ದೇಶ ತೊರೆಯಲು ಮೇ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಮೈಸೂರಿನಲ್ಲಿ ನೆಲೆಸಿರುವ ಪಾಕಿಸ್ತಾನದ ಮೂವರು ಮಕ್ಕಳು ತಮ್ಮ ತಾಯಿಯೊಂದಿಗೆ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಹೇಳಿದರು.
ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ಸೂಚನೆಯಂತೆ ರಾಜ್ಯದ ಇನ್ನೂ 4 ನಗರಗಳಲ್ಲಿ ಮಾಕ್ಡ್ರಿಲ್ ನಡೆಯಲಿದೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಆರಂಭ ಬೆನ್ನಲ್ಲೇ ಕೇಂದ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ರಾತ್ರಿ ಪಾಕ್ ಗಡಿಯಲ್ಲಿನ ಬಿಎಸ್ಎಫ್ ಸೇರಿದಂತೆ ದೇಶದ ಗಡಿ ಕಾವಲುಪಡೆಗಳ ಮುಖ್ಯಸ್ಥರ ಜೊತೆಗೆ ಮಾತುಕತೆ ನಡೆಸಿದರು.
ಭಾರತ- ಪಾಕ್ ಉದ್ವಿಗ್ನತೆ ನಡುವೆ ಹೈದರಾಬಾದ್ನಲ್ಲಿ ‘ಕರಾಚಿ ಬೇಕರಿ’ ಸಂಕಷ್ಟಕ್ಕೊಳಗಾಗಿದ್ದು, ಬೇಕರಿ ಹೆಸರಿನ ಬದಲಾವಣೆಗೆ ಆಗ್ರಹ ಕೇಳಿ ಬಂದಿದೆ. ಈ ಬೆನ್ನಲ್ಲೇ ಮಾಲೀಕರು ಸ್ಪಷ್ಟನೆ ನೀಡಿದ್ದು, ‘ಇದು ನೂರಕ್ಕೆ ನೂರರಷ್ಟು ಭಾರತದ ಉತ್ಪನ್ನ. ನಾವು ಭಾರತೀಯರು’ ಎಂದಿದೆ.
ಭಾರತವು ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ ಆಪರೇಶನ್ ಸಿಂದೂರ ನಡೆಸಿದ ಮಾರನೇ ದಿನವಾದ ಗುರುವಾರ ಎರಡೂ ದೇಶಗಳ ನಡುವೆ ಅಧಿಕೃತವಾಗಿಯೇ ಯುದ್ಧ ಆರಂಭವಾಗಿದೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನರೆಡ್ಡಿ ಅವರಿಗೆ ಹೈದರಾಬಾದ್ನ ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷಗಳ ಶಿಕ್ಷೆ ವಿಧಿಸಿದ ಹಿನ್ನೆಲೆಯಲ್ಲಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.
ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ನೌಕರಿಗಾಗಿ ಭೂಮಿ (ಭೂ ಉದ್ಯೋಗ) ಹಗರಣದಲ್ಲಿ ಆರ್ಜೆಡಿ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಪ್ರಾಸಿಕ್ಯೂಷನ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮತಿ ನೀಡಿದ್ದಾರೆ.
ಯಾರಾದರೂ ಭಾರತದ ತಾಳ್ಮೆ ಪರೀಕ್ಷಿಸಿದರೆ, ಆಪರೇಷನ್ ಸಿಂದೂರ್ನಂಥ ಉತ್ತರಕ್ಕೆ ಸಜ್ಜಾಗಿ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುಡುಗಿದ್ದಾರೆ.
ಭಾರತ-ಪಾಕ್ ನಡುವೆ ಉದ್ವಿಗ್ನತೆ ತಾರಕಕ್ಕೇರಿರುವ ಕಾರಣ ಇಸ್ರೇಲ್, ಸಿಂಗಾಪುರ ಮತ್ತು ಅಮೆರಿಕ ತಮ್ಮ ನಾಗರಿಕರಿಗೆ ಕಾಶ್ಮೀರ ಮತ್ತು ಪಾಕಿಸ್ತಾನವನ್ನು ತುರ್ತಾಗಿ ತೊರೆಯುವಂತೆ ಸೂಚಿಸಿವೆ.