ಕನ್ನಡ ಎಂದಾಕ್ಷಣ ಕನ್ನಡಿಗರಿಗೆ ಮೈಮನ ನವಿರೇಳುವುದು ಸಹಜ. ಆದರೆ ಉದ್ಯೋಗ, ವಿದ್ಯಾಭ್ಯಾಸ ಇನ್ನಿತರೆ ಕಾರಣಕ್ಕಾಗಿ ದೇಶ ಬಿಟ್ಟು ವಿದೇಶದಲ್ಲಿ ನೆಲೆಸಿದ ಕನ್ನಡಿಗರ ಕಥೆ ಏನು ಎನ್ನುವುದು ಸಹಜವಾಗಿ ಮೂಡುವ ಪ್ರಶ್ನೆ.
ಧ್ವನಿ ಇಲ್ಲದವರಿಗೆ ಶಕ್ತಿ ನೀಡಿ ಸಮ ಸಮಾಜ ಪರಿಕಲ್ಪನೆಗೆ ಜೀವತುಂಬಿ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದವರು ಬಸವಣ್ಣ. ಇಂದಿರಾ ಗಾಂಧಿಯವರು ಬಸವಣ್ಣನವರು ಹಾಕಿಕೊಟ್ಟ ದಾರಿಯಲ್ಲೇ ನಡೆದಿದ್ದು, ಇಂದಿರಾಗಾಂಧಿ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲಿನ ಅಭಿಮಾನ ಪ್ರದರ್ಶಿಸಿರುವ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣನವರ್ ಅವರು, ತಮ್ಮ ಪುತ್ರನಿಗೆ ‘ಶಿವಕುಮಾರ್’ ಎಂದು ಡಿ.ಕೆ.ಶಿವಕುಮಾರ್ ಅವರ ಮೂಲಕವೇ ನಾಮಕರಣ ಮಾಡಿಸಿದ್ದಾರೆ.
ಪ್ರಸಕ್ತ ಸಾಲಿನ ಕೇಂದ್ರ ಗೃಹ ಸಚಿವರ ದಕ್ಷತಾ ಪುರಸ್ಕಾರಕ್ಕೆ ಹಾಸನ ಜಿಲ್ಲಾ ಹೆಚ್ಚುವರಿ ವರಿಷ್ಠಾಧಿಕಾರಿ ಎಂ.ಕೆ.ತಮ್ಮಯ್ಯ ಸೇರಿ ರಾಜ್ಯದ ಎಂಟು ಮಂದಿ ಪೊಲೀಸರು ಭಾಜನರಾಗಿದ್ದಾರೆ. ಹಾಸನ ಎಎಸ್ಪಿ ತಮ್ಮಯ್ಯ, ಇತರರಿಗೆ ಪ್ರಶಸ್ತಿ
ಸಹಕಾರ ತತ್ವ ಮತ್ತು ಆಚರಣೆಯಲ್ಲಿ ಅಪಾರ ವಿಶ್ವಾಸ ಇರಿಸಿಕೊಂಡಿದ್ದ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಜನ್ಮದಿನದ ಪ್ರಯುಕ್ತ ಪ್ರತಿವರ್ಷ ನ.14ರಿಂದ 20ರವರೆಗೆ ದೇಶಾದ್ಯಂತ ‘ಅಖಿಲ ಭಾರತ ಸಹಕಾರ ಸಪ್ತಾಹ’ ಆಚರಿಸಲಾಗುತ್ತಿದೆ.
ಶ್ರೀ ತ್ಯಾಗರಾಜ ಕೋ ಆಪರೇಟಿವ್ ಬ್ಯಾಂಕ್ನಿಂದ 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸರ್ಕಾರಿ ಶಾಲಾ ಹೆಣ್ಣು ಮಕ್ಕಳಿಗೆ ‘ಐಸಿರಿ ಸಮೃದ್ಧಿ’ ಯೋಜನೆ ಪರಿಚಯಿಸಲಾಗುತ್ತಿದೆ. ಸುಕನ್ಯ ಸಮೃದ್ಧಿ ಯೋಜನೆ ಮಾದರಿಯಲ್ಲಿರುವ ಐಸಿರಿ ಸಮೃದ್ಧಿ ಯೋಜನೆಯಡಿ 500 ರು.ಯೊಂದಿಗೆ ಆಯಾ ಶಾಲಾ ಮಕ್ಕಳ ಹೆಸರಿನಲ್ಲಿ ಖಾತೆ
ಪರಿಚಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ ಆರೋಪದ ಮೇರೆಗೆ ಬೆಂಗಳೂರು ವಿಶ್ವ ವಿದ್ಯಾಲಯದ ನಿವೃತ್ತ ಪ್ರೊ.ಬಿ.ಸಿ.ಮೈಲಾರಪ್ಪ ಅವರನ್ನು ಬಸವೇಶ್ವರ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಸಿಬ್ಬಂದಿಗೆ ನೀಡಿರುವ ಹೊಸ ನೀಲಿ ಬಣ್ಣದ ಟೋಪಿ ಚರ್ಮ ರೋಗಕ್ಕೆ ಕಾರಣವಾಗುವುದರಿಂದ ಮೊದಲಿದ್ದಂತೆ ಸಮವಸ್ತ್ರವನ್ನು ಹೋಲುವ ಖಾಕಿ ಟೋಪಿ ಜಾರಿಗೆ ತರಬೇಕು ಇಲ್ಲದಿದ್ದರೆ ಕಾನೂನು ಹೋರಾಟ ನಡೆಸಲಾಗುವುದು ಸಾಮಾಜಿಕ ಅಭಿವೃದ್ಧಿ ರಂಗ ಹೇಳಿದೆ.
ಬನ್ನೇರುಘಟ್ಟದ ಸಫಾರಿಯಿಂದ ಹೈದರಾಬಾದ್ಗೆ ಸ್ಥಳಾಂತರಿಸುವ ವೇಳೆಯಲ್ಲಿ ಹೆಣ್ಣು ಕಾಡೆಮ್ಮೆವೊಂದು ಮೃತಪಟ್ಟಿದ್ದು, ಈ ಸಾವಿಗೆ ವೈದ್ಯಾಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂಬ ಆರೋಪ ಕೇಳಿ ಬಂದಿದೆ.
ನಗರದ ‘ಇಪಿಎಫ್ ಸ್ಟಾಫ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ’ಯಲ್ಲಿ ನೂರಾರು ಠೇವಣಿದಾರರ ಸುಮಾರು 70 ಕೋಟಿ ರು. ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಠೇವಣಿದಾರರು ಕಬ್ಬನ್ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.