5 ಬಾರಿ ಚಾಂಪಿಯನ್ ಎಂಬ ಖ್ಯಾತಿಯೊಂದಿಗೆ 18ನೇ ಆವೃತ್ತಿ ಐಪಿಎಲ್ಗೆ ಕಾಲಿಟ್ಟಿದ್ದ ಚೆನ್ನೈ ಸೂಪರ್ ಕಿಂಗ್ಸ್ನ ಅಭಿಯಾನ ಲೀಗ್ ಹಂತದಲ್ಲೇ ಕೊನೆಗೊಳ್ಳುವುದು ಬಹುತೇಕ ಖಚಿತವಾಗಿದೆ. ಎಂ.ಎಸ್.ಧೋನಿ ನಾಯಕತ್ವದ ಸಿಎಸ್ಕೆ ಈ ಸಲ ಟೂರ್ನಿಯಲ್ಲಿ ಆಡಿರುವ 9 ಪಂದ್ಯಗಳ ಪೈಕಿ 7ರಲ್ಲಿ ಎದುರಾಳಿಗೆ ಶರಣಾಗಿದೆ.
ಕ್ರಿಮಿನಲ್ ಪ್ರಕರಣಗಳಲ್ಲಿ ದೋಷಿಯಾಗಿ ನಿರ್ಧಾರಗೊಂಡು ಜೈಲು ಶಿಕ್ಷೆಗೆ ಒಳಗಾದ ಸರ್ಕಾರಿ ನೌಕರ ಪುನಃ ಸೇವೆಯಲ್ಲಿ ಮುಂದುವರಿಯಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿ ಹೈಕೋರ್ಟ್ ಆದೇಶಿಸಿದೆ.
ರಾಜ್ಯ ಸರ್ಕಾರದ ಕೆಲ ಪ್ರಮುಖ ಇಲಾಖೆಗಳಲ್ಲಿ ಸಚಿವರು ಕಾಮಗಾರಿ ಬಿಲ್ ಪಾವತಿಗೆ ಸಂಬಂಧಿಸಿ ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಲೋಕೋಪಯೋಗಿ ಇಲಾಖೆಯಲ್ಲಿ ಕಾಮಗಾರಿಗಳ ಟೆಂಡರ್ನಲ್ಲಿ ಗುತ್ತಿಗೆದಾರರು ಪಾಲ್ಗೊಳ್ಳದಂತೆ ಬೆದರಿಕೆ ಹಾಕಿ ತಡೆ ಒಡ್ಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ.
ರಾಮನಗರ ಹೆಸರು ಬದಲಾವಣೆಯನ್ನು ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು. ಅದನ್ನು ಮಾಡೇ ಮಾಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗುಡುಗಿದ್ದಾರೆ.
ಮುಂದಿನ ದಸರಾ ಹಬ್ಬದ ವೇಳೆಗೆ ಕೆಆರ್ಎಸ್ನಲ್ಲಿ ಕಾವೇರಿ ಆರತಿ ಆರಂಭಿಸಲು ನಿರ್ಧರಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಪಕ್ಷ ಯಾವುದೇ ಇರಲಿ ಒಬ್ಬ ಮನುಷ್ಯನಿಗೆ ನೀಡುವ ಕಿರುಕುಳಕ್ಕೂ ಒಂದು ಮಿತಿ ಇರಬೇಕು ಎಂದು ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಭಾರತೀಯ ವಾಯುಸೇನೆಯ (ಐಎಎಫ್) ವಿಂಗ್ ಕಮಾಂಡರ್ ಶೀಲಾದಿತ್ಯ ಬೋಸ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಬೈಯಪ್ಪನಹಳ್ಳಿ ಠಾಣಾ ಪೊಲೀಸರಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆ ಪತ್ರಿಕೆಯಲ್ಲಿ ಲೋಪದೋಷ - 34 ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ಬರೆಯಲು ಕೆಪಿಎಸ್ಸಿ ಅವಕಾಶ ಕಲ್ಪಿಸಿದೆ.
ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ವಿರುದ್ಧ ಆರೋಪಪಟ್ಟಿ ಸಲ್ಲಿಕೆ ಸಂಬಂಧ ಅಭಿಯೋಜನೆಗೆ (ಪ್ರಾಸಿಕ್ಯೂಷನ್) ಅನುಮತಿ ನೀಡಿಕೆ ವಿಚಾರವಾಗಿ ರಾಜ್ಯಪಾಲರು ಹಾಗೂ ಲೋಕಾಯುಕ್ತ ಪೊಲೀಸರ ಮಧ್ಯೆ ಹಗ್ಗಾಜಗ್ಗಾಟ ಮುಂದುವರೆದಿದೆ.
ಚಿನ್ನ ಕಳ್ಳ ಸಾಗಣೆ ಪ್ರಕರಣದ ಬಂಧಿತ ಆರೋಪಿ, ಡಿಜಿಪಿ ಅವರ ಮಲ ಮಗಳು ರನ್ಯಾ ರಾವ್ ಹಾಗೂ ಆಕೆಯ ಇಬ್ಬರು ಸ್ನೇಹಿತರ ವಿರುದ್ಧ ಕಂದಾಯ ಗುಪ್ತಚರ ಜಾರಿ ನಿರ್ದೇಶನಾಲಯ (ಡಿಆರ್ಐ)ವು ವಿದೇಶಿ ವಿನಿಮಯ ಸಂರಕ್ಷಣೆ ಹಾಗೂ ಕಳ್ಳ ಸಾಗಣೆ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಕಾಫಿಪೊಸಾ) ಪ್ರಯೋಗಿಸಿದೆ.