎಂಬ ಹಣೆಪಟ್ಟಿ ತಪ್ಪದು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಕೇಂದ್ರ ಶಿಕ್ಷಣ ಸಚಿವಾಲಯ ನಡೆಸಿದ ಸಮೀಕ್ಷೆಯೊಂದರಲ್ಲಿ, 6ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಕೇವಲ ಶೇ.53ರಷ್ಟು ಮಕ್ಕಳಿಗೆ 10ರ ವರೆಗಿನ ಮಗ್ಗಿ ಬರುತ್ತದೆ ಎಂದು ತಿಳಿದುಬಂದಿದೆ.
‘ಶಕ್ತಿ’ ಯೋಜನೆ ಅಡಿಯಲ್ಲಿ ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರು 500 ಕೋಟಿ ಉಚಿತ ಪ್ರಯಾಣದ ಗುರಿಯನ್ನು ಶೀಘ್ರದಲ್ಲಿ ತಲುಪುತ್ತಿದ್ದು, ಆ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜನೆ ಕುರಿತು ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪ್ರತ್ಯೇಕವಾಗಿ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಗುರುವಾರ ಭೇಟಿ ಮಾಡಲು ಪ್ರಯತ್ನಿಸಿರುವುದು ತೀವ್ರ ಕುತೂಹಲ ಮೂಡಿಸಿದೆ.
ಬ್ಯಾಂಕಿನಲ್ಲಿ ಫಿಕ್ಸ್ಡ್ ಡೆಪಾಸಿಟ್ ಇಟ್ಟರೆ ಒಳ್ಳೆಯದಾ ಅಥವಾ ಪೋಸ್ಟ್ ಆಫೀಸ್ನಲ್ಲಿ ದುಡ್ಡಿಡುವುದು ಲಾಭದಾಯಕವಾ ಎಂಬ ಪ್ರಶ್ನೆಗೆ ಉತ್ತರ ಈ ಬರಹದಲ್ಲಿದೆ.
ತಮಿಳು vs ಸಂಸ್ಕೃತ, ತಮಿಳು vs ಕಾಲ್ಡ್ವೆಲ್ ನೆಟ್ಟ ಸಸಿ । ತಮಿಳು ಸ್ವಾಭಿಮಾನವೀಗ ರಾಜಕೀಯ ದಾಳ, ಕಮಲ್ ಹಾಸನ್, ಇ.ವಿ. ವೇಲು, ಮಾರನ್ ಹೇಳಿಕೆಗಳು ಕೇವಲ ತಮಿಳು ಅಭಿಮಾನದಿಂದ ಬಂದಂಥವುಗಳೆ?
ವಾಂತಿ-ಭೇದಿಗೆ ಮೂವರು ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ. ಇದೇ ವೇಳೆ, 15ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಈ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಅಪಘಾತವೊಂದರಲ್ಲಿ ಪೆಟ್ಟಾದ ಕಾರಣ ಕಾಲು ನೋವಿನಿಂದಾಗಿ ಮೆಟ್ಟಿಲು ಹತ್ತಲಾಗದೆ ಕೋರ್ಟ್ನ ಹೊರಗೆ ಕುಳಿತಿದ್ದ ಮಹಿಳೆಯೊಬ್ಬರಿದ್ದಲ್ಲಿಗೆ ನ್ಯಾಯಾಧೀಶರೇ ಬಂದು ವಿಚಾರಣೆ ನಡೆಸಿದ ಘಟನೆ ರಾಮನಗರದಲ್ಲಿ ನಡೆದಿದೆ
ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು(ಎಸ್ಡಿಎಂಸಿ) ಕೈಗೊಂಡಿರುವ ಏಕಪಕ್ಷೀಯ ನಿರ್ಧಾರದಿಂದ ಮಕ್ಕಳಿಗೆ ವಾರದಲ್ಲಿ ಆರು ದಿನ ಮೊಟ್ಟೆ ನೀಡುವ ಯೋಜನೆ ಸಮರ್ಪಕ ಅನುಷ್ಠಾನ ಆಗುತ್ತಿಲ್ಲ ಎಂದು ಅಜೀಂ ಪ್ರೇಮ್ ಜೀ ಫೌಂಡೇಷನ್ ಆರೋಪಿಸಿದೆ.
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರನ್ನು ಪತ್ತೆ ಮಾಡಿ ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. ಈಗಾಗಲೇ 200ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಗಡಿಪಾರು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗಾಗಿ (ಇಸ್ರೋ) ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಅಬ್ಬಚಿಕ್ಕನಹಳ್ಳಿ ಮತ್ತು ಲಾಲಗೊಂಡನಹಳ್ಳಿ ಗ್ರಾಮಗಳಲ್ಲಿ 81 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದೆ.